ಆ್ಯಪ್ನಗರ

ಬಳ್ಳಾರಿ ರಿಪಬ್ಲಿಕ್‌ ಇಬ್ಭಾಗಕ್ಕೆ ಗಣಿಧಣಿಗಳ ತೀವ್ರ ವಿರೋಧ: ಬಿಎಸ್‌ವೈಗೆ ಮತ್ತೊಂದು ಸಂಕಷ್ಟ

ಈಗಾಗಲೇ ಹೊಸ ಜಿಲ್ಲೆಗಳಾಗಿರೋದನ್ನ ನಾವು ನೋಡಿದ್ದೇವೆ. ಅಭಿವೃದ್ಧಿ ಕುಂಠಿತವಾಗುತ್ತದೆ. ಈಗ ಈ ಬಗ್ಗೆ ಹೆಚ್ಚು ಮಾತನಾಡಿ, ಮುಖ್ಯಮಂತ್ರಿಗಳಿಗೆ ಮುಜುಗರ ಮಾಡಲ್ಲ. ಹಲವರು ಈ ಬಗ್ಗೆ ಅಧ್ಯಯನ ಮಾಡಲಿದ್ದಾರೆ ಎಂದು ಎಂದು ಸಚಿವ ಶ್ರೀರಾಮುಲು ತಿಳಿಸಿದರು.

Vijaya Karnataka Web 20 Sep 2019, 4:19 pm
ಬಳ್ಳಾರಿ: ಬಳ್ಳಾರಿ ಜಿಲ್ಲೆಯನ್ನು ಇಬ್ಭಾಗ ಮಾಡಿ ವಿಜಯನಗರ ಜಿಲ್ಲೆಯನ್ನಾಗಿ ರಚಿಸುವ ಪ್ರಸ್ತಾವಕ್ಕೆ ಬಳ್ಳಾರಿ ಗಣಿಧಣಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಬಿಜೆಪಿ ಶ್ರೀರಾಮುಲು, ಸೋಮಶೇಖರ್‌ ಅವರು ಬಳ್ಳಾರಿ ಜಿಲ್ಲೆ ಇಬ್ಭಾಗಕ್ಕೆ ಪರೋಕ್ಷವಾಗಿ ವಿರೋಧ ವ್ಯಕ್ತಪಡಿಸಿದ್ದಾರೆ.
Vijaya Karnataka Web ಶ್ರೀರಾಮುಲು
ಶ್ರೀರಾಮುಲು


ಈ ವಿಷಯವಾಗಿ ಬಿಜೆಪಿಯಲ್ಲಿ ಈಗ ಅಸಮಾಧಾನ ಸ್ಫೋಟಗೊಂಡಿದೆ.

ಬಿಜೆಪಿ ಪಾಲಿನ ನೆಚ್ಚಿನ ನಾಯಕ ಎಂದೇ ಬಿಂಬಿತರಾಗುತ್ತಿರುವ ಬಿ ಶ್ರೀರಾಮುಲು ಬಳ್ಳಾರಿ ಜಿಲ್ಲೆ ವಿಭಜನೆಗೆ ಪರೋಕ್ಷವಾಗಿ ವಿರೋಧ ವ್ಯಕ್ತಪಡಿಸಿದ್ದಾರೆ.

ಒಬ್ಬರ ಸ್ವಾರ್ಥಕ್ಕಾಗಿ ಬಳ್ಳಾರಿ ಇಬ್ಭಾಗ ಮಾಡಿ ವಿಜಯನಗರ ಜಿಲ್ಲೆ ಸ್ಥಾಪನೆ: ಸೋಮಶೇಖರ್‌ ರೆಡ್ಡಿ ಕಿಡಿ

ಸಚಿವ ಸಂಪುಟ ಚರ್ಚೆ ಹಾಗೂ ಶಿಫಾರಸು ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡುವುದಿಲ್ಲ. ನಾನು ಕೆಲವು ಗೌಪ್ಯ ವಿಚಾರ ಬಹಿರಂಗವಾಗಿ ಮಾತಡಲ್ಲ. ಈಗ ಈ ಬಗ್ಗೆ ಪರ ವಿರೋಧ ಚರ್ಚೆಯಾಗುತ್ತಿದೆ ಎಂದು ಹೇಳಿದರು.

ಶನಿವಾರ ನಾನು ಕ್ಯಾಬಿನೆಟ್ ನಲ್ಲಿ ಈ ಬಗ್ಗೆ ಮಾತನಾಡುವೆ. ನಾನು ಈಗಾಗಲೇ ಸಿಎಂ ಬಳಿ ಮಾತನಾಡುವ ಪ್ರಯತ್ನ ಮಾಡಿದ್ದೇನೆ. ಆದರೆ, ಸಾಧ್ಯವಾಗಿಲ್ಲ ಎಂದು ಶ್ರೀರಾಮುಲು ಹೇಳೀದರು.

ನನ್ನ ವಯಕ್ತಿಕ ಅಭಿಪ್ರಾಯ ಒಟ್ಟಾಗಿರಬೇಕು. ಬಳ್ಳಾರಿ ಜಿಲ್ಲೆಯಲ್ಲಿ ನಾವೆಲ್ಲ ಒಂದಾಗಿರಬೇಕು. ನಾವು ಇಷ್ಟು ದಿನ ಕೆಲಸ ಮಾಡಿದ್ದೇವೆ. ಬಳ್ಳಾರಿ ಅಖಂಡ ಇದ್ದರೆ ಅಭಿವೃದ್ಧಿ ಸಾಧ್ಯವಾಗತ್ತೆ ಎಂದು ಅಭಿಪ್ರಾಯ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ