ಆ್ಯಪ್ನಗರ

ಬಳ್ಳಾರಿ: ಹೃದಯಾಘಾತದಿಂದ ಡಿ ಗ್ರೂಪ್‌ ನೌಕರ ಸಾವು!

ಕಳೆದ ಎರಡು ದಿನಗಳ ಹಿಂದೆ ಕೊರೊನಾ ವ್ಯಾಕ್ಸಿನ್‌ ಪಡೆದಿದ್ದ ಮಧುಮೇಹ ಹಾಗೂ ಬಿಪಿ ಕಾಯಿಲೆ ಹೊಂದಿದ್ದ ಸಂಡೂರಿನ ಸರಕಾರಿ ಆಸ್ಪತ್ರೆಯ ಡಿ.ಗ್ರೂಪ್‌ ನೌಕರ ನಾಗರಾಜ (43) ಸೋಮವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

Vijaya Karnataka Web 19 Jan 2021, 9:24 am
ಬಳ್ಳಾರಿ: ಕಳೆದ ಎರಡು ದಿನಗಳ ಹಿಂದೆ ಕೊರೊನಾ ವ್ಯಾಕ್ಸಿನ್‌ ಪಡೆದಿದ್ದ ಮಧುಮೇಹ ಹಾಗೂ ಬಿಪಿ ಕಾಯಿಲೆ ಹೊಂದಿದ್ದ ಸಂಡೂರಿನ ಸರಕಾರಿ ಆಸ್ಪತ್ರೆಯ ಡಿ.ಗ್ರೂಪ್‌ ನೌಕರ ನಾಗರಾಜ (43) ಸೋಮವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
Vijaya Karnataka Web d group employee


ಎಂದಿನಂತೆ ಸೋಮವಾರ ಬೆಳಗ್ಗೆ ಕರ್ತವ್ಯಕ್ಕೆ ಹಾಜರಾದ ನಾಗರಾಜ ಅವರು ತಲೆ ಸುತ್ತಿತ್ತಿದೆ, ಎದೆ ನೋವು ಕಾಣಿಸಿಕೊಂಡಿದೆ ಎಂದು ಆಸ್ಪತ್ರೆ ಆವರಣದಲ್ಲಿ ತೀವ್ರ ಸುಸ್ತಾಗಿ ಕುಸಿದು ಬಿದ್ದರು. ಅವರನ್ನು ಆಸ್ಪತ್ರೆ ಸಿಬ್ಬಂದಿ ಕೂಡಲೇ ವಾರ್ಡ್‌ಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ತೋರಣಗಲ್ಲುನ ಜಿಂದಾಲ್‌ ಸಂಜೀವಿನಿ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ. ಸಂಜೀನಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ನಾಗರಾಜ ಅವರು ಮೃತಪಟ್ಟಿದ್ದಾರೆ.

ಉತ್ತರ ಪ್ರದೇಶ: ಕೊರೊನಾ ಲಸಿಕೆ ಪಡೆದ ಮರುದಿನ ಆರೋಗ್ಯ ಸಿಬ್ಬಂದಿ ಸಾವು!

ಕಳೆದ ಶನಿವಾರ(ಜ.16) ನಾಗರಾಜ ಅವರು ಕೋವಿಡ್‌ ವ್ಯಾಕ್ಸಿನ್‌ ಪಡೆದಿದ್ದರು. ಕಳೆದ ಒಂದು ತಿಂಗಳ ಹಿಂದೆ ಅವರು ಮಧುಮೇಹ ಹಾಗೂ ರಕ್ತದೊತ್ತಡ ಕಾಯಿಲೆಗೆ ಸಂಬಂಧಿಸಿದಂತೆ ಚಿಕಿತ್ಸೆ ಪಡೆದಿದ್ದರು. ಮೃತರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ.

ಈ ಕುರಿತು ಡಿಎಚ್‌ಒ ಡಾ.ಜನಾರ್ಧನ ಮಾತನಾಡಿ, ಸಂಡೂರು ಸರಕಾರಿ ಅಸ್ಪತ್ರೆಯ ಡಿ.ಗ್ರೂಪ್‌ ನೌಕರ ನಾಗರಾಜ ಹೃದಯಾಘಾತದಿಂದ ಸೋಮವಾರ ಮೃತಪಟ್ಟಿದ್ದಾರೆ ಎಂಬುದು ಮೇಲ್ನೋಟಕ್ಕೆ ಗೊತ್ತಾಗಿದೆ. ಅವರಿಗೆ ಮಧುಮೇಹ ಹಾಗೂ ಬಿಪಿ ಕಾಯಿಲೆಯಿತ್ತು. ಅವರು ಶನಿವಾರ ಕೋವಿಡ್‌ ವ್ಯಾಕ್ಸಿನ್‌ ಪಡೆದಿದ್ದರು. ಮೃತರ ಶವ ಪರೀಕ್ಷೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ತೋರಣಗಲ್ಲು ಠಾಣೆಯಲ್ಲಿ ಪ್ರಕರಣ ದಾಖಲಿಸಲು ಸೂಚಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ