ಆ್ಯಪ್ನಗರ

ಸಂತ್ರಸ್ತರಿಗೆ ರೇವಣ್ಣ ಬಿಸ್ಕತ್ ಎಸೆದಿದ್ದನ್ನು ಮರೆತಿದ್ದಾರೆ: ಎಚ್‌ಡಿಕೆಗೆ ಶ್ರೀರಾಮುಲು ಟಾಂಗ್

ಸಿಎಂ ಬಿಎಸ್‌ ಯಡಿಯೂರಪ್ಪ ಕೇಂದ್ರದಿಂದ ಅನುದಾನ ತಂದು ಆಡಿದ ಮಾತು ಉಳಿಸಿಕೊಳ್ಳಲಿ ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಹೇಳಿದ್ದರು.

Vijaya Karnataka Web 11 Aug 2019, 3:30 pm
ಬಳ್ಳಾರಿ: ಮಾಜಿ ಸಚಿವ ಎಚ್ ಡಿ ರೇವಣ್ಣ ಅವರು ನೆರೆ ಸಂತ್ರಸ್ತರಿಗೆ ಬಿಸ್ಕತ್ ಎಸೆದಿದ್ದನ್ನು ಮರೆತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಬಿಜೆಪಿ ಶಾಸಕ ಬಿ ಶ್ರೀರಾಮುಲು ಟಾಂಗ್ ನೀಡಿದ್ದಾರೆ.
Vijaya Karnataka Web sriramulu


ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಕುಮಾರಸ್ವಾಮಿಯಿಂದ ಪಾಠ ಕಲಿಯುವ ಅಗತ್ಯ ಇಲ್ಲ. ನೆರೆ ಬಂದಾಗ ರೇವಣ್ಣ ಪೇಪರ್ ಓದಿದ್ದರು. ಅಷ್ಟೆ ಅಲ್ಲದೆ, ನೆರೆ ಸಂತ್ರಸ್ತರಿಗೆ ಬಿಸ್ಕತ್ ಎಸೆದಿದ್ದನ್ನು ಮರೆತಿದ್ದಾರೆ ಎಂದು ಕುಟುಕಿದರು.

ಪ್ರವಾಹ ಕುರಿತು ಬಾದಾಮಿ ವಿಚಾರದಲ್ಲಿ ರಾಜಕೀಯ ಮಾಡುವುದಿಲ್ಲ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಪುತ್ರ ಯತೀಂದ್ರ ಅವರನ್ನು ಬಾದಾಮಿಗೆ ಕಳುಹಿಸಿದ್ದಾರೆ. ನಾಳೆ ನಾಡಿದ್ದು ನಾನು ಕೂಡ ಬಾದಾಮಿಗೆ ಭೇಟಿ ನೀಡಿ ನೆರೆ ಪರಸ್ಥಿತಿ ವೀಕ್ಷಿಸುತ್ತೇನೆ ಎಂದು ಹೇಳಿದರು.

ಏಕಾಂಗಿ ಸಿಎಂ ಕೇಂದ್ರದಿಂದ ಅನುದಾನ ತರಲಿ: ಎಚ್‌ಡಿಕೆ

ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ತುರ್ತಾಗಿ ಕನಿಷ್ಠ ನಾಲ್ಕೈದು ಸಾವಿರ ಕೋಟಿ ರೂ. ಪರಿಹಾರ ನೀಡಬೇಕು. ಸಿಎಂ ಬಿಎಸ್‌ ಯಡಿಯೂರಪ್ಪ ಅನುದಾನ ತಂದು ಆಡಿದ ಮಾತು ಉಳಿಸಿಕೊಳ್ಳಲಿ ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಹೇಳಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ