ಆ್ಯಪ್ನಗರ

‘ಆರ್ಯವೈಶ್ಯರ ಕೊಡುಗೆ ಅಪಾರ’

ತಾಲೂಕಿನಲ್ಲಿ ವ್ಯಾಪಾರ ಮತ್ತು ಶೈಕ್ಷಣಿಕ ಕ್ಷೇತ್ರಕ್ಕೆ ಆರ್ಯವೈಶ್ಯ ಸಮುದಾಯದವರು ನೀಡಿದ ಕೊಡುಗೆ ಅಪಾರ ಎಂದು ಶಾಸಕ ಎಂ.ಎಸ್‌.ಸೋಮಲಿಂಗಪ್ಪ ಹೇಳಿದರು.

Vijaya Karnataka 4 Jun 2018, 5:00 am
ಸಿರುಗುಪ್ಪ : ತಾಲೂಕಿನಲ್ಲಿ ವ್ಯಾಪಾರ ಮತ್ತು ಶೈಕ್ಷಣಿಕ ಕ್ಷೇತ್ರಕ್ಕೆ ಆರ್ಯವೈಶ್ಯ ಸಮುದಾಯದವರು ನೀಡಿದ ಕೊಡುಗೆ ಅಪಾರ ಎಂದು ಶಾಸಕ ಎಂ.ಎಸ್‌.ಸೋಮಲಿಂಗಪ್ಪ ಹೇಳಿದರು.
Vijaya Karnataka Web BLR-BLY3SGP1
ಸಿರಗುಪ್ಪದ ಕನ್ನಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ಶುಕ್ರವಾರ ಆರ್ಯವೈಶ್ಯಮಂಡಳಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.


ನಗರದ ಕನ್ನಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ಶುಕ್ರವಾರ ಆರ್ಯವೈಶ್ಯ ಮಂಡಳಿ ಹಮ್ಮಿಕೊಂಡಿದ್ದ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಿ ಮಾತನಾಡಿದರು.

ನಗರದಲ್ಲಿ ಆರ್ಯವೈಶ್ಯರು ಅಕ್ಕಿಗಿರಿಣಿ, ವಿವಿಧ ಉದ್ದಿಮೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಆರ್ಥಿಕವಾಗಿ, ಶೈಕ್ಷಣಿಕವಾಗಿ ತಾಲೂಕು ಮುಂದವರಿಯಲು ಅವರೂ ಕಾರಣರಾಗಿದ್ದಾರೆ ಎಂದರು.

ಆರ್ಯವೈಶ್ಯ ಮಂಡಳಿಯ ತಾಲೂಕು ಅಧ್ಯಕ್ಷ ಎಚ್‌.ಜೆ.ಹನುಮಂತಯ್ಯ ಶೆಟ್ಟಿ ಮಾತನಾಡಿ, ಸಮುದಾಯ ವ್ಯಾಪಾರ, ಉದ್ದಿಮೆಯ ಜತೆಗೆ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕಲ್ಪಿಸುತ್ತಿದೆ. ಹೆಚ್ಚಿನ ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಸನ್ಮಾನಿಸಿ, ಪ್ರೋತ್ಸಾಹಿಸಲಾಗುತ್ತಿದೆ ಎಂದರು. ಇದೇ ವೇಳೆ ಶಾಸಕರನ್ನು ಆರ್ಯವೈಶ್ಯ ಸಮುದಾಯದವರು ಸನ್ಮಾನಿಸಿ ಗೌರವಿಸಿದರು. ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ 47 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಸಮಾಜದ ಮುಖಂಡರಾದ ಮುಳ್ಳೂರು ಪಂಪಾಪತಿ ಶೆಟ್ಟಿ, ಬಿ.ಇ.ದೊಡ್ಡಯ್ಯ, ಕ್ರಿಷ್ಣಯ್ಯಶೆಟ್ಟಿ, ಮಧುಸೂದನ ಶೆಟ್ಟಿ, ವೈ.ಮಂಜುನಾಥ ಶೆಟ್ಟಿ, ಸುರೇಶ ಶೆಟ್ಟಿ, ವಿಶ್ವನಾಥ ಶೆಟ್ಟಿ, ಜಯರಾಮ ಶೆಟ್ಟಿ, ಸೀತಾಮಹಾಲಕ್ಷ್ಮಿ, ತಿಪ್ಪಯ್ಯ ಶೆಟ್ಟಿ ಸೇರಿದಂತೆ ಇತರರು ಇದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ