ಆ್ಯಪ್ನಗರ

ವಿವಾದಾತ್ಮಕ ಹೇಳಿಕೆ, ಸೋಮಶೇಖರ್‌ ರೆಡ್ಡಿ ವಿರುದ್ಧ ಎಫ್‌ಐಆರ್‌ ದಾಖಲು

ಬಳ್ಳಾರಿ ಕಾಂಗ್ರೆಸ್‌ ನಾಯಕ ವಿವೇಕ್‌ ಪಿ ನೀಡಿದ ದೂರಿನ ಅನ್ವಯ ಬಳ್ಳಾರಿ ಗಾಂಧಿನಗರ ಠಾಣೆ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ. ದೂರಿನಲ್ಲಿ ಸೋಮಶೇಖರ್‌ ರೆಡ್ಡಿಯವರನ್ನು ಮೊದಲ ಆರೋಪಿಯನ್ನಾಗಿ ಹೆಸರಿಸಲಾಗಿದೆ.

Vijaya Karnataka 4 Jan 2020, 5:48 pm

ಬಳ್ಳಾರಿ: ಬಳ್ಳಾರಿಯಲ್ಲಿ ಶುಕ್ರವಾರ ಪೌರತ್ವ ತಿದ್ದುಪಡಿ ಕಾಯಿದೆ ಪರ ಪ್ರತಿಭಟನೆಯಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಳ್ಳಾರಿ ನಗರ ಶಾಸಕ ಜಿ ಸೋಮಶೇಖರ್‌ ರೆಡ್ಡಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.
Vijaya Karnataka Web Somashekhar Reddy


ಬಳ್ಳಾರಿ ಕಾಂಗ್ರೆಸ್‌ ನಾಯಕ ವಿವೇಕ್‌ ಪಿ ನೀಡಿದ ದೂರಿನ ಅನ್ವಯ ಬಳ್ಳಾರಿ ಗಾಂಧಿನಗರ ಠಾಣೆ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ. ದೂರಿನಲ್ಲಿ ಸೋಮಶೇಖರ್‌ ರೆಡ್ಡಿಯವರನ್ನು ಮೊದಲ ಆರೋಪಿಯನ್ನಾಗಿ ಮಾಡಲಾಗಿದ್ದರೆ, ಕಾರ್ಯಕ್ರಮ ಆಯೋಜಿಸಿದ್ದ 'ದೇಶಭಕ್ತ ನಾಗರಿಕ ವೇದಿಕೆ'ಯನ್ನು ಎರಡನೇ ಆರೋಪಿಯನ್ನಾಗಿ ಹೆಸರಿಸಲಾಗಿದೆ.

ಕಾರ್ಯಕ್ರಮದಲ್ಲಿ ಮಾತನಾಡಿದ್ದ ರೆಡ್ಡಿ, 'ಪೌರತ್ವ ತಿದ್ದುಪಡಿ ಕಾಯಿದೆ ವಿರೋಧಿಸಿ ಪ್ರತಿಭಟನೆ ಮಾಡುವವರನ್ನು ಬಂದೂಕಿನಿಂದ ಶೂಟ್ ಮಾಡಿದರೆ ಜನಸಂಖ್ಯೆಯಾದರೂ ಕಡಿಮೆಯಾಗುತಿತ್ತು' ಎಂದಿದ್ದರು. ಅಷ್ಟೇ ಅಲ್ಲದೆ 'ನೀವು ಶೇ. 17ರಷ್ಟು ಮಾತ್ರವಿದ್ದು, ಶೇ. 80ರಷ್ಟು ನಾವು ಇದ್ದೇವೆ. ನಾವು ತಿರುಗಿಬಿದ್ದರೆ ನಿಮ್ಮ ಪರಿಸ್ಥಿತಿ ಏನಾಗಬೇಕು ಎಂಬುದನ್ನು ಊಹಿಸಿಕೊಳ್ಳಿ. ಹಿಂದೂಗಳನ್ನು ಕೆಣಕಲು ಬರಬೇಡಿ,' ಎಂಬುದಾಗಿ ಮುಸ್ಲಿಂ ಸಮುದಾಯದವರಿಗೆ ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದರು.

ವಿವಾದಾತ್ಮಕ ಹೇಳಿಕೆ, ಸೋಮಶೇಖರ್‌ ರೆಡ್ಡಿ ವಿರುದ್ಧ ಡಿಜಿಪಿಗೆ ಕಾಂಗ್ರೆಸ್‌ನಿಂದ ದೂರು

“ಸೋಮಶೇಖರ್‌ ರೆಡ್ಡಿ, ಜಾತಿ ಜಾತಿಗಳ ಮಧ್ಯೆ, ಧರ್ಮ ಧರ್ಮಗಳ ಮಧ್ಯೆ ವಿಷ ಬೀಜವನ್ನು ಭಿತ್ತಿ, ಜಗಳವನ್ನು ಹಚ್ಚುವಂತ ಹೇಳಿಕೆಗಳನ್ನು ನೀಡಿ ದೇಶ ಮತ್ತು ರಾಜ್ಯದಲ್ಲಿ ಅಶಾಂತಿಯನ್ನು ಸೃಷ್ಟಿ ಮಾಡುವಂತ ಬೇಜವಾಬ್ದಾರಿ ಹೇಳಿಕೆಗಳನ್ನು ನೀಡಿದ್ದಾರೆ,” ಎಂಬುದಾಗಿ ವಿವೇಕ್‌ ದೂರಿನಲ್ಲಿ ತಿಳಿಸಿದ್ದರು. ಈ ದೂರಿನ ಅನ್ವಯ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ.



ಇದಕ್ಕೂ ಮೊದಲು ಬಿಜೆಪಿ ಶಾಸಕ ಸೋಮಶೇಖರ್‌ ರೆಡ್ಡಿ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಕಾಂಗ್ರೆಸ್‌ ನಾಯಕರು ಸಿದ್ದರಾಮಯ್ಯ ನೇತೃತ್ವದಲ್ಲಿ ಡಿಜಿಪಿ ಎನ್‌ ನೀಲಮಣಿ ರಾಜು ಅವರಿಗೂ ದೂರು ನೀಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ