ಆ್ಯಪ್ನಗರ

ಜಿಂದಾಲ್‌ನಲ್ಲಿ ಹೆಚ್ಚದ ಕೊರೊನಾ ಪರೀಕ್ಷೆ ಸಂಖ್ಯೆ - ಸಚಿವ ಆನಂದ್‌ ಸಿಂಗ್‌ ಅತೃಪ್ತಿ

ಜಿಲ್ಲೆಯನ್ನು ಬೇರೆ ಜಿಲ್ಲೆಗಳಿಗೆ ಹೋಲಿಕೆ ಮಾಡಿದರೆ ಇನ್ನೂ 15 ದಿನಗಳ ಕಾಲ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ಒದಗಿಸುವ ನಿಟ್ಟಿನಲ್ಲಿ ಯಾವುದೇ ರೀತಿಯ ಸಮಸ್ಯೆ ಇಲ್ಲ ಎಂದು ಅರಣ್ಯ ಸಚಿವ ಆನಂದ್‌ ಸಿಂಗ್‌ ಹೇಳಿದ್ದಾರೆ.

Vijaya Karnataka 18 Jul 2020, 6:47 pm

ಬಳ್ಳಾರಿ: ಜಿಂದಾಲ್‌ನಲ್ಲಿ ಈವರೆಗೆ ಕೇವಲ 5,500 ಸಿಬ್ಬಂದಿಗೆ ಮಾತ್ರ ತಪಾಸಣೆ ಮಾಡಲಾಗಿದೆ. 609 ಜನರಿಗೆ ಸೋಂಕು ದೃಢಪಟ್ಟಿದೆ. ಹಾಗಾಗಿ ಕೂಡಲೇ 10 ಸಾವಿರ ಆ್ಯಂಟಿಜೆನ್‌ ಕಿಟ್‌ಗಳನ್ನು ಜಿಲ್ಲಾಧಿಕಾರಿಗಳ ಮೂಲಕ ಕಂಪನಿಯವರು ಖರೀದಿಸಿ ತಪಾಸಣಾ ಪ್ರಮಾಣ ಹೆಚ್ಚಿಸಬೇಕು ಎಂದು ಅರಣ್ಯ ಸಚಿವ ಆನಂದ್‌ ಸಿಂಗ್‌ ಹೇಳಿದರು.
Vijaya Karnataka Web Anand Singh


ನಗರದ ಜಿ.ಪಂ. ಸಭಾಂಗಣದಲ್ಲಿ ಜಿಲ್ಲೆಯ ಕೊರೊನಾ ಸ್ಥಿತಿಗತಿ ಮತ್ತು ಸೋಂಕು ಪ್ರಮಾಣ ಹರಡುವಿಕೆ ತಡೆಗೆ ಸಂಬಂಧಿಸಿದಂತೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಶನಿವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘‘ಜಿಲ್ಲೆಯನ್ನು ಬೇರೆ ಜಿಲ್ಲೆಗಳಿಗೆ ಹೋಲಿಕೆ ಮಾಡಿದರೆ ಇನ್ನೂ 15 ದಿನಗಳ ಕಾಲ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ಒದಗಿಸುವ ನಿಟ್ಟಿನಲ್ಲಿ ಯಾವುದೇ ರೀತಿಯ ಸಮಸ್ಯೆ ಇಲ್ಲ. ಈಗಾಗಲೇ ಕೊರೊನಾ ಸಂಬಂಧಿಸಿದಂತೆ ಲಾಕ್‌ಡೌನ್‌ ವಿಧಿಸಿದ ಸಂದರ್ಭದಲ್ಲಿ ಜನರು ಅನುಭವಿಸಿದ ಪಾಡು ದೇವರೇ ಬಲ್ಲ ಎಂಬಂತಾಗಿತ್ತು. ಆಂಧ್ರಪ್ರದೇಶಕ್ಕೆ ಬಸ್‌ ಸಂಚಾರ ಬಂದ್‌ ಮಾಡುವುದಕ್ಕೆ ಸಂಬಂಧಿಸಿದಂತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು’’ ಎಂದರು.

ಪ್ಲಾಸ್ಮಾ ಥೆರಪಿ ಯಶಸ್ವಿಯಾಗುತ್ತಿದೆ, ಗುಣವಾದವರು ಸಹಕರಿಸಿ: ಶ್ರೀರಾಮುಲು

ಕೊರೊನಾ ಹೆಚ್ಚುತ್ತಿರುವ ಬಳ್ಳಾರಿ, ಹೊಸಪೇಟೆ, ಸಿರುಗುಪ್ಪ ಮತ್ತು ಸಂಡೂರು ನಗರ ವ್ಯಾಪ್ತಿಯಲ್ಲಿ14 ದಿನಗಳ ಕಾಲ ಲಾಕ್‌ಡೌನ್‌ ವಿಧಿಸುವುದಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಿ, ಸಲಹೆ, ಸೂಚನೆ ಪಡೆಯಲಾಯಿತು.

ಸಭೆಯಲ್ಲಿ ಸಂಸದ ಸಂಗಣ್ಣ ಕರಡಿ, ಸೈಯದ್‌ ನಾಸೀರ್‌ ಹುಸೇನ್‌, ಶಾಸಕರಾದ ಕರುಣಾಕರರೆಡ್ಡಿ, ಸೋಮಶೇಖರ ರೆಡ್ಡಿ, ಕೆ.ಸಿ.ಕೊಂಡಯ್ಯ, ಅಲ್ಲಂ ವೀರಭದ್ರಪ್ಪ, ಸೋಮಲಿಂಗಪ್ಪ, ಎಸ್ಪಿ ಸಿ.ಕೆ.ಬಾಬಾ, ಜಿಪಂ ಸಿಇಒ ಕೆ.ನಿತೀಶ್‌ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ