ಆ್ಯಪ್ನಗರ

ಮಾಜಿ ಶಾಸಕ ಎಂ.ಪಿ.ರವೀಂದ್ರ ನಾಮಪತ್ರ ಸಲ್ಲಿಕೆ

ಬಿಡಿಸಿಸಿ ಬ್ಯಾಂಕಿನ ಆಡಳಿತ ಮಂಡಳಿ ಚುನಾವಣೆಯ ಹಿನ್ನೆಲೆಯಲ್ಲಿ, ನಗರದ ಬಿಡಿಸಿಸಿ ಕೇಂದ್ರ ಕಚೇರಿಯಲ್ಲಿ ಬುಧವಾರ ಎಂ.ಪಿ.ರವೀಂದ್ರ ನಾಮಪತ್ರ ಸಲ್ಲಿಸಿದರು.

Vijaya Karnataka 18 Oct 2018, 5:00 am
ಹೊಸಪೇಟೆ: ಬಿಡಿಸಿಸಿ ಬ್ಯಾಂಕಿನ ಆಡಳಿತ ಮಂಡಳಿ ಚುನಾವಣೆಯ ಹಿನ್ನೆಲೆಯಲ್ಲಿ, ನಗರದ ಬಿಡಿಸಿಸಿ ಕೇಂದ್ರ ಕಚೇರಿಯಲ್ಲಿ ಬುಧವಾರ ಎಂ.ಪಿ.ರವೀಂದ್ರ ನಾಮಪತ್ರ ಸಲ್ಲಿಸಿದರು.
Vijaya Karnataka Web BLR-BLR17HPT-03


ಬಳಿಕ ಅವರು ಮಾತನಾಡಿ, ಈ ಹಿಂದೆ ಉತ್ತಮ ಆಡಳಿತ ನೀಡಿದ್ದು, ಮರು ಆಯ್ಕೆಯಾಗುವ ವಿಶ್ವಾಸವಿದೆ. ಈ ಐದು ವರ್ಷದಲ್ಲಿ ಆನ್‌ಲೈನ್‌ ಬ್ಯಾಂಕಿಂಗ್‌, ರುಪೀ ಕಾರ್ಡ್‌ ಸೌಲಭ್ಯವನ್ನು ಗ್ರಾಹಕರಿಗೆ ನೀಡಲಾಗಿದೆ. ಅಲ್ಲದೇ, ಸಹಕಾರ ಸಂಘಗಳ ಕಚೇರಿ ಕಂಪ್ಯೂಟರೀಕರಣಗೊಳಿಸಲು 1 ಲಕ್ಷ ರೂಪಾಯಿ ನೆರವನ್ನು ನೀಡಲಾಗಿದೆ ಎಂದರು.

ಲೋಕಸಭಾ ಉಪಚುನಾವಣೆಯು ಸರಕಾರಕ್ಕೆ ಮತ್ತು ಚುನಾವಣೆಯ ಆಯೋಗಕ್ಕೆ ಆರ್ಥಿಕ ಹೊರೆಯಾಗಿದೆ. ಚುನಾವಣಾ ಆಯೋಗ ಆರು ತಿಂಗಳಿನಲ್ಲಿ ಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಮಾಡಬಹುದಿತ್ತು. ವಿ.ಎಸ್‌.ಉಗ್ರಪ್ಪ ಅವರನ್ನು ಹೊರಗಿನವರು ಎಂದು ಬಿಂಬಿಸಲಾಗುತ್ತಿದೆ. ಈ ಹಿಂದೆ ಸುಷ್ಮಾ ಸ್ವರಾಜ್‌, ಸೋನಿಯಾ ಗಾಂಧಿ ಅವರು ಜಿಲ್ಲೆಯಿಂದ ಸ್ಪರ್ಧಿಸಿದಾಗ ಯಾರೂ ಯಾಕೆ ಚಕಾರ ಎತ್ತಲಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಚುನಾವಣಾಧಿಕಾರಿಯಾದ ತಹಸೀಲ್ದಾರ್‌ ಎಚ್‌.ವಿಶ್ವನಾಥ ಮಾತನಾಡಿ, ಅಕ್ಟೋಬರ್‌ 16 ರಿಂದ 23 ರವರೆಗೆ ನಾಮಪತ್ರವನ್ನು ಸಲ್ಲಿಸಬಹುದಾಗಿದೆ. ಬುಧವಾರ 10 ನಾಮಪತ್ರ ಸಲ್ಲಿಕೆಯಾಗಿವೆ. 24 ರಂದು ನಾಮಪತ್ರಗಳನ್ನು ಪರಿಶೀಲನೆ ಮಾಡಲಾಗುತ್ತದೆ. 25 ರಂದು ನಾಪತ್ರಗಳನ್ನು ಹಿಂಪಡೆಯಲು ಅವಕಾಶವಿದೆ. 31 ರಂದು ಸಂಜೆ 4ರವರೆಗೆ ಮತದಾನ ಮಾಡುವ ಅವಕಾಶ ಇರುತ್ತದೆ. ಮತದಾನ ಪೂರ್ಣಗೊಂಡ ಬಳಿಕ ಎಣಿಕೆ ಕಾರ್ಯ ನಡೆಯಲಿದೆ ಎಂದು ತಿಳಿಸಿದರು.

ಬಿಡಿಸಿಸಿ ಬ್ಯಾಂಕಿನ ವ್ಯಾಪ್ತಿಯಲ್ಲಿ ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ-1, ಬಳ್ಳಾರಿ, ಸಿರುಗುಪ್ಪ, ಸಂಡೂರು, ಹೊಸಪೇಟೆ, ಹಗರಿಬೊಮ್ಮನಹಳ್ಳಿ, ಹಡಗಲಿ, ಕೂಡ್ಲಿಗಿ, ತಾಲೂಕು ವ್ಯವಸಾಯ ಉತ್ಪನ್ನ ಮಾರಾಟ ಸಹಕಾರ ಸಂಘ, ಅರ್ಬನ್‌ ಬ್ಯಾಂಕ್‌ ಮತ್ತು ಪತ್ತಿನ ಸಹಕಾರ ಸಂಘ ಸೇರಿದಂತೆ ಒಟ್ಟು 10 ಸಂಘಗಳು ಬರುತ್ತವೆ. 415 ಮತದಾರರು ಇದ್ದಾರೆ ಎಂದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ