ಆ್ಯಪ್ನಗರ

ಬಳ್ಳಾರಿ: ಮತ್ತೊಂದು ಕೊರೊನಾ ಪಾಸಿಟಿವ್‌ ಪತ್ತೆ, ಗಣಿ ನಾಡಲ್ಲಿ ಆತಂಕ

ಸೋಂಕಿತ ವ್ಯಕ್ತಿಯನ್ನು ಕೋವಿಡ್ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 16ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಇದರಲ್ಲಿ ಈಗಾಗಲೇ 12 ಜನ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ.

Vijaya Karnataka Web 12 May 2020, 2:33 pm
ಬಳ್ಳಾರಿ: ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಕಂಪ್ಲಿ ಸಮೀಪದ ಶಿಬಿರದಿನ್ನಿ(ಮಾರುತಿನಗರ)ದ 30 ವರ್ಷದ ವ್ಯಕ್ತಿಗೆ ಮಹಾಮಾರಿ ಕೊರೊನಾ ಸೋಂಕು ತಗುಲಿದೆ.
Vijaya Karnataka Web ಕೊರೊನಾ
ಕೊರೊನಾ


ಬೆಂಗಳೂರಿಂದ ಕಂಪ್ಲಿಗೆ ಸರಕಾರಿ ಬಸ್‌ನಲ್ಲಿ ಬಂದಿದ್ದ ವ್ಯಕ್ತಿಗೆ ಕೊರೊನಾ ದೃಢಪಟ್ಟಿದೆ.

ಬೆಂಗಳೂರಿನಿಂದ ಗಂಗಾವತಿ ಮೂಲಕ ಕಂಪ್ಲಿ ಪಟ್ಟಣಕ್ಕೆ ತೆರಳಿದ್ದ ಈಗ ವ್ಯಕ್ತಿ. ತಾಯಿ, ಪತ್ನಿಯೊಂದಿಗೆ ಕಂಪ್ಲಿಗೆ ಆಗಮಿಸಿದ್ದು, ಹೋಂ ಕ್ವಾರಂಟೈನ್ ಕೂಡಾ ಆಗಿರಲಿಲ್ಲ.

ಆತನ ಜೊತೆ ಸರಕಾರಿ ಬಸ್‌ನಲ್ಲಿ ಬಂದವರನ್ನು ಸಹ ಪ್ರಯಾಣಿಕರನ್ನ ಕ್ವಾರಂಟೈನ್ ಮಾಡಲು ಸಿದ್ಧತೆ ನಡೆಸಲಾಗಿದೆ.

ಸೋಂಕಿತ ವ್ಯಕ್ತಿಯನ್ನು ಕೋವಿಡ್ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 16ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಇದರಲ್ಲಿ ಈಗಾಗಲೇ 12 ಜನ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ