ಆ್ಯಪ್ನಗರ

ಸರಕಾರಿ ಶಾಲೆ ವಿಲೀನ ಪ್ರಕ್ರಿಯೆ ಕೈಬಿಡಲು ಆಗ್ರಹ

ದಾಖಲಾತಿಯ ಕಡಿಮೆ ಇದೆ ಎಂಬ ನೆಪದಲ್ಲಿ ಸರಕಾರಿ ಶಾಲೆಗಳನ್ನು ಮುಚ್ಚುತ್ತಿರುವ ಪ್ರಕ್ರಿಯೆ ಕೂಡಲೇ ನಿಲ್ಲಿಸಬೇಕು ಎಂದು ಆಗ್ರಹಿಸಿ, ಭಾರತ ವಿದ್ಯಾರ್ಥಿ ಫೆಡರೇಶÜನ್‌ ತಾಲೂಕು ಸಮಿತಿಯ ಪದಾಧಿಕಾರಿಗಳು ನಗರದ ಕ್ಷೇತ್ರ ಶಿಕ್ಷ ಣಾಧಿಕಾರಿ ಎಲ್‌.ಡಿ.ಜೋಶಿ ಅವರ ಮೂಲಕ ರಾಜ್ಯ ಸರಕಾರಕ್ಕೆ ಸೋಮವಾರ ಮನವಿ ರವಾನಿಸಿದರು.

Vijaya Karnataka 14 Aug 2018, 5:00 am
ಹೊಸಪೇಟೆ : ದಾಖಲಾತಿಯ ಕಡಿಮೆ ಇದೆ ಎಂಬ ನೆಪದಲ್ಲಿ ಸರಕಾರಿ ಶಾಲೆಗಳನ್ನು ಮುಚ್ಚುತ್ತಿರುವ ಪ್ರಕ್ರಿಯೆ ಕೂಡಲೇ ನಿಲ್ಲಿಸಬೇಕು ಎಂದು ಆಗ್ರಹಿಸಿ, ಭಾರತ ವಿದ್ಯಾರ್ಥಿ ಫೆಡರೇಶÜನ್‌ ತಾಲೂಕು ಸಮಿತಿಯ ಪದಾಧಿಕಾರಿಗಳು ನಗರದ ಕ್ಷೇತ್ರ ಶಿಕ್ಷ ಣಾಧಿಕಾರಿ ಎಲ್‌.ಡಿ.ಜೋಶಿ ಅವರ ಮೂಲಕ ರಾಜ್ಯ ಸರಕಾರಕ್ಕೆ ಸೋಮವಾರ ಮನವಿ ರವಾನಿಸಿದರು.
Vijaya Karnataka Web BLR-BLR13HPT-04


14,451 ಶಾಲೆಗಳನ್ನು ವಿಲೀನದ ಹೆಸರಿನಲ್ಲಿ ಮುಚ್ಚಲಾಗುತ್ತಿದೆ. ಇದರಿಂದ ಬಡವರ ಮಕ್ಕಳು ಶಿಕ್ಷ ಣದಿಂದ ವಂಚಿತರಾಗಲಿದ್ದಾರೆ. ಈ ಪ್ರಕ್ರಿಯೆಯಿಂದ ಸರಕಾರ ಹಿಂದೆ ಸರಿಯಬೇಕು. ಇಲ್ಲದಿದ್ದರೇ ಹೋರಾಟ ರೂಪಿಸಲಾಗುವುದು ಎಂದು ಸಮಿತಿ ತಾಲೂಕು ಘಟಕದ ಅಧ್ಯಕ್ಷ ಎನ್‌.ಶರಣಪ್ಪ ಎಚ್ಚರಿಸಿದರು.

ರಾಜ್ಯದಲ್ಲಿ 2,515 ಶಾಲೆಗಳಿಗೆ ಸ್ವಂತ ಕಟ್ಟಡಗಳು ಇಲ್ಲ. ಅಲ್ಲದೇ, 27,039 ಶಾಲೆಯ ಕಟ್ಟಡಗಳು ದುರಸ್ತಿಗೆ ಬಂದಿವೆ. 8,389 ಶಾಲೆಗಳಿಗೆ ಕುಡಿವ ನೀರಿನ ಸೌಕರ್ಯವಿಲ್ಲ. ಅಲ್ಲದೇ, ಶಿಕ್ಷ ಕರ ಕೊರತೆ, ಆಟದ ಮೈದಾನದ ಸಮಸ್ಯೆ ಸೇರಿ ಇನ್ನಿತರ ಸಮಸ್ಯೆಗಳಿದ್ದು, ಕೂಡಲೇ ಇವುಗಳನ್ನು ಪರಿಹರಿಸಬೇಕು. ಸರಕಾರಿ ಶಾಲೆಗಳನ್ನು ಮುಚ್ಚುತ್ತಿರುವುದನ್ನು ವಿರೋಧಿಸಿ ಆ.17 ರಂದು ಬೆಂಗಳೂರಿನ ಶಿಕ್ಷ ಣ ಇಲಾಖೆಗೆ ಮುತ್ತಿಗೆ ಹಾಕಲಾಗುವುದು ಎಂದು ಹೇಳಿದರು. ಮುಖಂಡರಾದ ಜೆ.ಶಿವಕುಮಾರ, ರಮೇಶ, ಬಿ.ಸೂರ್ಯಕಿರಣ ಸೇರಿದಂತೆ ಇನ್ನಿತರರಿದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ