ಆ್ಯಪ್ನಗರ

ಬಡ್ತಿ ಮೀಸಲು ಕಾಯಿದೆ ಜಾರಿಗೆ ಆಗ್ರಹ

ಕರ್ನಾಟಕ (ರಾಜ್ಯ ಸಿವಿಲ್‌ ಹುದ್ದೆಗಳಿಗೆ) ಮೀಸಲಾತಿ ಆಧಾರದ ಮೇಲೆ ಬಡ್ತಿ ಹೊಂದಿದ ಎಸ್ಸಿ, ಎಸ್ಟಿ ಸರಕಾರಿ ನೌಕರರಿಗೆ ತತ್ಪರಿಣಾಮದ ಜ್ಯೇಷ್ಠತೆ ವಿಸ್ತರಿಸುವ ಕಾಯಿದೆ-2017 ಅನುಷ್ಠಾನಕ್ಕೆ ಒತ್ತಾಯಿಸಿ, ಕರ್ನಾಟಕ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಸ್ಥಾನಿಕ ಅಧಿಕಾರಿ ಮೂಲಕ ರಾಜ್ಯ ಸರಕಾರಕ್ಕೆ ಇತ್ತೀಚೆಗೆ ಮನವಿ ರವಾನಿಸಿದರು.

Vijaya Karnataka 2 Aug 2018, 5:00 am
ಬಳ್ಳಾರಿ : ಕರ್ನಾಟಕ (ರಾಜ್ಯ ಸಿವಿಲ್‌ ಹುದ್ದೆಗಳಿಗೆ) ಮೀಸಲಾತಿ ಆಧಾರದ ಮೇಲೆ ಬಡ್ತಿ ಹೊಂದಿದ ಎಸ್ಸಿ, ಎಸ್ಟಿ ಸರಕಾರಿ ನೌಕರರಿಗೆ ತತ್ಪರಿಣಾಮದ ಜ್ಯೇಷ್ಠತೆ ವಿಸ್ತರಿಸುವ ಕಾಯಿದೆ-2017 ಅನುಷ್ಠಾನಕ್ಕೆ ಒತ್ತಾಯಿಸಿ, ಕರ್ನಾಟಕ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಸ್ಥಾನಿಕ ಅಧಿಕಾರಿ ಮೂಲಕ ರಾಜ್ಯ ಸರಕಾರಕ್ಕೆ ಇತ್ತೀಚೆಗೆ ಮನವಿ ರವಾನಿಸಿದರು.
Vijaya Karnataka Web demand for implementation of the promotion act
ಬಡ್ತಿ ಮೀಸಲು ಕಾಯಿದೆ ಜಾರಿಗೆ ಆಗ್ರಹ


ಜಿಲ್ಲಾಧಿಕಾರಿಗಳ ಕಚೇರಿಯ ಸ್ಥಾನಿಕ ಅಧಿಕಾರಿಗೆ ಮನವಿ ಸಲ್ಲಿಸಿ, ಬಿ.ಕೆ.ಪವಿತ್ರ ಪ್ರಕರಣದಲ್ಲಿ ನ್ಯಾಯಾಲಯ ಕೋರಿದ ಮಾಹಿತಿಯನ್ನು ರಾಜ್ಯ ಸರಕಾರ ನೀಡದ ಕಾರಣ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸರಕಾರಿ ನೌಕರರು ಸಮಸ್ಯೆಗೆ ಸಿಲುಕಿದ್ದಾರೆ. ನೌಕರರ ಹಿತಕ್ಕಾಗಿ ಬಡ್ತಿ ಹಾಗೂ ಜ್ಯೇಷ್ಠತೆ ಸಂರಕ್ಷಿಸುವ ಉದ್ದೇಶಕ್ಕೆ 2017ರಲ್ಲಿ ಕಾಯಿದೆ ರೂಪಿಸಲಾಗಿದ್ದು, ಈ ಬಗ್ಗೆ ಹಿಂದಿನ ರಾಜ್ಯ ಸರಕಾರ ರಾಜ್ಯಪತ್ರ ಹೊರಡಿಸಿದೆ. ಅದರೆ ಈಗಿನ ಸಮ್ಮಿಶ್ರ ಸರಕಾರ ಕಾಯಿದೆ ಅನುಷ್ಠಾನಗೊಳಿಸದೇ ದಲಿತ ವರ್ಗದ ನೌಕರರನ್ನು ನಿರ್ಲಕ್ಷಿಸಿದೆ. ಕೂಡಲೇ ಈ ಕಾಯಿದೆ ಅಂಗೀಕರಿಸಿ ಅನುಷ್ಠಾನ ಮಾಡಬೇಕು. ಹಿಂಬಡ್ತಿ ಹೊಂದಿದ ಎಲ್ಲ ನೌಕರರ ಆದೇಶ ರದ್ದುಪಡಿಸಿ, ಈ ಹಿಂದೆ ನಿರ್ವಹಿಸುತ್ತಿದ್ದ ಹುದ್ದೆ ಮತ್ತು ಸ್ಥಳದಲ್ಲಿಯೇ ನಿಯುಕ್ತಿಗೊಳಿಸಬೇಕು ಎನ್ನುವುದು ಸೇರಿ ನಾನಾ ಬೇಡಿಕೆ ಈಡೇರಿಕೆಗೆ ಆಗ್ರಹಿಸಿದರು. ಸಂಘದ ಮುಖಂಡರಾದ ಪ್ರಸಾದ್‌ ಬಳ್ಳಾರಿ, ಕಪ್ಪಗಲ್ಲು ಹುಲಿಯಪ್ಪ ಸೇರಿದಂತೆ ಇತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ