ಆ್ಯಪ್ನಗರ

ಎಲ್ಲರೂ ಆಕಾಂಕ್ಷಿಗಳೇ, ಆದರೆ ಸಚಿವ ಸ್ಥಾನ ಸಿಗದ್ದಕ್ಕೆ ನನಗೆ ಅಸಮಾಧಾನವಿಲ್ಲ: ಕರುಣಾಕರ ರೆಡ್ಡಿ

ಬಸನಗೌಡ ಪಾಟೀಲ್‌ ಯತ್ನಾಳ್ ಅವರು ಬಹಿರಂಗವಾಗಿ ಬಿಜೆಪಿ ವಿರುದ್ಧ ನೀಡಿದ ಹೇಳಿಕೆ ಬಗ್ಗೆ ನಾನು ಮಾತನಾಡುವುದಿಲ್ಲ. ನಾನು ಪಕ್ಷದಲ್ಲಿ ನಿಷ್ಠೆಯಿಂದ ಇದ್ದೇನೆ ಕರುಣಾಕರ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.

Agencies 16 Jan 2021, 12:50 pm
ಬಳ್ಳಾರಿ: ಎಲ್ಲರೂ ಸಚಿವ ಸ್ಥಾನದ ಆಕಾಂಕ್ಷಿಗಳೇ. ಬಿಜೆಪಿಯ 80 ಮಂದಿ ಶಾಸಕರೂ ಆಕಾಂಕ್ಷಿಗಳು. ಆದರೆ, ಸಚಿವ ಸ್ಥಾನ ನೀಡದೇ ಇರುವುದಕ್ಕೆ ತಮಗೆ ಯಾವುದೇ ಅಸಮಾಧಾನವಿಲ್ಲ ಎಂದು ಶಾಸಕ ಕರುಣಾಕರ ರೆಡ್ಡಿ ಹೇಳಿದರು.
Vijaya Karnataka Web G Karunakar Reddy


ಬಳ್ಳಾರಿ ನಗರದಲ್ಲಿ ಕೊರೊನಾ ಲಸಿಕೆ ವಿತರಣೆ ಆರಂಭದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೆ. ಆದರೆ, ಸಚಿವ ಸ್ಥಾನ ನೀಡಿಲ್ಲ. ಅದು ಪಕ್ಷದ ವರಿಷ್ಠರ ನಿರ್ಧಾರ. ಅದಕ್ಕೆ ನಾನು ಬದ್ದನಾಗಿದ್ದೇನೆ ಎಂದು ಹೇಳಿದರು.

ಬಸನಗೌಡ ಪಾಟೀಲ್‌ ಯತ್ನಾಳ್ ಬಹಿರಂಗವಾಗಿ ಬಿಜೆಪಿ ವಿರುದ್ಧ ನೀಡಿದ ಹೇಳಿಕೆ ಬಗ್ಗೆ ನಾನು ಮಾತನಾಡುವುದಿಲ್ಲ. ನಾನು ಪಕ್ಷದಲ್ಲಿ ನಿಷ್ಠೆಯಿಂದ ಇದ್ದೇನೆ ಕರುಣಾಕರ ರೆಡ್ಡಿ ಸ್ಪಷ್ಟನೆ ನೀಡಿದರು.

ಜಮೀರ್‌ ಅಹಮದ್‌ ಖಾನ್‌ ಬೆಂಗಳೂರಿನಲ್ಲಿರುವ ಶಾಸಕ. ಬೆಂಗಳೂರು ಅಭಿವೃದ್ಧಿ ವಿಚಾರದಲ್ಲಿ ಕಾಂಗ್ರೆಸ್, ಬಿಜೆಪಿ ಬರಲ್ಲ. ಹೀಗಾಗಿ ಅವರಿಗೆ ಸರಕಾರ ಅನುದಾನ ನೀಡಿದೆ. ಇದರಲ್ಲಿ ಬೇರೇನು ವಿಶೇಷವಿಲ್ಲ ಎಂದು ಮಾಜಿ ಸಚಿವ ಕರುಣಾಕರ ರೆಡ್ಡಿ ಸಮಜಾಯಿಷಿ ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ