ಆ್ಯಪ್ನಗರ

ಆಟೊ, ಲಾರಿ ಡಿಕ್ಕಿ: ಮೂವರ ಸಾವು

ತಾಲೂಕಿನ ಕಾಕುಬಾಳು ಕ್ರಾಸ್ ಸಮೀಪ ಗುರುವಾರ ರಾತ್ರಿ ಆಟೊ ಮತ್ತು ಲಾರಿ ಮಧ್ಯೆ ಡಿಕ್ಕಿ ಸಂಭವಿಸಿದ್ದರಿಂದ ಮೂವರು ಕಾರ್ಮಿಕರು ಮೃತಪಟ್ಟಿದ್ದು, ಏಳು ಜನರಿಗೆ ಗಾಯಗಳಾಗಿವೆ.

Vijaya Karnataka 20 Jan 2018, 7:43 am
ಹೊಸಪೇಟೆ: ತಾಲೂಕಿನ ಕಾಕುಬಾಳು ಕ್ರಾಸ್ ಸಮೀಪ ಗುರುವಾರ ರಾತ್ರಿ ಆಟೊ ಮತ್ತು ಲಾರಿ ಮಧ್ಯೆ ಡಿಕ್ಕಿ ಸಂಭವಿಸಿದ್ದರಿಂದ ಮೂವರು ಕಾರ್ಮಿಕರು ಮೃತಪಟ್ಟಿದ್ದು, ಏಳು ಜನರಿಗೆ ಗಾಯಗಳಾಗಿವೆ.
Vijaya Karnataka Web auto truck collision three killed
ಆಟೊ, ಲಾರಿ ಡಿಕ್ಕಿ: ಮೂವರ ಸಾವು


ಬಿಹಾರ ಮೂಲದ ರವೀಂದ್ರ ಸಿಂಗ್(40), ದೀಪಕ್(35), ತಾಲೂಕಿನ ಪಾಪಿನಾಯಕನಹಳ್ಳಿ ಗ್ರಾಮದ ಸುರೇಶ್(30)ಮತರು. ಮಂಜುನಾಥ ಗಾದಿಗನೂರು (30), ಪಾಂಡುರಂಗ ಕಾರಿಗನೂರು (35), ದೀರಜ್ (33), ಗೌತಮ್ (40 ಸೇರಿದಂತೆ ಏಳು ಜನ ಕಾರ್ಮಿಕರು ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಬಳ್ಳಾರಿಯ ವಿಮ್ಸ್‌ಗೆ ದಾಖಲಿಸಲಾಗಿದೆ. ಹೊಸಪೇಟೆ-ಬಳ್ಳಾರಿ ಮಾರ್ಗದಲ್ಲಿ ಚತುಷ್ಪಥ ರಸ್ತೆ ನಿರ್ಮಾಣ ಕೆಲಸದಲ್ಲಿ ಇವರೆಲ್ಲ ತೊಡಗಿಸಿಕೊಂಡಿದ್ದರು. ಕೆಲಸ ಮುಗಿದ ಬಳಿಕ ಆಟೊದಲ್ಲಿ ತೋರಣಗಲ್ ಕಡೆಗೆ ಹೊರಟಿದ್ದರು. ಇದೇ ಸಮಯದಲ್ಲಿ ಎದುರಿನಿಂದ ಬಂದ ಲಾರಿ ಆಟೊಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಆಟೊ ನಜ್ಜುಗುಜ್ಜಾಗಿದೆ. ಈ ಬಗ್ಗೆ ಗಾದಿಗನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ