ಆ್ಯಪ್ನಗರ

Ballari News: ಬಳ್ಳಾರಿಯಲ್ಲಿ ರಾಜ್ಯದಲ್ಲಿಯೇ ಅತಿ ದೊಡ್ಡ ಕಲ್ಯಾಣ ಮಂಟಪ: ಸಚಿವ ಶ್ರೀರಾಮುಲು

Ballari News: 1 ಎಕರೆ ಪ್ರದೇಶದಲ್ಲಿ ಅಂದಾಜು 4 ಕೋಟಿ ರೂ. ವೆಚ್ಚದಲ್ಲಿ ಕಾರ್ಮಿಕ ಕಲ್ಯಾಣ ಕೇಂದ್ರ ನಿರ್ಮಾಣವಾಗಲಿದೆ. ನೆಲ ಮಹಡಿ 1306 ಚ. ಮೀ., ಮೊದಲ ಮಹಡಿ 1246 ಚ. ಮೀ. ಸೇರಿ ಒಟ್ಟು ವಿಸ್ತೀರ್ಣ 2553 ಚ. ಮೀ. ವ್ಯಾಪ್ತಿಯಲ್ಲಿ ಕಟ್ಟಡ ನಿರ್ಮಾಣವಾಗಲಿದೆ. ನೆಲ ಅಂತಸ್ತಿನಲ್ಲಿ 04 ಸುಸಜ್ಜಿತ ಕೊಠಡಿ, ಊಟದ ಪ್ರಾಂಗಣ, ಅಡುಗೆ ಕೋಣೆ, ಶೌಚಾಲಯ ಮತ್ತು ಮೊದಲ ಅಂತಸ್ತಿನಲ್ಲಿ ಪ್ರಾಂಗಣ 02 ಕೋಣೆಗಳು ಇರಲಿವೆ ಎಂದು ಮಾಹಿತಿ ಸಿಕ್ಕಿದೆ.

Edited byದಿಲೀಪ್ ಡಿ. ಆರ್. | Vijaya Karnataka Web 10 Dec 2022, 5:18 pm

ಹೈಲೈಟ್ಸ್‌:

  • ಕಲ್ಯಾಣ ಕೇಂದ್ರ ನಿರ್ಮಾಣಕ್ಕೆ ಭೂಮಿ ಪೂಜೆ
  • ಸಾರಿಗೆ ಇಲಾಖೆಯಿಂದ ಅಂದಾಜು 4ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣ
  • ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ಶ್ರೀರಾಮುಲು ಹೇಳಿಕೆ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web Sriramulu
ಬಳ್ಳಾರಿ: ಸಾರಿಗೆ ಇಲಾಖೆಯಿಂದ ಅಂದಾಜು 4 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವ ಕಲ್ಯಾಣ ಕೇಂದ್ರವು ರಾಜ್ಯದಲ್ಲೇ ಅತಿ ದೊಡ್ಡ ಕಲ್ಯಾಣ ಮಂಟಪವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ಶ್ರೀರಾಮುಲು ಹೇಳಿದರು.
ಬಳ್ಳಾರಿ ನಗರದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ಕಚೇರಿ ಹಿಂಭಾಗದ 2 ನೇ ಹಳೇ ಬಸ್‌ ಘಟಕದಲ್ಲಿ ನೂತನ ಕಾರ್ಮಿಕ ಕಲ್ಯಾಣ ಕೇಂದ್ರದ ನಿರ್ಮಾಣಕ್ಕೆ ಶನಿವಾರ ಶಂಕು ಸ್ಥಾಪನೆ ಅಡಿಗಲ್ಲು ಹಾಗೂ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

Sriramulu: ಸಿದ್ದಿಗಳ ಹಾಡಿಯಲ್ಲಿ ಶ್ರೀರಾಮುಲು ವಾಸ್ತವ್ಯ; ಮೈಕೊರೆವ ಚಳಿಯಲ್ಲಿ ಖಾಲಿ ಹಾಸಿಗೆಯ ಮೇಲೆ ಮಲಗೆದ್ದ ಸಚಿವ
ರಾಜ್ಯದಲ್ಲಿ ಸರಕಾರಿ ನೌಕರರಿಗೆ 7ನೇ ವೇತನ ಆಯೋಗವು ರಚನೆಯಾಗಿದ್ದು, ಸಾರಿಗೆ ನಿಗಮವು 6ನೇ ವೇತನದಲ್ಲಿದ್ದು, ನಿಗಮದ ನೌಕರರಿಗೆ 7 ನೇ ವೇತನಕ್ಕಾಗಿ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುವೆ ಎಂದು ಹೇಳಿದರು.

ಕಾರ್ಮಿಕ ಕಲ್ಯಾಣ ಕೇಂದ್ರದ ವಿಶೇಷತೆ: ಸುಮಾರು 1 ಎಕರೆ ಪ್ರದೇಶದಲ್ಲಿ ಅಂದಾಜು 4 ಕೋಟಿ ರೂ. ವೆಚ್ಚದಲ್ಲಿ ಕಾರ್ಮಿಕ ಕಲ್ಯಾಣ ಕೇಂದ್ರ ನಿರ್ಮಾಣವಾಗಲಿದೆ. ನೆಲ ಮಹಡಿ 1306 ಚ. ಮೀ., ಮೊದಲ ಮಹಡಿ 1246 ಚ. ಮೀ. ಸೇರಿ ಒಟ್ಟು ವಿಸ್ತೀರ್ಣ 2553 ಚ. ಮೀ. ವ್ಯಾಪ್ತಿಯಲ್ಲಿ ಕಟ್ಟಡ ನಿರ್ಮಾಣವಾಗಲಿದೆ. ನೆಲ ಅಂತಸ್ತಿನಲ್ಲಿ 04 ಸುಸಜ್ಜಿತ ಕೊಠಡಿ, ಊಟದ ಪ್ರಾಂಗಣ, ಅಡುಗೆ ಕೋಣೆ, ಶೌಚಾಲಯ ಮತ್ತು ಮೊದಲ ಅಂತಸ್ತಿನಲ್ಲಿ ಪ್ರಾಂಗಣ (1000 ಜನರಿಗೆ) 02 ಕೊಣೆಗಳು (ವರ ಹಾಗೂ ವಧುವಿಗೆ), ಮೊದಲನ ಅಂತಸ್ತಿಗೆ ನೇರವಾಗಿ ಹೋಗಲು ಮುಂಭಾಗ ಹಾಗೂ ಹಿಂಭಾಗದಿಂದ ಹೋಗಲು ಮೆಟ್ಟಲು ಇರಲಿವೆ ಎಂದು ಹೇಳಿದರು.

Sriramulu: ನಾನು ಈ ಹಿಂದೆಯೇ ಅವರ ಅಪ್ಪ, ತಾತನ ವಿರುದ್ಧ ಗೆದ್ದು ಬಂದಿದ್ದೇನೆ: ಶ್ರೀರಾಮುಲು
ಪ್ರತಿಭಾ ಪುರಸ್ಕಾರ: ಕಾರ್ಯಕ್ರಮದಲ್ಲಿ ಉತ್ತಮ ಕಾರ್ಯ ನಿರ್ವಹಿಸಿದ ಚಾಲನಾ ಸಿಬ್ಬಂದಿ ಹಾಗೂ ನಿಗಮದ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ನಗರ ಶಾಸಕ ಜಿ. ಸೋಮ ಶೇಖರ ರೆಡ್ಡಿ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಜವಳಿ ಮೂಲ ಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಗುತ್ತಿಗನೂರು ವಿರೂಪಾಕ್ಷ ಗೌಡ, ಮಹಾ ನಗರ ಪಾಲಿಕೆ ಸದಸ್ಯರಾದ ಇಬ್ರಾಹಿಂ ಬಾಬು, ಕಲ್ಪನ, ಕಲಬುರಗಿಯ ಕಕರಸಾ ನಿಗಮ ವ್ಯವಸ್ಥಾಪಕ ನಿರ್ದೇಶಕರಾದ ಎಂ. ರಾಚಪ್ಪ, ಮುಖ್ಯ ಕಾಮಗಾರಿ ಎಂಜಿನಿಯರ್‌ ಮೆಹಬೂಬ ಸಾಹೇಬ ಎ. ದೇವೂರು, ಬಳ್ಳಾರಿ ವಿಭಾಗೀಯ ನಿಯಂತ್ರಣಾಧಿಕಾರಿ ಡಿ. ಎಂ. ದೇವರಾಜ ಇದ್ದರು.


ಬಳ್ಳಾರಿಯ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ವಿಭಾಗೀಯ ಕಚೇರಿ ಹಿಂಭಾಗದ 2 ನೇ ಹಳೇ ಬಸ್‌ ಘಟಕದಲ್ಲಿ ಶನಿವಾರ ನೂತನ ಕಾರ್ಮಿಕ ಕಲ್ಯಾಣ ಕೇಂದ್ರದ ನಿರ್ಮಾಣಕ್ಕೆ ಶಂಕು ಸ್ಥಾಪನೆ ಅಡಿಗಲ್ಲು ಹಾಗೂ ಭೂಮಿ ಪೂಜೆಯನ್ನು ಸಚಿವ ಬಿ. ಶ್ರೀರಾಮುಲು ನೆರವೇರಿಸಿದರು.
ಲೇಖಕರ ಬಗ್ಗೆ
ದಿಲೀಪ್ ಡಿ. ಆರ್.
ವಿಜಯ ಕರ್ನಾಟಕದ ಡಿಜಿಟಲ್ ಪತ್ರಕರ್ತನಾಗಿ 2019ರ ಆಗಸ್ಟ್‌ನಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡ ಟಿವಿ ನ್ಯೂಸ್ ವಾಹಿನಿಗಳಲ್ಲಿ 14 ವರ್ಷಕ್ಕೂ ಹೆಚ್ಚು ಕಾಲ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. ರಾಜಕೀಯ, ವಿಜ್ಞಾನ-ತಂತ್ರಜ್ಞಾನ ರಂಗಗಳು ಇವರ ಆಸಕ್ತಿಯ ವಿಷಯಗಳು. ಇದಲ್ಲದೆ ಹಾಸ್ಯ, ವಿಡಂಬನಾತ್ಮಕ ಬರಹ, ವ್ಯಕ್ತಿ ಚಿತ್ರ, ಜೀವ ಪರ ನಿಲುವಿನ ಸಂವೇದನಾತ್ಮಕ ಲೇಖನಗಳನ್ನು ಹೆಚ್ಚಾಗಿ ಬರೆಯುತ್ತಾರೆ. ಕಾಡು, ಹಸಿರು, ಬೆಟ್ಟ ಗುಡ್ಡಗಳ ಚಾರಣ ಮಾಡುವುದು ಇವರ ಹವ್ಯಾಸ.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ