ಆ್ಯಪ್ನಗರ

ವಿಮ್ಸ್ ಸಹಾಯಕ ಆಡಳಿತಾಧಿಕಾರಿ ಮನೆ ಮೇಲೆ ಎಸಿಬಿ ದಾಳಿ

ವಿಮ್ಸ್‌ನ ಸಹಾಯಕ ಆಡಳಿತಾಧಿಕಾರಿ ಟಿ.ದುರುಗಪ್ಪ ಅವರ ಮನೆ ಮತ್ತು ಕಚೇರಿ ಮೇಲೆ ಸೋಮವಾರ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು, ದಾಖಲೆಗಳನ್ನು ಪರಿಶೀಲಿಸಿದರು.

Vijaya Karnataka 10 Jul 2018, 12:00 am
ಬಳ್ಳಾರಿ: ವಿಮ್ಸ್‌ನ ಸಹಾಯಕ ಆಡಳಿತಾಧಿಕಾರಿ ಟಿ.ದುರುಗಪ್ಪ ಅವರ ಮನೆ ಮತ್ತು ಕಚೇರಿ ಮೇಲೆ ಸೋಮವಾರ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು, ದಾಖಲೆಗಳನ್ನು ಪರಿಶೀಲಿಸಿದರು.
Vijaya Karnataka Web BLR-9BLYPH13


ಎಸಿಬಿ ಎಸ್ಪಿ ಪ್ರಸನ್ನ ದೇಸಾಯಿ ನೇತೃತ್ವದ ನಾನಾ ತಂಡಗಳು, ಬಳ್ಳಾರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸವಿಎ. ಎಸಿಬಿ ಅಧಿಕಾರಿಗಳಾದ ಡಿಎಸ್ಪಿ ಅರುಣ್ ಕೋಳೂರು, ಸಿಪಿಐ ಶ್ರೀಧರ ದೊಡ್ಡಿ, ಮಠಪತಿ, ಗೋಪಾಲ್ ಮತ್ತು ಸಿದ್ದಪ್ಪ ಸೇರಿ ಇತರರು ಈ ತಂಡಗಳಲ್ಲಿ ಇದ್ದರು.

ಬಳ್ಳಾರಿ ನಗರದ ಕಪ್ಪಗಲ್ ರಸ್ತೆಯಲ್ಲಿರುವ ಬ್ರಹ್ಮಯ್ಯ ಕಾಲೊನಿಯ ದುರುಗಪ್ಪ ಮನೆ, ವಿಶ್ವೇಶ್ವರಯ್ಯ ನಗರದ ಸೋದರಿ ಮನೆ ಮತ್ತು ಕಚೇರಿಯ ಮೇಲೆ ದಾಳಿ ಮಾಡಿ ಪರಿಶೀಲಿಸಿದ್ದಾರೆ. ಬೆಳಗ್ಗೆ 6ಕ್ಕೆ ಏಕಕಾಲದಲ್ಲಿ ದಾಳಿಮಾಡಿದ ಎಸಿಬಿ ಅಧಿಕಾರಿಗಳು, ಸಂಜೆ 6ರ ವರೆಗೆ ದಾಖಲೆಗಳ ಪರಿಶೀಲನೆ ಮುಂದುವರಿಸಿದರು.

ಟಿ.ದುರುಗಪ್ಪ ಅವರ ಇಲ್ಲಿನ ಮನೆಯಲ್ಲಿ ಕೆಲವು ಮಹತ್ವದ ದಾಖಲೆಗಳು ಸಿಕ್ಕಿವೆ. ಮೂರು ನಿವೇಶನ, ಒಂದು ಮನೆ, ಒಂದು ಕಾರು, ಎರಡು ದ್ವಿಚಕ್ರವಾಹನ, 300 ಗ್ರಾಂ ಚಿನ್ನ ಸೇರಿ ಇತರ ವಸ್ತುಗಳನ್ನು ಅಧಿಕಾರಿಗಳು ಪತ್ತೆಹಚ್ಚಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ