ಆ್ಯಪ್ನಗರ

‘ದೇಶಾದ್ಯಂತ ಮಕ್ಕಳ ಹಕ್ಕುಗಳ ಜಾಗೃತಿ’

ದೇಶಾದ್ಯಂತ ಮಕ್ಕಳ ಹಕ್ಕುಗಳ ಜಾಗೃತಿ ಇದೀಗ ಮೂಡುತ್ತಿದೆ. ಇದನ್ನು ಮನಗಂಡಿರುವ ರಾಜ್ಯ ಮತ್ತು ಕೇಂದ್ರ ಸರಕಾರ ಮಕ್ಕಳ ಸಹಾಯವಾಣಿಯೊಂದಿಗೆ ಗೆಳೆತನ ಕಾರ್ಯಕ್ರಮ ರೂಪಿಸಿವೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್‌.ಬಿ. ಹಂದ್ರಾಳ್‌ ಹೇಳಿದರು.

Vijaya Karnataka 21 Nov 2018, 5:00 am
ಬಳ್ಳಾರಿ : ದೇಶಾದ್ಯಂತ ಮಕ್ಕಳ ಹಕ್ಕುಗಳ ಜಾಗೃತಿ ಇದೀಗ ಮೂಡುತ್ತಿದೆ. ಇದನ್ನು ಮನಗಂಡಿರುವ ರಾಜ್ಯ ಮತ್ತು ಕೇಂದ್ರ ಸರಕಾರ ಮಕ್ಕಳ ಸಹಾಯವಾಣಿಯೊಂದಿಗೆ ಗೆಳೆತನ ಕಾರ್ಯಕ್ರಮ ರೂಪಿಸಿವೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್‌.ಬಿ. ಹಂದ್ರಾಳ್‌ ಹೇಳಿದರು.
Vijaya Karnataka Web BLR-BLY 20 MANJU 05


ಚೈಲ್ಡ್‌ಲೈನ್‌ ಸೇ ದೋಸ್ತಿ ಕಾರ್ಯಕ್ರಮದ ನಿಮಿತ್ತ ನಗರದ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಮಕ್ಕಳ ಕಲ್ಯಾಣ ಸಮಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷ ಣಾ ಘಟಕ, ಪೋಲೀಸ್‌ ಇಲಾಖೆ, ಸಾರ್ವಜನಿಕ ಶಿಕ್ಷ ಣ ಇಲಾಖೆ, ಕಾರ್ಮಿಕ ಇಲಾಖೆ, ಕಾರ್ಡ್‌ ಚೈಲ್ಡ್‌ಲೈನ್‌ ನೋಡಲ್‌ ಸಂಸ್ಥೆ, ಬಿಡಿಡಿಎಸ್‌ ಚೈಲ್ಡ್‌ಲೈನ್‌ ಸಹಯೋಗ ಸಂಸ್ಥೆ, ಮತ್ತು ರಾಷ್ಟ್ರೀಯ ಬಾಲಕಾರ್ಮಿಕ ಯೋಜನೆ ಸಂಯೋಜನೆಯಲ್ಲಿ ಬಿಡಿಡಿಎಸ್‌ ಸಭಾಂಗಣದಲ್ಲಿ ಮಂಗಳವಾರ ಮಕ್ಕಳ ಕಾರ್ಯಕ್ರಮ ಸಮಾರೋಪದಲ್ಲಿ ಮಾತನಾಡಿದರು. ಸರಕಾರದ ಯೋಜನೆಗಳು ಮತ್ತು ಕಾನೂನಿನ ನೆರವಿನಿಂದ ಇಂದು ಕೂಲಿಕಾರರ ಮಕ್ಕಳು ಉನ್ನತ ಹುದ್ದೆಗೆ ಏರಲು ವಿಪುಲ ಅವಕಾಶಗಳಿವೆ. ಮಕ್ಕಳ ಹಕ್ಕುಗಳ ಸಂರಕ್ಷ ಣೆಗೆ ಇಂದು ಸ್ವಿಕರಿಸಿರುವ ಪ್ರತಿಜ್ಞೆಯನ್ನು ಎಲ್ಲರೂ ಆಚರಣೆಗೆ ತರಬೇಕು. ಜಿಲ್ಲೆಯಲ್ಲಿ ಮಕ್ಕಳ ಸಮಸ್ಯೆಗಳನ್ನು ಬಗೆಹರಿಸಲು ಎಲ್ಲ ಇಲಾಖೆಗಳು, ಅಧಿಕಾರಿಗಳು ಹಾಗೂ ಸಂಘ ಸಂಸ್ಥೆಗಳು ಒಟ್ಟಾಗಿ ಕಾರ್ಯನಿರ್ವಹಿಸಿದಾಗ ಜಿಲ್ಲೆಯಲ್ಲಿರುವ ಮಕ್ಕಳ ಸಮಸ್ಯೆಗಳನ್ನು ಸಂಪೂರ್ಣವಾಗಿ ನಿವಾರಿಸಲು ಸಾಧ್ಯವಾಗುತ್ತದೆ. ಮತ್ತು ವಿಶೇಷ ಮಕ್ಕಳಿಗೆ ಹೆಚ್ಚಿನ ಗಮನವನ್ನು ಹರಿಸಿ ಅವರಿಗೆ ಪ್ರೋತ್ಸಹ ನೀಡುವ ಮೂಲಕ ಮೂಲಕ ಅವರನ್ನು ಸ್ವಾವಲಂಭಿಗಳಾಗಿ ಜೀವನ ಸಾಗಿಸಲು ಎಲ್ಲರೂ ಶ್ರಮಿಸಬೇಕೆಂದು ಎಂದರು.

ಫಾದರ್‌ ಚೌರಪ್ಪ ಅಧ್ಯಕ್ಷ ತೆ ವಹಿಸಿ, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷೆ ವಿಜಯಲಕ್ಷ್ಮಿ, ಮಕ್ಕಳ ಸಹಾಯವಾಣಿ(ಚೈಲ್ಡ್‌ಲೈನ್‌) ಜಿಲ್ಲಾ ಸಂಯೋಜಕ ಮಂಜುನಾಥ ಮಾತನಾಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ನಾಗೇಶ್‌ ಬಿಲ್ವ, ಕಾರ್ಮಿಕ ನಿರೀಕ್ಷ ಕ ರವಿದಾಸ್‌, ಮಕ್ಕಳ ವಿಶೇಷ ಪೊಲೀಸ್‌ ಘಟಕದ ಲಲಿತಮ್ಮ, ಪದ್ಮಾವತಿ, ಚೈಲ್ಡ್‌ಲೈನ್‌-ಕಾರ್ಡ್‌ ನೋಡಲ್‌ ಸಂಸ್ಥೆಯ ನಿರ್ದೇಶಕ ಬಿ.ಡಿ.ಗೌಡ ಜಿಲ್ಲಾ ಬಾಲಕಾರ್ಮಿಕ ಯೋಜನೆಯ ನಿರ್ದೇಶಕ ಮೌನೇಶ್‌, ಸರಕಾರಿ ಕಿವುಡ ಮಕ್ಕಳ ಪಾಠಶಾಲೆಯ ಮುಖ್ಯಗುರು ಗೋವಿಂದಪ್ಪ, ನವಜೀವನ ಸಂಸ್ಥೆಯ ಸಿಸ್ಟರ್‌ ಪ್ರಮೀಳಾ ಮತ್ತಿತರರಿದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ