ಆ್ಯಪ್ನಗರ

ಸ್ನಾತಕೋತ್ತರ ಪದವಿ ಕೇಂದ್ರ ಆರಂಭಿಸಲು ಆಗ್ರಹ

ತಾಲೂಕಿನಲ್ಲಿ ಸ್ನಾತಕೋತ್ತರ ಪದವಿ ಕೇಂದ್ರ ತೆರೆಯುವಂತೆ ಒತ್ತಾಯಿಸಿ ಎಸ್‌ಎಫ್‌ಐ ತಾಲೂಕು ಘಟಕದ ಪದಾಧಿಕಾರಿಗಳು ಬುಧವಾರ ಸರಕಾರಿ ಪದವಿ ಕಾಲೇಜ್‌ ಪ್ರಾಂಶುಪಾಲರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

Vijaya Karnataka 30 Aug 2018, 5:00 am
ಹಗರಿಬೊಮ್ಮನಹಳ್ಳಿ ; ತಾಲೂಕಿನಲ್ಲಿ ಸ್ನಾತಕೋತ್ತರ ಪದವಿ ಕೇಂದ್ರ ತೆರೆಯುವಂತೆ ಒತ್ತಾಯಿಸಿ ಎಸ್‌ಎಫ್‌ಐ ತಾಲೂಕು ಘಟಕದ ಪದಾಧಿಕಾರಿಗಳು ಬುಧವಾರ ಸರಕಾರಿ ಪದವಿ ಕಾಲೇಜ್‌ ಪ್ರಾಂಶುಪಾಲರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.
Vijaya Karnataka Web BLR-BLY29HBH1


ಸಂಘಟನೆಯ ಅಧ್ಯಕ್ಷ ಜಯಸೂರ್ಯ ಮಾತನಾಡಿ, ಸ್ನಾತಕೋತ್ತರ ಪದವಿ ಅಭ್ಯಾಸಕ್ಕೆ ತಾಲೂಕಿನ ವಿದ್ಯಾರ್ಥಿಗಳು ಬಳ್ಳಾರಿ ಮತ್ತು ಕೊಪ್ಪಳ ಕೇಂದ್ರಕ್ಕೆ ತೆರಳುವಂತಾಗಿದೆ. ಇದರಿಂದಾಗಿ ವಿದ್ಯಾರ್ಥಿಗಳಿಗೆ ಹೆಚ್ಚಿನ ಹೊರೆಯಾಗುತ್ತಿದೆ. ಹೊಸಪೇಟೆ, ಹೂವಿನಹಡಗಲಿ, ಹರಪನಹಳ್ಳಿ, ಸಂಡೂರು, ಕೊಟ್ಟೂರು ತಾಲೂಕಿನ ಕಾಲೇಜುಗಳಲ್ಲಿ 10 ಸಾವಿರಕ್ಕೂ ಹೆಚ್ಚು ಪದವಿ ವಿದ್ಯಾರ್ಥಿಗಳಿದ್ದಾರೆ. ಈ ಪೈಕಿ ಒಟ್ಟು 6 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿಗೆ ಜಿಲ್ಲೆ ಸೇರಿ ಇತರೆ ಜಿಲ್ಲಾ ಕೇಂದ್ರಗಳಿಗೆ ತೆರಳುವಂತಾಗಿದೆ. ವಿದ್ಯಾರ್ಥಿಗಳಿಗೆ ಉಂಟಾಗುತ್ತಿರುವ ಆರ್ಥಿಕ ಹೊರೆ ತಪ್ಪಿಸಲು ವಿ.ಎಸ್‌.ಕೆ.ಸ್ನಾತಕೋತ್ತರ ಕೇಂದ್ರದ ವ್ಯಾಪ್ತಿಯ ಕೇಂದ್ರವನ್ನು ಪಟ್ಟಣದಲ್ಲಿ ಆರಂಭಿಸಬೇಕು ಎಂದು ಆಗ್ರಹಿಸಿದರು. ಪ್ರಾಧ್ಯಾಪಕ ಬುಳ್ಳಪ್ಪ ಅವರಿಗೆ ಮನವಿ ಸಲ್ಲಿಸಿದರು. ಸಂಘಟನೆಯ ಪದಾಧಿಕಾರಿಗಳಾದ ರಮೇಶ್‌, ನಾಗರಾಜ, ಸುಮಾ, ಸುಷ್ಮಿತಾ, ನಾಗವೇಣಿ, ರಶ್ಮಿ, ಮಹಾಲಕ್ಷ್ಮಿ, ಮಹೇಶ, ಜಗದೀಶ, ಮಂಜುನಾಥ, ರಾಜು ಇತರರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ