ಆ್ಯಪ್ನಗರ

ಹಂಪಿಗೆ ಕೇಂದ್ರ ಪ್ರವಾಸೋದ್ಯಮ ಕಾರ್ಯದರ್ಶಿ ಭೇಟಿ

ಕೇಂದ್ರ ಸರಕಾರದ ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ರಶ್ಮಿ ವರ್ಮಾ ಅವರು, ಹಂಪಿಯ ಪ್ರಮುಖ ಸ್ಮಾರಕಗಳನ್ನು ಸೋಮವಾರ ವೀಕ್ಷಿಸಿದರು.

Vijaya Karnataka Web 17 Apr 2018, 8:47 am
ಹೊಸಪೇಟೆ : ಕೇಂದ್ರ ಸರಕಾರದ ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ರಶ್ಮಿ ವರ್ಮಾ ಅವರು, ಹಂಪಿಯ ಪ್ರಮುಖ ಸ್ಮಾರಕಗಳನ್ನು ಸೋಮವಾರ ವೀಕ್ಷಿಸಿದರು.
Vijaya Karnataka Web hampi visits central tourism secretary
ಹಂಪಿಗೆ ಕೇಂದ್ರ ಪ್ರವಾಸೋದ್ಯಮ ಕಾರ್ಯದರ್ಶಿ ಭೇಟಿ


ಶ್ರೀ ವಿರೂಪಾಕ್ಷೇಶ್ವರ ದೇಗುಲ, ಕಮಲ ಮಹಲ್‌, ಆನೆಲಾಯ, ಮಹಾನವಮಿ ದಿಬ್ಬ, ವಿಜಯ ವಿಠ್ಠಲ ದೇಗುಲ, ಕಲ್ಲಿನತೇರು, ಬಡವಿಲಿಂಗ, ಉಗ್ರ ನರಸಿಂಹ ಸೇರಿ ಇತರ ಸ್ಮಾರಕಗಳಿಗೆ ಅವರು ಭೇಟಿ ನೀಡಿದರು. ಹಂಪಿಯಲ್ಲಿ ಪ್ರವಾಸೋದ್ಯಮ ಬೆಳವಣಿಗೆಗೆ ಪೂರಕವಾಗಿ ಮೂಲ ಸೌಕರ್ಯ ಕಲ್ಪಿಸುವುದಕ್ಕಾಗಿ ಭೇಟಿ ನೀಡಿರುವ ಅವರು, ಸ್ಥಳೀಯ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ಕೇಂದ್ರ ಸರಕಾರದ ಪ್ರವಾಸೋದ್ಯಮ ಇಲಾಖೆಯ ಜಂಟಿ ಕಾರ್ಯದರ್ಶಿ ಸುಮನ್‌ ಬಿಲ್ಲಾ, ರಾಜ್ಯ ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ಟಿ.ಕೆ.ಅನಿಲ್‌ ಕುಮಾರ, ಡಿಸಿ ಡಾ.ವಿ.ರಾಮ್‌ಪ್ರಸಾತ್‌ ಮನೋಹರ್‌, ಹಂಪಿ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಕರೀಗೌಡ, ಭಾರತೀಯ ಪುರಾತತ್ವ ಸರ್ವೆಕ್ಷ ಣಾ ಇಲಾಖೆಯ ಅಧೀಕ್ಷ ಕಿ ಕೆ.ಮೂರ್ತೇಶ್ವರಿ ಇತರರಿದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ