ಆ್ಯಪ್ನಗರ

ಸಾಲಬಾಧೆ: ರೈತ ಆತ್ಮಹತ್ಯೆ

ತಾಲೂಕಿನ ಇಬ್ರಾಂಪುರ ಗ್ರಾಮದಲ್ಲಿ ಸಾಲಬಾಧೆ ತಾಳದ ರೈತರೊಬ್ಬರು ವಿಷ ಕುಡಿದು ಆತ್ಮಹತ್ಯೆಮಾಡಿಕೊಂಡಿದ್ದಾರೆ.

ವಿಕ ಸುದ್ದಿಲೋಕ 4 May 2017, 8:19 am
ಸಿರುಗುಪ್ಪ (ಬಳ್ಳಾರಿ): ತಾಲೂಕಿನ ಇಬ್ರಾಂಪುರ ಗ್ರಾಮದಲ್ಲಿ ಸಾಲಬಾಧೆ ತಾಳದ ರೈತರೊಬ್ಬರು ವಿಷ ಕುಡಿದು ಆತ್ಮಹತ್ಯೆಮಾಡಿಕೊಂಡಿದ್ದಾರೆ.
Vijaya Karnataka Web debt farmers suicide
ಸಾಲಬಾಧೆ: ರೈತ ಆತ್ಮಹತ್ಯೆ


ರೈತ ವಡ್ಡರ ಫಕೀರಪ್ಪ(65) ಮೃತರು. ಈ ರೈತನ ಹೆಸರಲ್ಲಿ 3.90 ಎಕರೆ ಜಮೀನಿದೆ. ದೇಶನೂರು ಗ್ರಾಮದ ಇಂಡಿಯನ್ ಬ್ಯಾಂಕಿನಲ್ಲಿ 60ಸಾವಿರ ರೂ. ಹಾಗೂ ಖಾಸಗಿಯಾಗಿ 1.50 ಲಕ್ಷ ರೂ. ಸಾಲವಿದೆ. ಸಾಲ ತೀರಿಸಲಾಗದ ಚಿಂತೆಯಲ್ಲಿದ್ದ ರೈತ ಫಕೀರಪ್ಪ ಅವರು, ಮಂಗಳವಾರ ರಾತ್ರಿ ಕ್ರಿಮಿನಾಶಕ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದರು. ತೀವ್ರ ಅಸ್ವಸ್ಥರಾದ ಅವರಿಗೆ ನಗರದ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ನಂತರ ಬಳ್ಳಾರಿಯ ವಿಮ್ಸ್ ಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದ ಅವರು ಬುಧವಾರ ಅಸುನೀಗಿದ್ದಾರೆ.

ಅವರಿಗೆ ಪತ್ನಿ, ಮೂವರು ಪುತ್ರರು ಹಾಗೂ ಒಬ್ಬ ಪುತ್ರಿ ಇದ್ದಾರೆ. ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ತಹಸೀಲ್ದಾರ್ ಎಂ.ಸುನೀತಾ ಅವರು ರೈತನ ಕುಟುಂಬದವರಿಗೆ ಸಾಂತ್ವನ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ