ಆ್ಯಪ್ನಗರ

ಬಳ್ಳಾರಿಯಲ್ಲಿ ಕೊರೊನಾ ಸೋಂಕಿಗೆ ಮೊದಲ ವ್ಯಕ್ತಿ ಬಲಿ

ಜಿಲ್ಲೆಯ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 61 ವರ್ಷದ ಪಿ.1185 ರೋಗಿ ಮಂಗಳವಾರ ಬೆಳಗಿನ ಜಾವ ಮೃತಪಟ್ಟಿದ್ದಾರೆ. ಇದರಿಂದ ರಾಜ್ಯದಲ್ಲಿ ಕೊರೊನಾ ವೈರಸ್ ನಿಂದ ಮೃತಪಟ್ಟವರ ಸಂಖ್ಯೆ 38ಕ್ಕೆ ಏರಿಕೆಯಾಗಿದೆ.

Vijaya Karnataka Web 19 May 2020, 9:39 am
ಬಳ್ಳಾರಿ: ಕೊರೊನಾ ವೈರಸ್ ಸೋಂಕಿಗೆ ಜಿಲ್ಲೆಯಲ್ಲಿ ಮೊದಲ ಬಲಿಯಾಗಿದೆ. ಇದರಿಂದ ರಾಜ್ಯದಲ್ಲಿ ಕೊರೊನಾ ವೈರಸ್ ನಿಂದ ಮೃತಪಟ್ಟವರ ಸಂಖ್ಯೆ 38ಕ್ಕೆ ಏರಿಕೆಯಾಗಿದೆ.
Vijaya Karnataka Web coronavirus


ಕಳೆದ ಎರಡು ದಿನಗಳ ಹಿಂದೆ ಕೊರೊನಾ ಸೋಂಕು ಪತ್ತೆಯಾಗಿ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 61 ವರ್ಷದ ಪಿ.1185 ರೋಗಿ ಮಂಗಳವಾರ ಬೆಳಗಿನ ಜಾವ ಮೃತಪಟ್ಟಿದ್ದಾರೆ.

ನಗರದ ಗಣೇಶ್ ಕಾಲೋನಿ ನಿವಾಸಿ ಕೊರೊನಾ ಸೋಂಕಿನೊಂದಿಗೆ ವಿವಿಧ ಕಾಯಿಲೆಯಿಂದ ಬಳಲುತ್ತಿದ್ದರು. ಏಪ್ರಿಲ್ ನಲ್ಲಿ ಬೆಂಗಳೂರಿನ ಅಪೋಲೊ ಆಸ್ಪತ್ರೆಯಲ್ಲಿ ಹೃದಯ ಸಂಬಂಧಿ ಕಾಯಿಲೆಗೆ ಬೈಪಾಸ್ ಸರ್ಜರಿ ನಡೆದಿತ್ತು.

ಬಳಿಕ ಮೇ.04ರಂದು ಬಳ್ಳಾರಿಗೆ ಆಗಮಿಸಿದ ವೇಳೆ ಉಸಿರಾಟದ ಸಮಸ್ಯೆಯಿಂದ ಬಳಲಿ ವಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಕೊರೊನಾ ಸೋಂಕು ದೃಢಪಟ್ಟಿತ್ತು. ಬಳಿಕ ಇವರನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಿದ್ದು ಅಲ್ಲಿಯೂ ಸಹ ಅನಾರೋಗ್ಯದಿಂದ ಬಳಲುತ್ತಿದ್ದ ರೋಗಿಗೆ ಸೋಮವಾರ ಬೆಂಗಳೂರು ವೈದ್ಯರ ಸಂಪರ್ಕದೊಂದಿಗೆ ಇಲ್ಲಿನ ಜಿಲ್ಲಾ ಶಸ್ತ್ರ ಚಿಕಿತ್ಸಾಕ ಡಾ.ಬಸರೆಡ್ಡಿ ಹಾಗೂ ತಂಡ ಚಿಕಿತ್ಸೆ ನೀಡಿದ್ದರು. ಮಂಗಳವಾರ ಬೆಳಗ್ಗೆ 5ಗಂಟೆಗೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ಡಿಸಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.

61 ವರ್ಷದ ಕೊರೊನಾ ವೈರಸ್ ಸೋಂಕಿತನಿಗೆ ಚಿಕಿತ್ಸೆ ನೀಡಿದ ಬಳ್ಳಾರಿಯ ವಿಮ್ಸ್ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಗಳಿಗೆ ಆತಂಕ ಎದುರಾಗಿದ್ದು, ಸೋಂಕಿತ ವ್ಯಕ್ತಿಯ ಪ್ರಾಥಮಿಕ ಸಂಪರ್ಕದಲ್ಲಿದ್ದ ವೈದ್ಯಕೀಯ ಸಿಬ್ಬಂದಿ ಹಾಗೂ ಚಿಕಿತ್ಸೆ ನೀಡಿದ ಇಬ್ಬರು ವೈದ್ಯರನ್ನು ಕ್ವಾರೆಂಟೈನ್ ನಲ್ಲಿ ಇರಿಸಲು ತೀರ್ಮಾನಿಸಲಾಗಿದೆ. ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗೂ ಸಹ ಕೊರೊನಾ ವೈರಸ್ ಸೋಂಕು ತಪಾಸಣೆ ನಡೆಸಲಾಗುತ್ತದೆ.
ರಾಜ್ಯದಲ್ಲಿ ಕೊರೊನಾ ರೌದ್ರಾವತಾರ, ದಾಖಲೆಯ 99 ಪ್ರಕರಣ; ಬೆಂಗಳೂರು 24, ಮಂಡ್ಯ 17!
ಬಳ್ಳಾರಿಯಲ್ಲಿ ಒಟ್ಟು 19 ಜನರಿಗೆ ಕೊರೊನಾ ಸೋಂಕು ತಗುಲಿದ್ದು, 13 ಜನರು ಗುಣಮುಖರಾಗಿದ್ದಾರೆ. 5 ಸಕ್ರಿಯ ಪ್ರಕರಣಗಳಿದ್ದು, ಒರ್ವ ವ್ಯಕ್ತಿ ಇಂದು ಸಾವನ್ನಪ್ಪಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ