ಆ್ಯಪ್ನಗರ

ಆನಂದ್ ಸಿಂಗ್ ಅಖಾಡದಲ್ಲಿ ಯಡಿಯೂರಪ್ಪ-ಕುಮಾರಸ್ವಾಮಿ ಮಾತಿನ ಅಬ್ಬರ..!

ಉಪ ಚುನಾವಣೆ ನಡೆಯುವ ಎಲ್ಲಾ 15 ಕ್ಷೇತ್ರಗಳಲ್ಲೂ ಬಿಜೆಪಿ ಗೆಲವು ಸಾಧಿಸಲಿದೆ ಎಂದು ಯಡಿಯೂರಪ್ಪ ಹೇಳಿದ್ದಾರೆ. ನಾನು ಸುಳ್ಳು ಹೇಳುವುದಿಲ್ಲ ಏಕೆಂದರೆ ಈ ಹಿಂದೆ 25 ಎಂಪಿ ಸೀಟ್ ಗೆಲ್ಲುತ್ತೇವೆ ಎಂದಿದ್ದೆ. ಅಷ್ಟೂ ಕ್ಷೇತ್ರಗಳಲ್ಲಿ ಗೆದ್ದಿದ್ದೇವೆ.

Vijaya Karnataka Web 25 Nov 2019, 1:50 pm
ಬಳ್ಳಾರಿ: ವಿಜಯನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಆನಂದ ಸಿಂಗ್ ಈಗಾಗಲೇ ಗೆದ್ದಾಗಿದೆ. ಆದರೆ ಎಷ್ಟು ಅಂತರದಿಂದ ಗೆಲ್ಲುತ್ತಾರೆ ಎಂಬುದಷ್ಟೇ ಚರ್ಚೆ ಆಗಬೇಕಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆತ್ಮವಿಶ್ವಾಸದ ಮಾತುಗಳನ್ನಾಡಿದ್ದಾರೆ. ಜಿಲ್ಲೆಯ ಹೊಸಪೇಟೆ ತಾಲೂಕಿನ ಕಮಲಾಪುರದಲ್ಲಿ ವಿಜಯನಗರ ಕ್ಷೇತ್ರದ ಬಿಜೆಪಿ‌ ಅಭ್ಯರ್ಥಿ ಆನಂದ ಸಿಂಗ್ ಪರ ಪ್ರಚಾರ ಮಾಡಿ ಅವರು ಮಾತನಾಡುತ್ತಿದ್ದರು. ಆನಂದ ಸಿಂಗ್ ಶಾಸಕರಾಗಿ ಆಯ್ಕೆಯಾದರೆ ಅವರನ್ನು ಮಂತ್ರಿ ಮಾಡಿದರೆ ಎಲ್ಲ ಸೌಲಭ್ಯ ನೀಡಲಾಗುವುದು ಎಂದು ಯಡಿಯೂರಪ್ಪ ಹೇಳಿದ್ದಾರೆ.
Vijaya Karnataka Web bellary bjp and jds campaign
ಆನಂದ್ ಸಿಂಗ್ ಅಖಾಡದಲ್ಲಿ ಯಡಿಯೂರಪ್ಪ-ಕುಮಾರಸ್ವಾಮಿ ಮಾತಿನ ಅಬ್ಬರ..!


ಉಪ ಚುನಾವಣೆ ನಡೆಯುವ ಎಲ್ಲಾ 15 ಕ್ಷೇತ್ರಗಳಲ್ಲೂ ಬಿಜೆಪಿ ಗೆಲವು ಸಾಧಿಸಲಿದೆ ಎಂದು ಯಡಿಯೂರಪ್ಪ ಹೇಳಿದ್ದಾರೆ. ನಾನು ಸುಳ್ಳು ಹೇಳುವುದಿಲ್ಲ ಏಕೆಂದರೆ ಈ ಹಿಂದೆ 25 ಎಂಪಿ ಸೀಟ್ ಗೆಲ್ಲುತ್ತೇವೆ ಎಂದಿದ್ದೆ. ಅಷ್ಟೂ ಕ್ಷೇತ್ರಗಳಲ್ಲಿ ಗೆದ್ದಿದ್ದೇವೆ. ಈಗ ಕಾಂಗ್ರೆಸ್ ಮುಕ್ತ ಕರ್ನಾಟಕ ಇಲ್ಲಿಂದಲೇ ಪ್ರಾರಂಭವಾಗಬೇಕು ಎಂದು ಯಡಿಯೂರಪ್ಪ ಹೇಳಿದ್ದಾರೆ. ಆನಂದಸಿಂಗ್ 50 ಸಾವಿರ ಮತಗಳಿಂದ ಗೆಲ್ಲಲಿದ್ದಾರೆ. ಕಾರ್ಯಕರ್ತರು ಮನೆ ಮನೆಗೆ ತೆರಳಿ ಪ್ರಚಾರ ಮಾಡಬೇಕು ಎಂದು ಯಡಿಯೂರಪ್ಪ ಹುರಿದುಂಬಿಸಿದರು.

ಯಡಿಯೂರಪ್ಪ ಭೇಟಿ ಬೆನ್ನಲ್ಲೇ ಜೆಡಿಎಸ್ ಸಮಾವೇಶ

ಯಡಿಯೂರಪ್ಪ ಪ್ರಚಾರ ನಡೆಸುತ್ತಿರುವ ಕಮಲಾಪುರದಲ್ಲೇ ಜೆಡಿಎಸ್ ಸಮಾವೇಶ ಕೂಡಾ ನಡೆಯಿತು. ಈ ವೇಳೆ ಮಾತನಾಡಿದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ಆನಂದ್ ಸಿಂಗ್ ವಿರುದ್ಧ ಹರಿಹಾಯ್ದರು. 'ಆನಂದ್‌ ಸಿಂಗ್ ಮತ್ತೆ ನಿಮ್ಮೆದುರಿಗೆ ಬಂದಿದ್ದಾರೆ. ಕೈ ಬಿಟ್ಟು, ಕಮಲ ಹಿಡಿದು ಬಂದಿದ್ದಾರೆ. ಗಣಿ ಲೂಟಿ ಮಾಡಿದ ಹಣ ನಿಮಗೆ ಕೊಡ್ತಾರೆ, ಅದಕ್ಕೆ ಮತ ಕೊಡಬೇಡಿ' ಎಂದು ಮತದಾರರಲ್ಲಿ ಕುಮಾರಸ್ವಾಮಿ ಮನವಿ ಮಾಡಿದರು. ಆನಂದ್ ಸಿಂಗ್ ನನ್ನ ಬೆನ್ನಿಗೆ ಚೂರಿ ಹಾಕಿದ್ದಾರೆ. ನನ್ನ ಬೆನ್ನಿಗೆ ಚೂರಿ ಹಾಕಿದ ಆನಂದ್ ಸಿಂಗ್, ಬಿಜೆಪಿ ಜತೆ ಹೋಗಿದ್ದಾರೆ ಎಂದು ಎಚ್ಡಿಕೆ ಕಿಡಿಕಾರಿದರು.

ಬಳಿಕ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ, ರೈತರ ಸಾಲ ಮನ್ನಾ, ಬೀದಿ ಬದಿ ವ್ಯಾಪಾರಿಗಳ ಸಾಲಮನ್ನಾ ಸೇರಿದಂತೆ ಎಚ್ಡಿಕೆ ಅಧಿಕಾರಾವಧಿಯ ಹಲವು ಯೋಜನೆಗಳನ್ನು ಸ್ಮರಿಸಿದರು. ಉತ್ತರ ಕರ್ನಾಟಕದಲ್ಲಿ ಪ್ರವಾಹ ಪರಿಸ್ಥಿತಿ ಎದುರಾದಾಗಲೂ ಬಿಜೆಪಿ ಸರಕಾರ ಸ್ಪಂದಿಸಿಲ್ಲ, ಆದ್ರೆ, ಕುಮಾರಸ್ವಾಮಿ ಜನರ ಬಳಿ ಹೋದರು ಎಂದು ಎಚ್‌.ಕೆ. ಕುಮಾರಸ್ವಾಮಿ ವಾದಿಸಿದರು.

ರಾಜ್ಯ ಉಪಚುನಾವಣೆ: ವಿಜಯನಗರ ಕ್ಷೇತ್ರದಲ್ಲಿ ಸಿಎಂ, ಮಾಜಿ ಸಿಎಂ ಅಬ್ಬರದ ಪ್ರ ಚಾರ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ