ಆ್ಯಪ್ನಗರ

ಡಿಸಿಎಂ ಕುರಿತ ಹೇಳಿಕೆ ನೀಡಿ ಮುಜುಗರಕ್ಕೀಡು ಮಾಡಬೇಡಿ: ಶ್ರೀರಾಮುಲು ಮನವಿ

"ತಮಗೆ ಡಿಸಿಎಂ ಸ್ಥಾನ ನೀಡುವ ವಿಚಾರದ ಬಗ್ಗೆ ಬಳ್ಳಾರಿ ಶಾಸಕ ಜಿ. ಸೋಮಶೇಖರ ರೆಡ್ಡಿ ಹಾಗೂ ಇತರ ಯಾವ ಶಾಸಕರು ಈ ಬಗ್ಗೆ ಹೇಳಿಕೆ ನೀಡುತ್ತಾರೋ ಅವರ ಬಳಿ ಮಾತನಾಡಿ ಈ ಕುರಿತು ಮನವರಿಕೆ ಮಾಡಿ ತಿಳಿಸುವೆ'' - ಬಿ. ಶ್ರೀರಾಮುಲು.

Vijaya Karnataka 16 Oct 2019, 7:43 pm
ಬಳ್ಳಾರಿ: ಸರಕಾರದಲ್ಲಿ ತಮಗೆ ನೀಡಿರುವ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದು, ಉಪಮುಖ್ಯಮಂತ್ರಿ ಸ್ಥಾನ ನೀಡುವ ವಿಚಾರದಲ್ಲಿ ಯಾವೊಬ್ಬ ಶಾಸಕರೂ ಹೇಳಿಕೆನೀಡಿ ಪಕ್ಷವನ್ನು ಮುಜುಗರಕ್ಕೀಡು ಮಾಡಬಾರದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಬಿ ಶ್ರೀರಾಮುಲು ಮನವಿ ಮಾಡಿದರು.
Vijaya Karnataka Web BSriramulu


ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ತಮಗೆ ಡಿಸಿಎಂ ಸ್ಥಾನ ನೀಡುವ ವಿಚಾರದ ಬಗ್ಗೆ ಬಳ್ಳಾರಿ ಶಾಸಕ ಜಿ. ಸೋಮಶೇಖರ ರೆಡ್ಡಿ ಹಾಗೂ ಇತರ ಯಾವ ಶಾಸಕರು ಈ ಬಗ್ಗೆ ಹೇಳಿಕೆ ನೀಡುತ್ತಾರೋ ಅವರ ಬಳಿ ಮಾತನಾಡಿ ಈ ಕುರಿತು ಮನವರಿಕೆ ಮಾಡಿ ತಿಳಿಸುವೆ'' ಎಂದರು.

"ನೇಕಾರರು ಹಾಗೂ ರೈತರ ಸಾಲ ಮನ್ನಾ ವಿಚಾರದಲ್ಲಿ ಸಾಕಷ್ಟು ಗೊಂದಲಗಳಿವೆ. ಈ ಬಗ್ಗೆ ಯಡಿಯೂರಪ್ಪ ಬಳಿ ಚರ್ಚೆ ಮಾಡಲಾಗುವುದು" ಎಂದ ಅವರು, "ವಿಜಯನಗರ ಕ್ಷೇತ್ರದ ಉಪಚುನಾವಣೆಗೆ ಸ್ಪರ್ಧಿಸಲು ಪ್ರಬಲ ಆಕಾಂಕ್ಷಿಯಾಗಿರುವ ಗವಿಯಪ್ಪ ಅವರನ್ನು ಮನವೊಲಿಸಲಾಗುವುದು. ಗವಿಯಪ್ಪ ಅವರು ನನ್ನ ಆತ್ಮೀಯ ಸ್ನೇಹಿತರಾಗಿದ್ದಾರೆ. ಅವರಿಗೆ ಕೊಟ್ಟ ಸ್ಥಾನಮಾನ ಸ್ವೀಕರಿಸಬೇಕು. ಮುಂದಿನ ಚುನಾವಣೆಯಲ್ಲಿ ವಿಜಯನಗರ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಮುಖ್ಯ'' ಎಂದರು.

ಸರಳ ಹಂಪಿ ಉತ್ಸವ:

"ವಿಶ್ವ ವಿಖ್ಯಾತ ಹಂಪಿ ಉತ್ಸವ ಆಚರಣೆ ಕುರಿತು ಸಂಪುಟದಲ್ಲಿ ಚರ್ಚಿಸಲಾಗಿದೆ. ರಾಜ್ಯದಲ್ಲಿ ಅತಿವೃಷ್ಟಿ ಇರುವ ಕಾರಣ ಸರಳವಾಗಿ ಆಚರಿಸಲು ಸಿಎಂ ಸೂಚಿಸಿದ್ದಾರೆ. ಎರಡು ದಿನ ಹಂಪಿ ಉತ್ಸವ ಮಾಡಲಾಗುವುದು. ಯಾವುದೇ ಕಾರಣಕ್ಕೂ ಹಂಪಿ ಉತ್ಸವ ಕೈಬಿಡುವ ಪ್ರಶ್ನೆ ಇಲ್ಲ," ಎಂದು ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ