ಆ್ಯಪ್ನಗರ

ಕಾಂಗ್ರೆಸ್‌ ಟಿಕೆಟ್‌ಗೆ ನಿಯೋಗದೊಂದಿಗೆ ಮನವಿ ಸಲ್ಲಿಕೆ

ಕಾಂಗ್ರೆಸ್‌ ತಾಲೂಕು ಪ್ರಚಾರ ಸಮಿತಿ ಅಧ್ಯಕ್ಷ ಎಚ್‌.ಲಕ್ಷ ್ಮಣ ಬಳ್ಳಾರಿ ಲೋಕಸಭೆ ಕ್ಷೇತ್ರದ ಉಪ ಚುನಾವಣೆಗೆ ಸ್ಪರ್ಧಿಸಲು ತಮಗೆ ಟಿಕೆಟ್‌ ನೀಡಬೇಕು ಎಂದು ಕಾಂಗ್ರೆಸ್‌ ನಿಯೋಗದೊಂದಿಗೆ ಬೆಂಗಳೂರಿಗೆ ತೆರಳಿ, ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್‌, ಜಿಲ್ಲಾ ಉಸ್ತುವಾರಿ ಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ಬುಧವಾರ ಮನವಿ ಸಲ್ಲಿಸಿದ್ದಾರೆ.

Vijaya Karnataka 12 Oct 2018, 5:00 am
ಸಂಡೂರು : ಕಾಂಗ್ರೆಸ್‌ ತಾಲೂಕು ಪ್ರಚಾರ ಸಮಿತಿ ಅಧ್ಯಕ್ಷ ಎಚ್‌.ಲಕ್ಷ ್ಮಣ ಬಳ್ಳಾರಿ ಲೋಕಸಭೆ ಕ್ಷೇತ್ರದ ಉಪ ಚುನಾವಣೆಗೆ ಸ್ಪರ್ಧಿಸಲು ತಮಗೆ ಟಿಕೆಟ್‌ ನೀಡಬೇಕು ಎಂದು ಕಾಂಗ್ರೆಸ್‌ ನಿಯೋಗದೊಂದಿಗೆ ಬೆಂಗಳೂರಿಗೆ ತೆರಳಿ, ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್‌, ಜಿಲ್ಲಾ ಉಸ್ತುವಾರಿ ಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ಬುಧವಾರ ಮನವಿ ಸಲ್ಲಿಸಿದ್ದಾರೆ. 2005ರಲ್ಲಿ ಅಂತಾಪುರ ತಾ.ಪಂ.ಸದಸ್ಯನಾಗಿ, 2010 ರಲ್ಲಿ ದೇವಗಿರಿ ಜಿ.ಪಂ.ಸದಸ್ಯನಾಗಿ, ತಾಲೂಕು ಪ್ರಚಾರ ಸಮಿತಿಯ ಅಧ್ಯಕ್ಷ ಸೇರಿ ನಾನಾ ಜವಾಬ್ದಾರಿಗಳನ್ನು ನಿರ್ವಹಿಸಿದ್ದು, ಎಸ್ಟಿಗೆ ಮೀಸಲಾದ ಕ್ಷೇತ್ರಕ್ಕೆ ತಮಗೆ ಟಿಕೆಟ್‌ ನೀಡಬೇಕು ಎಂದಿದ್ದಾರೆ. ನಿಯೋಗದಲ್ಲಿ ಶಾಸಕ ಈ.ತುಕಾರಾಮ್‌, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಜಿ.ಏಕಾಂಬ್ರಪ್ಪ, ಮುಖಂಡರಾದ ಮಹೇಶ್ವರ ಸ್ವಾಮಿ, ಹೇಮಣ್ಣ, ಶ್ರೀನಿವಾಸ ಸೇರಿದಂತೆ ಇತರರಿದ್ದರು.
Vijaya Karnataka Web congress ticket requested by the delegation
ಕಾಂಗ್ರೆಸ್‌ ಟಿಕೆಟ್‌ಗೆ ನಿಯೋಗದೊಂದಿಗೆ ಮನವಿ ಸಲ್ಲಿಕೆ



ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ