ಬಳ್ಳಾರಿ: ಕೋವಿಡ್ ಸಮಯದಲ್ಲಿ ನೇಕಾರರ ನೆರವಿಗಾಗಿ ನೇಕಾರ ಸಮ್ಮಾನ್ ಯೋಜನೆ ಜಾರಿಗೆ ತರಲಾಗಿತ್ತು. ಆದರೆ ಈ ಯೋಜನೆಯಡಿ ಬಿಡುಗಡೆ ಮಾಡಿದ ಹಣ ಎಲ್ಲ ಫಲಾನುಭವಿಗಳಿಗೆ ತಲುಪಿಸುವ ಕೆಲಸ ಯಾಕೆ ಮಾಡಿಲ್ಲ..? ಕೂಡಲೇ ಬಾಕಿ ಉಳಿದ ಖಾತೆಗಳಿಗೆ ಹಣ ಸಂದಾಯ ಮಾಡುವ ಕೆಲಸ ಮಾಡಿ ಎಂದು ಕೈಮಗ್ಗ ಮತ್ತು ಜವಳಿ, ಸಕ್ಕರೆ ಮತ್ತು ಕಬ್ಬು ಅಭಿವೃದ್ಧಿ ಸಚಿವ ಶಂಕರ ಬಿ. ಪಾಟೀಲ ಮುನೇನಕೊಪ್ಪ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಬಳ್ಳಾರಿ ನಗರದ ಜಿ. ಪಂ. ನಜೀರ್ ಸಾಬ್ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಬಳ್ಳಾರಿ ವಿಭಾಗ (ಉತ್ತರ ವಲಯ) ಮಟ್ಟದ ಕೈ ಮಗ್ಗ ಮತ್ತು ಜವಳಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸರ್ಕಾರದ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕೆಲಸ ಮಾಡಿ, ನೇಕಾರ ಸಮುದಾಯದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಅನುದಾನ ಬಳಕೆಯ ಬಗ್ಗೆ ಮಾಹಿತಿ ನೀಡಿ. ಸರ್ಕಾರದಿಂದ ಸಬ್ಸಿಡಿ ಪಡೆದವರು ಅನುದಾನದಡಿಯಲ್ಲಿ ಸೌಲಭ್ಯ ಪಡೆದ ಬಗ್ಗೆ ನಾಮಫಲಕ ಅಳವಡಿಸುತ್ತಿಲ್ಲ. ಹಲವೆಡೆ ನಾಮಫಲಕ ತೆರವುಗೊಳಿಸಿದ್ದು, ಅಧಿಕಾರಿಗಳು ಈ ಕುರಿತು ಗಮನ ಹರಿಸಿ ಎಂದು ಸೂಚಿಸಿದರು.
ಸಭೆ ಕೇವಲ ನಾಮಕಾವಸ್ತೆಗೆ ಆಗಬಾರದು, ಮುಂದಿನ ದಿನಗಳಲ್ಲಿ ಎಲ್ಲ ಮನವಿಗಳನ್ನು ಪರಿಶೀಲಿಸಿ, ಬಗೆಹರಿಸುವ ಕಾರ್ಯ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, ಯಾವುದೇ ರೀತಿಯ ಅನುದಾನ ಬಾಕಿ ಉಳಿಯದಂತೆ ನೋಡಿಕೊಳ್ಳಿ. ಭ್ರಷ್ಟಾಚಾರ ಮುಕ್ತವಾಗಿ ಎಲ್ಲಾ ಫಲಾನುಭವಿಗಳಿಗೆ ನೇರವಾಗಿ ಅವರ ಖಾತೆಗಳಿಗೆ ಹಣ ಬಿಡುಗಡೆ ಮಾಡಲಾಗುತ್ತಿದೆ. ಇದುವರೆಗೂ ಇಲಾಖೆಯ ಹಲವಾರು ಯೋಜನೆಗಳ ಬಗ್ಗೆ ಜನರಿಗೆ ಮಾಹಿತಿಯ ಕೊರತೆಯಿದ್ದು, ಅರಿವು ಮೂಡಿಸುವ ಕೆಲಸ ಮಾಡಿ ಎಂದರು.
ಎಲ್ಲರು ಒಂದಾಗಿ ಸಮುದಾಯದ ಅಭಿವೃದ್ಧಿಗಾಗಿ ಕೆಲಸ ಮಾಡೋಣ. ಸರ್ಕಾರದ ಮೇಲೆ ಜನರು ವಿಶ್ವಾಸವನ್ನಿಟ್ಟುಕೊಂಡಿದ್ದು,ಅದನ್ನು ಉಳಿಸಿಕೊಳ್ಳೋಣ ಎಂದರು. ಕೋವಿಡ್ ಸಮಯದಲ್ಲಿ ನೇಕಾರರು, ಶಾಲಾ ಮತ್ತು ಅಂಗನವಾಡಿ ಮಕ್ಕಳು ಸೇರಿದಂತೆ ಎಲ್ಲಾ ವರ್ಗಗಳಿಗೆ ಕೋವಿಡ್ ಸಮಯದಲ್ಲಿ ಜೀವನಕ್ಕೆ ನೆರವಾಗಲು ಹಣ ನೀಡಲಾಗಿದೆ ಎಂದು ಹೇಳಿದರು.
ಕಾಟನ್ ಅಸೋಸಿಯೇಷನ್ನ ಅಧ್ಯಕ್ಷ ದೊಡ್ಡನಗೌಡ ಅವರು ಮಾತನಾಡಿ, ಬಳ್ಳಾರಿಯಲ್ಲಿ 85 ಜಿನ್ನಿಂಗ್ ಫ್ಯಾಕ್ಟರಿಗಳಿದ್ದು, ನಗರದ ಕೈಗಾರಿಕಾ ಪ್ರದೇಶಲ್ಲಿಯೇ 45 ಫ್ಯಾಕ್ಟರಿಗಳಿವೆ. ನಗರದಿಂದ ದೂರವಿರುವ ಪ್ರಯುಕ್ತ ಏನಾದರೂ ಅಗ್ನಿ ಅವಘಡಗಳು ಸಂಭವಿಸಿದರೆ ಶೀಘ್ರವಾಗಿ ಸ್ಪಂದಿಸಲು ಆಗುತ್ತಿಲ್ಲ. ಹೀಗಾಗಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಶಾಮಕ ಠಾಣೆ ನಿರ್ಮಾಣ, ಹಗರಿಗೆ ಕೃಷಿ ಕಾಲೇಜು ಸೇರಿದಂತೆ ಹಲವು ಸಮಸ್ಯೆಗ ಕುರಿತು ಸಚಿವರಿಗೆ ಮನವಿ ಮಾಡಿದರು.
ಮನವಿಗೆ ಸ್ಪಂದಿಸಿದ ಸಚಿವರು, ಈ ಕುರಿತು ಮುಂದಿನ ದಿನಗಳಲ್ಲಿ ಸಭೆ ನಡೆಸಿ, ಪರಿಹಾರ ಒದಗಿಸುವುದಾಗಿ ಭರವಸೆ ನೀಡಿದರು.
ಇಲಾಖೆಯ ಹಲವು ಕಾಮಗಾರಿ ಹಾಗೂ ಯೋಜನೆಯ ಅನುಷ್ಠಾನದ ಬಗ್ಗೆ ಸಚಿವರು ಅಗತ್ಯ ಮಾಹಿತಿ ಪಡೆದರು. ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಲವು ಸಮಸ್ಯೆಗಳ ಕುರಿತು ಸಚಿವರ ಗಮನಕ್ಕೆ ತಂದರು.
ಕೈ ಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕ ವಿಠ್ಠಲ್ ರಾಜು ಅವರು ಮಾತನಾಡಿ ಬಳ್ಳಾರಿಯ ವಲಯದ ವ್ಯಾಪ್ತಿಗೆ ಒಳಪಡುವ ಬಳ್ಳಾರಿ, ವಿಜಯನಗರ, ಕೊಪ್ಪಳ, ರಾಯಚೂರು, ಕಲ್ಬುರ್ಗಿ, ಬೀದರ್, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ 1,943 ಜನ ಅಲೈಡ್ ವರ್ಕರ್ಸ್, 3,343 ಜನ ನೇಕಾರರು ಸೇರಿದಂತೆ ಒಟ್ಟು 5,286 ಜನ ಕೆಲಸ ಮಾಡುತ್ತಿದ್ದಾರೆ. 7 ಜಿಲ್ಲೆಗಳಲ್ಲಿ 75 ಎಸ್ಎಂಓ ತರಬೇತಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. 57 ಜವಳಿ ಪ್ರೊಸೆಸಿಂಗ್ ಘಟಕಗಳಿವೆ. ಜಿಲ್ಲೆಯಲ್ಲಿ 2021-22 ನೇ ಸಾಲಿನಲ್ಲಿ ರೂ. 2.11 ಕೋಟಿ ಸಾಲಾಧಾರಿತ ಬಂಡವಾಳ ಸಹಾಯ ಧನವಾಗಿ ಅರ್ಹ ಫಲಾನುಭವಿಗಳಿಗೆ ಬಿಡುಗಡೆ ಮಾಡಲಾಗಿದೆ ಎಂದರು.
ಬಳ್ಳಾರಿ ಜಿಲ್ಲೆಯಲ್ಲಿ 82 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಹತ್ತಿ ಬಿತ್ತನೆ ಮಾಡಲಾಗಿದೆ. 487 ಕಾರ್ಯನಿರತ ಕೈಮಗ್ಗಗಳು, 86 ಜಿನ್ನಿಂಗ್ ಘಟಕಗಳು, 850 ಸಿದ್ದ ಉಡುಪು ಘಟಕಗಳಿವೆ. ಒಟ್ಟು 10 ತರಬೇತಿ ಕೇಂದ್ರಗಳಿದ್ದು, ಇದರ ಮೂಲಕ ಹಲವರಿಗೆ ತರಬೇತಿ ನೀಡಲಾಗುತ್ತಿದೆ ಎಂದು ವಿವರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪವನ ಕುಮಾರ್ ಮಾಲಪಾಟಿ, ಜಿಪಂ ಸಿಇಒ ನಂದಿನಿ ಕೆ. ಆರ್, ವಿಶೇಷಾಧಿಕಾರಿ ಗಿರೀಶ್ ಮೈಸೂರು ಸೇರಿದಂತೆ 7 ಜಿಲ್ಲೆಗಳ ಅಧಿಕಾರಿಗಳು ಮತ್ತು ಇತರೆ ಸಿಬ್ಬಂದಿ ಇದ್ದರು.
ಸರ್ಕಾರದ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕೆಲಸ ಮಾಡಿ, ನೇಕಾರ ಸಮುದಾಯದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಅನುದಾನ ಬಳಕೆಯ ಬಗ್ಗೆ ಮಾಹಿತಿ ನೀಡಿ. ಸರ್ಕಾರದಿಂದ ಸಬ್ಸಿಡಿ ಪಡೆದವರು ಅನುದಾನದಡಿಯಲ್ಲಿ ಸೌಲಭ್ಯ ಪಡೆದ ಬಗ್ಗೆ ನಾಮಫಲಕ ಅಳವಡಿಸುತ್ತಿಲ್ಲ. ಹಲವೆಡೆ ನಾಮಫಲಕ ತೆರವುಗೊಳಿಸಿದ್ದು, ಅಧಿಕಾರಿಗಳು ಈ ಕುರಿತು ಗಮನ ಹರಿಸಿ ಎಂದು ಸೂಚಿಸಿದರು.
ಸಭೆ ಕೇವಲ ನಾಮಕಾವಸ್ತೆಗೆ ಆಗಬಾರದು, ಮುಂದಿನ ದಿನಗಳಲ್ಲಿ ಎಲ್ಲ ಮನವಿಗಳನ್ನು ಪರಿಶೀಲಿಸಿ, ಬಗೆಹರಿಸುವ ಕಾರ್ಯ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, ಯಾವುದೇ ರೀತಿಯ ಅನುದಾನ ಬಾಕಿ ಉಳಿಯದಂತೆ ನೋಡಿಕೊಳ್ಳಿ. ಭ್ರಷ್ಟಾಚಾರ ಮುಕ್ತವಾಗಿ ಎಲ್ಲಾ ಫಲಾನುಭವಿಗಳಿಗೆ ನೇರವಾಗಿ ಅವರ ಖಾತೆಗಳಿಗೆ ಹಣ ಬಿಡುಗಡೆ ಮಾಡಲಾಗುತ್ತಿದೆ. ಇದುವರೆಗೂ ಇಲಾಖೆಯ ಹಲವಾರು ಯೋಜನೆಗಳ ಬಗ್ಗೆ ಜನರಿಗೆ ಮಾಹಿತಿಯ ಕೊರತೆಯಿದ್ದು, ಅರಿವು ಮೂಡಿಸುವ ಕೆಲಸ ಮಾಡಿ ಎಂದರು.
ಎಲ್ಲರು ಒಂದಾಗಿ ಸಮುದಾಯದ ಅಭಿವೃದ್ಧಿಗಾಗಿ ಕೆಲಸ ಮಾಡೋಣ. ಸರ್ಕಾರದ ಮೇಲೆ ಜನರು ವಿಶ್ವಾಸವನ್ನಿಟ್ಟುಕೊಂಡಿದ್ದು,ಅದನ್ನು ಉಳಿಸಿಕೊಳ್ಳೋಣ ಎಂದರು. ಕೋವಿಡ್ ಸಮಯದಲ್ಲಿ ನೇಕಾರರು, ಶಾಲಾ ಮತ್ತು ಅಂಗನವಾಡಿ ಮಕ್ಕಳು ಸೇರಿದಂತೆ ಎಲ್ಲಾ ವರ್ಗಗಳಿಗೆ ಕೋವಿಡ್ ಸಮಯದಲ್ಲಿ ಜೀವನಕ್ಕೆ ನೆರವಾಗಲು ಹಣ ನೀಡಲಾಗಿದೆ ಎಂದು ಹೇಳಿದರು.
ಕಾಟನ್ ಅಸೋಸಿಯೇಷನ್ನ ಅಧ್ಯಕ್ಷ ದೊಡ್ಡನಗೌಡ ಅವರು ಮಾತನಾಡಿ, ಬಳ್ಳಾರಿಯಲ್ಲಿ 85 ಜಿನ್ನಿಂಗ್ ಫ್ಯಾಕ್ಟರಿಗಳಿದ್ದು, ನಗರದ ಕೈಗಾರಿಕಾ ಪ್ರದೇಶಲ್ಲಿಯೇ 45 ಫ್ಯಾಕ್ಟರಿಗಳಿವೆ. ನಗರದಿಂದ ದೂರವಿರುವ ಪ್ರಯುಕ್ತ ಏನಾದರೂ ಅಗ್ನಿ ಅವಘಡಗಳು ಸಂಭವಿಸಿದರೆ ಶೀಘ್ರವಾಗಿ ಸ್ಪಂದಿಸಲು ಆಗುತ್ತಿಲ್ಲ. ಹೀಗಾಗಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಶಾಮಕ ಠಾಣೆ ನಿರ್ಮಾಣ, ಹಗರಿಗೆ ಕೃಷಿ ಕಾಲೇಜು ಸೇರಿದಂತೆ ಹಲವು ಸಮಸ್ಯೆಗ ಕುರಿತು ಸಚಿವರಿಗೆ ಮನವಿ ಮಾಡಿದರು.
ಮನವಿಗೆ ಸ್ಪಂದಿಸಿದ ಸಚಿವರು, ಈ ಕುರಿತು ಮುಂದಿನ ದಿನಗಳಲ್ಲಿ ಸಭೆ ನಡೆಸಿ, ಪರಿಹಾರ ಒದಗಿಸುವುದಾಗಿ ಭರವಸೆ ನೀಡಿದರು.
ಇಲಾಖೆಯ ಹಲವು ಕಾಮಗಾರಿ ಹಾಗೂ ಯೋಜನೆಯ ಅನುಷ್ಠಾನದ ಬಗ್ಗೆ ಸಚಿವರು ಅಗತ್ಯ ಮಾಹಿತಿ ಪಡೆದರು. ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಲವು ಸಮಸ್ಯೆಗಳ ಕುರಿತು ಸಚಿವರ ಗಮನಕ್ಕೆ ತಂದರು.
ಕೈ ಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕ ವಿಠ್ಠಲ್ ರಾಜು ಅವರು ಮಾತನಾಡಿ ಬಳ್ಳಾರಿಯ ವಲಯದ ವ್ಯಾಪ್ತಿಗೆ ಒಳಪಡುವ ಬಳ್ಳಾರಿ, ವಿಜಯನಗರ, ಕೊಪ್ಪಳ, ರಾಯಚೂರು, ಕಲ್ಬುರ್ಗಿ, ಬೀದರ್, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ 1,943 ಜನ ಅಲೈಡ್ ವರ್ಕರ್ಸ್, 3,343 ಜನ ನೇಕಾರರು ಸೇರಿದಂತೆ ಒಟ್ಟು 5,286 ಜನ ಕೆಲಸ ಮಾಡುತ್ತಿದ್ದಾರೆ. 7 ಜಿಲ್ಲೆಗಳಲ್ಲಿ 75 ಎಸ್ಎಂಓ ತರಬೇತಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. 57 ಜವಳಿ ಪ್ರೊಸೆಸಿಂಗ್ ಘಟಕಗಳಿವೆ. ಜಿಲ್ಲೆಯಲ್ಲಿ 2021-22 ನೇ ಸಾಲಿನಲ್ಲಿ ರೂ. 2.11 ಕೋಟಿ ಸಾಲಾಧಾರಿತ ಬಂಡವಾಳ ಸಹಾಯ ಧನವಾಗಿ ಅರ್ಹ ಫಲಾನುಭವಿಗಳಿಗೆ ಬಿಡುಗಡೆ ಮಾಡಲಾಗಿದೆ ಎಂದರು.
ಬಳ್ಳಾರಿ ಜಿಲ್ಲೆಯಲ್ಲಿ 82 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಹತ್ತಿ ಬಿತ್ತನೆ ಮಾಡಲಾಗಿದೆ. 487 ಕಾರ್ಯನಿರತ ಕೈಮಗ್ಗಗಳು, 86 ಜಿನ್ನಿಂಗ್ ಘಟಕಗಳು, 850 ಸಿದ್ದ ಉಡುಪು ಘಟಕಗಳಿವೆ. ಒಟ್ಟು 10 ತರಬೇತಿ ಕೇಂದ್ರಗಳಿದ್ದು, ಇದರ ಮೂಲಕ ಹಲವರಿಗೆ ತರಬೇತಿ ನೀಡಲಾಗುತ್ತಿದೆ ಎಂದು ವಿವರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪವನ ಕುಮಾರ್ ಮಾಲಪಾಟಿ, ಜಿಪಂ ಸಿಇಒ ನಂದಿನಿ ಕೆ. ಆರ್, ವಿಶೇಷಾಧಿಕಾರಿ ಗಿರೀಶ್ ಮೈಸೂರು ಸೇರಿದಂತೆ 7 ಜಿಲ್ಲೆಗಳ ಅಧಿಕಾರಿಗಳು ಮತ್ತು ಇತರೆ ಸಿಬ್ಬಂದಿ ಇದ್ದರು.