ಆ್ಯಪ್ನಗರ

ಕೋವಿಡ್‌ ಆತಂಕ: ಬಳ್ಳಾರಿಯಲ್ಲಿ ಆಕ್ಸಿಜನ್ ಕೊರತೆ ಇಲ್ಲ, ಡಿಸಿ ನಕುಲ್ ಸ್ಪಷ್ಟನೆ

ಕೋವಿಡ್‌ ಸಂಕಷ್ಟದ ಈ ಸಂದರ್ಭದಲ್ಲಿ ಬಳ್ಳಾರಿಯಲ್ಲಿ ಆಕ್ಸಿಜನ್‌ ಕೊರತೆ ಇಲ್ಲ ಎಂದು ಬಳ್ಳಾರಿಯ ಜಿಲ್ಲಾಧಿಕಾರಿ ನಕುಲ್ ಸ್ಪಷ್ಟನೆ ನೀಡಿದ್ದಾರೆ. ಬಳ್ಳಾರಿಯಲ್ಲಿ ಆಕ್ಸಿಜನ್ ಕೊರತೆ ಇದೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಗಿತ್ತು.

Vijaya Karnataka Web 26 Aug 2020, 2:31 pm
ಬಳ್ಳಾರಿ: ಬಳ್ಳಾರಿ ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆ ಇಲ್ಲ.ಸಮರ್ಪಕವಾದ ಆಕ್ಸಿಜನ್ ಪ್ರಮಾಣ ನಮ್ಮಲ್ಲಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಸ್ಪಷ್ಟಪಡಿಸಿದ್ದಾರೆ.ಆಕ್ಸಿಜನ್ ಸಮರ್ಪಕ ಪೂರೈಕೆಗೆ ಸಂಬಂಧಿಸಿದಂತೆ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದ್ದು,ಯಾವುದೇ ರೀತಿಯ ತೊಂದರೆಯಿಲ್ಲದಂತೆ ಪ್ರತಿನಿತ್ಯ ನಿರ್ವಹಣೆ ಮಾಡಲಾಗುತ್ತಿದೆ ಎಂದಿದ್ದಾರೆ.
Vijaya Karnataka Web Covid-19


ಬಳ್ಳಾರಿ ಜಿಲ್ಲೆಯ ಸರಕಾರಿ ಆಸ್ಪತ್ರೆಗಳಲ್ಲಿ 1500ಕ್ಕೂ ಹೆಚ್ಚು ಆಕ್ಸಿಜನ್ ಬೆಡ್‍ಗಳು ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ 350 ಆಕ್ಸಿಜನ್ ಬೆಡ್‍ಗಳು ಕಾರ್ಯನಿರ್ವಹಿಸುತ್ತಿವೆ. ಕೋವಿಡ್ ಮತ್ತು ನಾನ್ ಕೋವಿಡ್‍ಗಾಗಿ 88 ವೆಂಟಿಲೇಟರ್‍ ಗಳು ಲಭ್ಯವಿವೆ.

ಕಳೆದ ವರ್ಷದ ಭೀತಿ ಮರೆಸಿದ ತುಂಗಭದ್ರಾ: ನದಿ ತೀರದ ಜನಜೀವನ ಸುಭದ್ರ..

ಎಲ್ಲ ರೀತಿಯ ಸಲಕರಣೆಗಳಿಗೆ ಮತ್ತು ಆಕ್ಸಿಜನ್ ಬೆಡ್‍ಗಳಿಗೆ ಯಾವುದೇ ರೀತಿಯ ಆಕ್ಸಿಜನ್ ತೊಂದರೆಯಾಗದಂತೆ ನಿರ್ವಹಿಸುವ ನಿಟ್ಟಿನಲ್ಲಿ ತಾಲೂಕು ಆಸ್ಪತ್ರೆಗಳಲ್ಲಿ ಜಂಬೋ ಸಿಲಿಂಡರ್ಗಳ ಮುಖಾಂತರ, ಜಿಲ್ಲಾಸ್ಪತ್ರೆಯಲ್ಲಿ 6ಕಿಲೋ ಲೀಟರ್‍ನ ಲಿಕ್ವಿಡ್ ಆಕ್ಸಿಜನ್ ಕಂಟೈನರ್ ಮುಖಾಂತರ, ಟ್ರಾಮಾದಲ್ಲಿ 13ಕಿಲೋ ಲೀಟರ್ ಮತ್ತು ವಿಮ್ಸ್‍ನಲ್ಲಿ 19ಕಿಲೋ ಲೀಟರ್ ಟ್ಯಾಂಕ್‍ಗಳನ್ನು ಅಳವಡಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಇದುವರೆಗೆ ಬಳ್ಳಾರಿ ಜಿಲ್ಲೆಯಲ್ಲಿ ಯಾವುದೇ ರೀತಿಯ ಆಕ್ಸಿಜನ್ ತೊಂದರೆಯಾಗದಂತೆ ನಿರ್ವಹಿಸಲಾಗಿದ್ದು, ಮುಂದೆಯೂ ಸಮರ್ಪಕವಾಗಿ ನಿರ್ವಹಿಸಲಾಗುತ್ತದೆ. ಎಲ್ಲ ನಮ್ಮ ಆಕ್ಸಿಜನ್ ಬೆಡ್‍ಗಳಲ್ಲಿ ಸಮರ್ಪಕವಾದ ಆಕ್ಸಿಜನ್ ಪ್ರಮಾಣ ನಮ್ಮಲ್ಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ