ಆ್ಯಪ್ನಗರ

ವಿಜಯನಗರ ಸ್ವರ್ಗದಂಥ ನಗರ: ಯಡಿಯೂರಪ್ಪ

ಉತ್ಸವದ ಅಂಗವಾಗಿ ಹತ್ತು ದಿನಗಳ ಕಾಲ ಚಾಲುಕ್ಯ, ಹೊಯ್ಸಳ ಶೈಲಿ ನಾನಾ ಕಾರ್ಯಕ್ರಮ ಆಯೋಜಿಸಲಾಗಿದೆ. ನಾಲ್ಕು ವೇದಿಕೆಗಳಲ್ಲಿ ವಿವಿಧ ಜಿಲ್ಲೆ, ದೇಶ ಮತ್ತು ವಿದೇಶದಿಂದ ಪ್ರವಾಸಿಗರು ಆಗಮಿಸಿದ್ದಾರೆ

Vijaya Karnataka Web 10 Jan 2020, 9:20 pm
ಬಳ್ಳಾರಿ: ಭಾರತದ ಚಿರಿತ್ರೆಯಲ್ಲಿ ವಿಜಯನಗರದ ಸಾಮ್ರಾಜ್ಯದ ಕಾಲ ಅತ್ಯಂತ ವೈಭವವಾಗಿದೆ. ಇಲ್ಲಿನ ಕಲ್ಲುಗಳು ಗತ ವೈಭವನ್ನು ಸಾರಿ ಸಾರಿ ಹೇಳುತ್ತಿವೆ. ಸ್ವರ್ಗದಂತಹ ನಗರ ಎಂದರೆ ಅದು ವಿಜಯನಗರ ಎಂದು ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಹೇಳಿದರು.
Vijaya Karnataka Web ಯಡಿಯೂರಪ್ಪ
ಯಡಿಯೂರಪ್ಪ


ಹಂಪಿ ಉತ್ಸವ ಉದ್ಘಾಟನಾ ಸಮಾರಂಭದಲ್ಲಿ ಸಿಎಂ ಯಡಿಯೂರಪ್ಪ ಭಾಷಣ ಮಾಡಿದರು.

ಭಾರತೀಯ ಇತಿಹಾಸದಲ್ಲಿ ಹಂಪಿಯ ಇತಿಹಾಸಕ್ಕೆ ವಿಶಿಷ್ಟ ಸ್ಥಾನವಿದೆ. ಸಾಂಸ್ಕ್ರತಿಕ, ಧಾರ್ಮಿಕದಿಂದ ವಿಜಯನಗರ ಹಂಪಿ ಮಹತ್ವ ಪಡೆದಿದೆ. ಸುಮಾರು 550 ವರ್ಷಗಳ ಇತಿಹಾಸವಿದೆ. ಹಂಪಿ ವಿಶ್ವ ಪಾರಂಪರಿಕ ತಾಣವಾಗಿ ಗುರುತಿಸಿಕೊಂಡಿದೆ. ಇದನ್ನು ಜೀವಂತವಾಗಿರಿಸಲು ರಾಜ್ಯ ಸರಕಾರ ಮೂರು ದಶಕಗಳಿಂದ ಉತ್ಸವ ಆಚರಿಸುತ್ತಿದೆ ಎಂದರು.

ಹಂಪಿ ಅಭಿವೃದ್ಧಿಗಾಗಿ ಸರಕಾರ ಅನೇಕ ಯೋಜನೆ ರೂಪಿಸಿ ಕಾರ್ಯನುಷ್ಠನಗೊಳಿಸಲು ಮುಂದಾಗಿದೆ ಎಂದರು.

ಕನ್ನಡ ನಾಡು ಹಿಂದೆಂದು ಕಾಣದ ಪ್ರವಾಹ ಕಂಡಿದೆ. ಲಕ್ಷಾಂತರ ಜನರು ನಿರಾಶ್ರಿತರಾಗಿದ್ದಾರೆ. ಇದಕ್ಕೆ ಸ್ಪಂದಿಸಲು ರಾಜ್ಯ ಸರಕಾರ ಮುಂದಾಗಿದೆ. ರೈತರ ಅಭಿವೃದ್ಧಿಗಾಗಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮನ್ ಯೋಜನೆ ಜಾರಿಗೊಳಿಸಿದೆ. ನನ್ನ ಆದ್ಯತೆ ನೀರಾವರಿ ಯೋಜನೆಯಾಗಿದೆ. ಇನ್ನೂ ಎರಡು ವರ್ಷ ನೀರಿನ ಸಮಸ್ಯೆಯಿಲ್ಲ ಎಂದು ಯಡಿಯೂರಪ್ಪ ತಿಳಿಸಿದರು.

ರೈತರ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನೀಡಬೇಕೆನ್ನುವ ಉದ್ದೇಶವಿದೆ. ಇದಕ್ಕೆ ಸಹಕಾರಿಯಾಗುವಂತ ಯೋಜನೆಗಳನ್ನು ಒಳಗೊಂಡು ಮಾ 5ರಂದು ಬಜೆಟ್ ನಲ್ಲಿ ಜಾರಿಗೊಳಿಸಲು ಚಿಂತನೆ ನಡೆಸಿದೆ. ನಾಡಿನ ಸಾಂಸ್ಕೃತಿಕ ಪರಂಪರೆ ಉತ್ಸವ ಆಚರಿಸಲಾಗುತ್ತಿದೆ ಎಂದು ಸಿಎಂ ತಿಳಿಸಿದರು.

ರಾಜ್ಯ ಪ್ರವಾಸ ಕೇಂದ್ರಗಳಿಗೆ ದೇಶ, ವಿದೇಶ ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ಡಾ.ಸುಧಾಮೂರ್ತಿ ಅವರ ನೇತೃತ್ವದಲ್ಲಿ ಸಮಿತಿ ರಚಿಸಿದ್ದು, ಸರಕಾರದಿಂದ ಹೆಚ್ಚಿನ ಅನುದಾನ ನೀಡಲಾಗುವುದು ಎಂದು ಬಿಎಸ್‌ ಯಡಿಯೂರಪ್ಪ ಸ್ಪಷ್ಟಪಡಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ