ಆ್ಯಪ್ನಗರ

ಬರಪೀಡಿತ ತಾಲೂಕು ಘೋಷಿಸಲು ಆಗ್ರಹ

ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಣೆ ಮಾಡಬೇಕು ಎಂದು ಆಗ್ರಹಿಸಿ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ(ಕೋಡಿಹಳ್ಳಿ ಚಂದ್ರಶೇಖರ್‌) ಜಿಲ್ಲಾ ಹಾಗೂ ತಾಲೂಕು ಘಟಕದ ಪದಾಧಿಕಾರಿಗಳು, ನಗರದ ಡಿ.ಬಿ.ಡ್ಯಾಂ ಅತಿಥಿ ಗೃಹಕ್ಕೆ ಆಗಮಿಸಿದ್ದ, ಕೃಷಿ ಸಚಿವ ಎನ್‌.ಎಚ್‌.ಶಿವಶಂಕರ್‌ ರೆಡ್ಡಿ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.

Vijaya Karnataka 18 Aug 2018, 5:00 am
ಹೊಸಪೇಟೆ : ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಣೆ ಮಾಡಬೇಕು ಎಂದು ಆಗ್ರಹಿಸಿ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ(ಕೋಡಿಹಳ್ಳಿ ಚಂದ್ರಶೇಖರ್‌) ಜಿಲ್ಲಾ ಹಾಗೂ ತಾಲೂಕು ಘಟಕದ ಪದಾಧಿಕಾರಿಗಳು, ನಗರದ ಡಿ.ಬಿ.ಡ್ಯಾಂ ಅತಿಥಿ ಗೃಹಕ್ಕೆ ಆಗಮಿಸಿದ್ದ, ಕೃಷಿ ಸಚಿವ ಎನ್‌.ಎಚ್‌.ಶಿವಶಂಕರ್‌ ರೆಡ್ಡಿ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.
Vijaya Karnataka Web BLR-BLR17HPT-06


ತಾಲೂಕಿನಲ್ಲಿ ಸಮರ್ಪಕವಾಗಿ ಸುರಿಯದ್ದರಿಂದ ಅಂದಾಜು 52 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಮಳೆಯಾಶ್ರಿತ ಬೆಳೆಗೆ ಹಾನಿಯಾಗಿದೆ. ಇದರಿಂದ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಹಾಗಾಗಿ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಣೆ ಮಾಡಿ, ಪರಿಹಾರ ವಿತರಿಸಬೇಕು ಎಂದು ಹಸಿರು ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಜೆ.ಕಾರ್ತಿಕ್‌ ಸಚಿವರನ್ನು ಒತ್ತಾಯಿಸಿದರು.

ಜಿಲ್ಲೆಯಲ್ಲಿ ಕಳಪೆ ರಸಗೊಬ್ಬರ, ಬೀಜ ಹಾಗೂ ಕ್ರಿಮಿನಾಶಕ ಎಗ್ಗಿಲ್ಲದೇ ಮಾರಾಟವಾಗುತ್ತಿದೆ. ಕೂಡಲೇ ಇದನ್ನು ತಡೆಯಲು ಅಧಿಕಾರಿಗಳಿಗೆ ಸೂಚನೆ ನೀಡಬೇಕು. ಕೃಷಿ ಸಲಕರಣೆಗಳಿಗೆ ಸಬ್ಸಿಡಿ ನೀಡುವ ವಿಷಯದಲ್ಲಿ ಗೊಂದಲ ಏರ್ಪಟ್ಟಿದ್ದು, ವೈಜ್ಞಾನಿಕ ಮಾನದಂಡ ರೂಪಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂದು ಆಗ್ರಹಿಸಿದರು.

ಜಿಲ್ಲೆಯ ಸಿರುಗುಪ್ಪ, ಕಂಪ್ಲಿ, ಕುರುಗೋಡ, ಬಳ್ಳಾರಿ ತಾಲೂಕುಗಳಲ್ಲಿ ಭತ್ತವನ್ನು ಹೆಚ್ಚು ಬೆಳೆಯಲಾಗುತ್ತದೆ. ಕಟಾವಿನ ಸಂದರ್ಭದಲ್ಲಿ ಹಾರ್ವೆಸ್ಟರ್‌ (ಭತ್ತ ಕಟಾವು ಯಂತ್ರ) ಬಾಡಿಗೆ ಪಡೆಯಲು ಹೆಚ್ಚು ಹಣ ವ್ಯಯಿಸಬೇಕಾಗುತ್ತದೆ. ಇದರಿಂದ ಸಣ್ಣ, ಅತಿ ಸಣ್ಣ ರೈತರಿಗೆ ಆರ್ಥಿಕ ಹೊರೆಯಾಗಿದೆ. ಆದ ಕಾರಣ ಕೃಷಿ ಇಲಾಖೆಯು ಹಾರ್ವೆಸ್ಟರ್‌ ಯಂತ್ರಕ್ಕೆ ಸಬ್ಸಿಡಿ ದರ ನಿಗದಿಮಾಡಿ, ಮುಂದಿನ ದಿನಗಳಲ್ಲಿ ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ವಿ.ಟಿ.ನಾಗರಾಜ್‌, ತಾಲೂಕು ಘಟಕದ ಅಧ್ಯಕ್ಷ ಸಣ್ಣಕ್ಕಿ ರುದ್ರಪ್ಪ, ಮುಖಂಡರಾದ ಚಿನ್ನದೊರೆ, ರಂಗಪ್ಪ ಇನ್ನಿತರರಿದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ