ಆ್ಯಪ್ನಗರ

‘ಬದುಕು ರೂಪಿಸದ ಶಿಕ್ಷಣ’

ಈಗಿನ ಶಿಕ್ಷ ಣ, ವಿದ್ಯಾರ್ಥಿಯ ಬದುಕನ್ನು ರೂಪಿಸುತ್ತಿಲ್ಲ. ಅದು ಕೇವಲ ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸುವುದಕ್ಕೆ ಸೀಮಿತವಾಗಿದೆ ಎಂದು ವಿಜಯನಗರ ಕಾಲೇಜಿನ ಉಪನ್ಯಾಸಕ ಡಾ.ಚಂದ್ರಶೇಖರ್‌ ಶಾಸ್ತ್ರಿ ಕಳವಳ ವ್ಯಕ್ತಪಡಿಸಿದರು.

Vijaya Karnataka 6 Sep 2018, 5:00 am
ಹೊಸಪೇಟೆ : ಈಗಿನ ಶಿಕ್ಷ ಣ, ವಿದ್ಯಾರ್ಥಿಯ ಬದುಕನ್ನು ರೂಪಿಸುತ್ತಿಲ್ಲ. ಅದು ಕೇವಲ ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸುವುದಕ್ಕೆ ಸೀಮಿತವಾಗಿದೆ ಎಂದು ವಿಜಯನಗರ ಕಾಲೇಜಿನ ಉಪನ್ಯಾಸಕ ಡಾ.ಚಂದ್ರಶೇಖರ್‌ ಶಾಸ್ತ್ರಿ ಕಳವಳ ವ್ಯಕ್ತಪಡಿಸಿದರು.
Vijaya Karnataka Web BLR-BLR05HPT-01


ನಗರದ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಬುಧವಾರ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಸಾರ್ವಜನಿಕ ಶಿಕ್ಷ ಣ ಇಲಾಖೆ ಜಂಟಿಯಾಗಿ ಹಮ್ಮಿಕೊಂಡಿದ್ದ ಸರ್ವಪಲ್ಲಿ ರಾಧಾಕೃಷ್ಣನ್‌ ಅವರ 130ನೇ ಜನ್ಮದಿನ ನಿಮಿತ್ತ ಆಯೋಜಿಸಿದ್ದ ಶಿಕ್ಷ ಕರ ದಿನಾಚರಣೆಯಲ್ಲಿ ಉಪನ್ಯಾಸ ನೀಡಿದರು.

ಏನೆಲ್ಲಾ ಸೌಲಭ್ಯಗಳಿದ್ದರೂ ಅಂಕಗಳ ಶ್ರೇಣಿಯಲ್ಲಿ ವಿದ್ಯಾರ್ಥಿಗಳು ಹಿಂದೆ ಉಳಿಯುತ್ತಿದ್ದಾರೆ. ಕನ್ನಡ ಮತ್ತು ಇಂಗ್ಲಿಷ್‌ ಮಾಧ್ಯಮಗಳಲ್ಲಿ ಪೈಪೋಟಿ ಉಂಟಾಗಿದೆ ಎಂದು ಹೇಳಿದರು.

ಕಾಂಗ್ರೆಸ್‌ ಮುಖಂಡ ರತನ್‌ ಸಿಂಗ್‌ ಅವರು ಉದ್ಘಾಟಿಸಿದರು. ಉಪವಿಭಾಗಾಧಿಕಾರಿ ಲೋಕೇಶ್‌ ಮಾತನಾಡಿದರು.

ತಾಲೂಕು ಪಂಚಾಯಿತಿ ಅಧ್ಯಕ್ಷೆ ಜೋಗದ ನೀಲಮ್ಮ ಅಧ್ಯಕ್ಷ ತೆ ವಹಿಸಿದ್ದರು. ಉಪಾಧ್ಯಕ್ಷ ರಾದ ಬಿ.ಎಸ್‌.ಶಿವಮೂರ್ತಿ, ತಹಸೀಲ್ದಾರ್‌ ಎಚ್‌.ವಿಶ್ವನಾಥ, ಕ್ಷೇತ್ರ ಶಿಕ್ಷ ಣಾಧಿಕಾರಿ ಎಲ್‌.ಡಿ.ಜೋಷಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಟಿ.ವೆಂಕೋಬಪ್ಪ, ಮುಖಂಡರಾದ ಬಿ.ಎಸ್‌.ರಾಜಪ್ಪ, ಸಣ್ಣ ಈರಪ್ಪ, ಗೌಸ್‌, ಬಡಾವಲಿ, ವೀರಸ್ವಾಮಿ, ಎಂ.ಧನರಾಜ್‌ ಇತರರಿದ್ದರು.

ಶಾಸಕ ಗೈರು : ಶಿಕ್ಷ ಕರು ಶಾಸಕ ಆನಂದ್‌ ಸಿಂಗ್‌ ಬರುವಿಕೆಗಾಗಿ ಒಂದು ಗಂಟೆ ಕಾಲ ಕಾದರು. ಆದರೂ ಶಾಸಕರು ಕಾರ್ಯಕ್ರಮಕ್ಕೆ ಬರಲಿಲ್ಲ. ಶಾಸಕ ಆನಂದ್‌ ಸಿಂಗ್‌ ಮತ್ತು ಕಂಪ್ಲಿ ಶಾಸಕ ಜಿ.ಎನ್‌.ಗಣೇಶ ಅವರಿಗೆ ನಗರಸಭೆಯ ಅಧ್ಯಕ್ಷ ಗುಜ್ಜಲ್‌ ನಿಂಗಪ್ಪ ಅವರು ನಗರದಲ್ಲಿ ಸಹಕಾರಿ ಕಲ್ಯಾಣ ಮಂಟಪದಲ್ಲಿ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಸರಕಾರಿ ಕಾರ್ಯಕ್ರಮ ಬಿಟ್ಟು ಶಾಸಕ ಆನಂದ ಸಿಂಗ್‌ ಖಾಸಗಿ ಸಮಾರಂಭಕ್ಕೆ ಹಾಜರಾಗಿದ್ದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಯಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ