ಆ್ಯಪ್ನಗರ

ಜಮೀರ್‌ ಬಳ್ಳಾರಿಗೆ ಬರಲಿ, ಆಮೇಲೆ ನೋಡೋಣ ! ಸೋಮಶೇಖರ್ ರೆಡ್ಡಿ ಆಹ್ವಾನ

ಪೌರತ್ವ ತಿದ್ದುಪಡಿ ಕಾಯ್ದೆ ಪರವಾಗಿ ನಡೆಯುತ್ತಿದ್ದ ಸಮಾವೇಶದಲ್ಲಿ ಮುಸ್ಲಿಮರ ಕುರಿತಾಗಿ ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ವಿವಾದಾತ್ಮಕ ಹೇಳಿಕೆ ನೀಡಿರುವುದನ್ನು ಖಂಡಿಸಿ ಸೋಮವಾರ ಮಾಜಿ ಸಚಿವ ಜಮೀರ್ ಅಹಮ್ಮದ್ ಖಾನ್ ಬಳ್ಳಾರಿಯಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

Vijaya Karnataka Web 12 Jan 2020, 7:22 pm
ಬಳ್ಳಾರಿ: ಪೌರತ್ವ ತಿದ್ದುಪಡಿ ಕಾಯ್ದೆ ಪರ ಸಮಾವೇಶದಲ್ಲಿ ಮುಸ್ಲಿಮರ ಕುರಿತಾಗಿ ವಿವಾದಾತ್ಮಕ ಹೇಳಿಕೆ ನೀಡಿರುವ ಬಿಜೆಪಿ ಶಾಸಕರ ಸೋಮಶೇಖರ್‌ ರೆಡ್ಡಿ ವಿರುದ್ಧವಾಗಿ ಮಾಜಿ ಸಚಿವ ಜಮೀರ್ ಅಹಮ್ಮದ್ ಖಾನ್ ಸೋಮವಾರ ಬಳ್ಳಾರಿಯಲ್ಲಿ ಪ್ರತಿಭಟನೆ ನಡೆಸಲಿದ್ದು ಬಳ್ಳಾರಿಗೆ ಬಂದರೆ ನಮ್ಮದೇನೂ ಅಭ್ಯಂತರವಿಲ್ಲ ಎಂದಿದ್ದಾರೆ ಸೋಮಶೇಖರ್.
Vijaya Karnataka Web congress leader zameer ahmed khan protest against bjp mla somashekara reddy
ಜಮೀರ್‌ ಬಳ್ಳಾರಿಗೆ ಬರಲಿ, ಆಮೇಲೆ ನೋಡೋಣ ! ಸೋಮಶೇಖರ್ ರೆಡ್ಡಿ ಆಹ್ವಾನ


ಜನವರಿ 5 ರಂದು ಬಳ್ಳಾರಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ್ದ ಸೋಮಶೆಖರ್ ರೆಡ್ಡಿ “ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ಮಾಡುವವರನ್ನು ಬಂದೂಕಿನಿಂದ ಗುಂಡಿಕ್ಕಿದರೆ ಜನಸಂಖ್ಯೆಯಾದರೂ ಕಡಿಮೆಯಾಗುತಿತ್ತು” ಎಂಬ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದರು.

ಸೋಮಶೇಖರ್ ರೆಡ್ಡಿ ಹೇಳಿಗೆ ವ್ಯಾಪಕ ಖಂಡನೆ ವ್ಯಕ್ತವಾಗಿದ್ದರು. ಈ ಹೇಳಿಕೆ ಬೆನ್ನಲ್ಲೇ ಮಾಜಿ ಸಚಿವ ಜಮೀರ್ ಅಹಮ್ಮದ್ ಖಾನ್ ಸೋಮಶೇಖರ್ ರೆಡ್ಡಿಗೆ ಮಾನ ಮರ್ಯಾದೆ ಇದ್ಯಾ ಎಂದು ಹರಿಹಾಯ್ದಿದ್ದರು.

‘ಸೋಮಶೇಖರ್‌ ರೆಡ್ಡಿಗೆ ಮಾನ ಮರ್ಯಾದೆ ಇದೆಯಾ ’ - ಗರಂ ಆದ್ರು ಜಮೀರ್

ಸೋಮವಾರ ಹೇಳಿಕೆ ಖಂಡಿಸಿ ಬಳ್ಳಾರಿಯಲ್ಲಿ ಪ್ರತಿಭಟನೆ ಮಾಡಲು ಜಮೀರ್ ಮುಂದಾಗಿದ್ದು ಈ ಹಿನ್ನೆಲೆಯಲ್ಲಿ ಭದ್ರತೆ ನೀಡುವಂತೆ ಬಳ್ಳಾರಿ ಪೊಲೀಸ್ ವರಿಷ್ಠಾಧಿಕಾರಿಗೆ ಪತ್ರ ಬರೆದಿದ್ದಾರೆ.

ಸೋಮವಾರದ ಪ್ರತಿಭಟನೆ ಕುರಿತಾಗಿ ಮಾತನಾಡಿದ ಸೋಮಶೇಖರ್ ರೆಡ್ಡಿ, ನಾನು ದೇಶದ್ರೋಹಿಗಳ ವಿರುದ್ಧ ಮಾತಾಡಿದ್ದು. ಆದರೆ ಅದನ್ನು ಕಾಂಗ್ರೆಸ್ ಮುಖಂಡರು ತಪ್ಪಾಗಿ ಅರ್ಥೈಸಿಕೊಳ್ಳುತ್ತಿದ್ದಾರೆ. ಜಮೀರ್‌ ಅಹ್ಮದ್ ಬೆಂಗಳೂರಿನಲ್ಲಿ ತನ್ನ ಇಮೇಜ್ ಹೆಚ್ಚಿಸಿಕೊಳ್ಳಲು ಈ ರೀತಿ ಮಾಡುತ್ತಿದ್ದಾರೆ. ಬಳ್ಳಾರಿಯಲ್ಲಿ ನಾವೆಲ್ಲ ಅಣ್ಣತಮ್ಮಂದಿರ ರೀತಿ ಇದ್ದೇವೆ. ಕಾನೂನು ಮುಂದೆ ಯಾರೂ ದೊಡ್ಡವರು ಅಲ್ಲ ಎಂದು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಜಮೀರ್ ಪರವಾನಿಗೆ ಇಲ್ಲದೆ ಪ್ರತಿಭಟನೆ ಮಾಡುವ ವಿಚಾರ ಗೊತ್ತಾಯಿತು. ಜಮೀರ್ ಬಳ್ಳಾರಿಗೆ ಬರಲಿ ನಮ್ಮದೇನು ಅಭ್ಯಂತರವಿಲ್ಲ. ಮನೆಗೆ ಮುಂದೆ ಧರಣಿ ಮಾಡಿದರೆ ಎಂಬ ಪ್ರಶ್ನೆಗೆ

ಮೊದಲು ಜಮೀರ್‌ ಬಳ್ಳಾರಿಗೆ ಬರಲಿ ಆಮೇಲೆ ನೋಡೋಣ. ನಮ್ಮ ಮನೆಗೆ ಬಂದು ಟಿಫಿನ್ ಮಾಡಿಕೊಂಡು ಹೋಗಲಿ, ನಾವು ಅಣ್ಣ ತಮ್ಮಂದಿರ ಹಾಗೆ ಇದ್ದೇವೆ. ಇದು ಪ್ರಜಾಪ್ರಭುತ್ವ ರಾಷ್ಟ್ರ, ಭಾರತ ದೇಶ, ಕರ್ನಾಟಕ ರಾಜ್ಯದಲ್ಲಿ ಯಾರು ಎಲ್ಲಿ ಬೇಕಾದರೂ ಬರಬಹುದು, ಹೋಗಬಹುದು ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ