ಆ್ಯಪ್ನಗರ

ಯೋಗದಿಂದ ಮಾನಸಿಕ, ದೈಹಿಕ ಸದೃಢತೆ

ಯೋಗಾಸನ ಅಭ್ಯಾಸದಿಂದ ಮಾನಸಿಕ ಮತ್ತು ದೈಹಿಕವಾಗಿ ಸದೃಢರಾಗಬಹುದು ಎಂದು ಜಿಲ್ಲಾಧಿಕಾರಿ ಎಸ್‌.ಎಸ್‌.ನಕುಲ್‌ ಹೇಳಿದರು.

Vijaya Karnataka 22 Jun 2019, 5:00 am
ಬಳ್ಳಾರಿ: ಯೋಗಾಸನ ಅಭ್ಯಾಸದಿಂದ ಮಾನಸಿಕ ಮತ್ತು ದೈಹಿಕವಾಗಿ ಸದೃಢರಾಗಬಹುದು ಎಂದು ಜಿಲ್ಲಾಧಿಕಾರಿ ಎಸ್‌.ಎಸ್‌.ನಕುಲ್‌ ಹೇಳಿದರು.
Vijaya Karnataka Web from yoga to mental physical well being
ಯೋಗದಿಂದ ಮಾನಸಿಕ, ದೈಹಿಕ ಸದೃಢತೆ


ನಗರದ ಮುನ್ಸಿಪಲ್‌ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆಯುಷ್‌ ಇಲಾಖೆ ಹಾಗೂ ತಾರಾನಾಥ ಸರಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಯೋಗಾಭ್ಯಾಸ ಎಂಬುದು ಕೇವಲ ಯೋಗ ದಿನಕ್ಕೆ ಮಾತ್ರ ಸೀಮಿತವಾಗಬಾರದು. ಪ್ರತಿಯೊಬ್ಬರೂ ದಿನನಿತ್ಯ ಯೋಗಾಭ್ಯಾಸ ಮಾಡಿ ಆರೋಗ್ಯ ವೃದ್ಧಿಸಿಕೊಳ್ಳಬೇಕು. ಯೋಗದಿಂದ ಮಾನಸಿಕ, ದೈಹಿಕ ಸದೃಢತೆ ದೊರೆಯುವುದರಿಂದ ಮನುಷ್ಯ ಆರೋಗ್ಯವಾಗಿರುತ್ತಾನೆ. ಇಂದು ಯೋಗಕ್ಕೆ ವಿಶ್ವವೇ ಮಾನ್ಯತೆ ನೀಡುತ್ತಿರುವುದು ಉತ್ತಮ ಸಂಗತಿ. ದಿನನಿತ್ಯ ಯೋಗ ಮಾಡಿ ಆರೋಗ್ಯ ಕಾಪಾಡಿಕೊಳ್ಳಿ ಎಂದರು. ನಂತರ ಪೊಲೀಸ್‌ ಸಿಬ್ಬಂದಿ ಹಾಗೂ ನಗರದ ತಾರಾನಾಥ ಸರಕಾರಿ ಆಯುರ್ವೇದ ಕಾಲೇಜಿನ ವಿದ್ಯಾರ್ಥಿಗಳಾದ ನವೀನ, ಲಕ್ಷ ್ಮಣ್‌, ಐಶ್ವರ್ಯ, ದರ್ಶಿನಿ, ಶ್ವೇತಾ, ಸಹನಾ ತಂಡದವರ ಯೋಗಾಸನ ಪ್ರದರ್ಶಿಸಿದರು. ಜಿ.ಪಂ ಸಿಇಒ ಕೆ.ನಿತೀಶ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ ್ಮಣ ನಿಂಬರಗಿ, ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಲಾವಣ್ಯ, ಪಾಲಿಕೆ ಆಯುಕ್ತೆ ಎಂ.ವಿ.ತುಷಾರಮಣಿ, ಜಿ.ಪಂ ಉಪಾಧ್ಯಕ್ಷೆ ಪಿ.ದೀನಾ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಬಸರೆಡ್ಡಿ ಮತ್ತಿತರರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ