ಬಳ್ಳಾರಿಯಲ್ಲಿ ಧಾರಾಕಾರ ಮಳೆ: ಜನಜೀವನ ಅಸ್ತವ್ಯಸ್ತ
ಬಳ್ಳಾರಿ ನಗರದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ತಗ್ಗು ಪ್ರದೇಶಗಳಿಗೆ ನೀರು ತಗ್ಗಿದೆ.
Vijaya Karnataka Web 28 Oct 2019, 9:28 am
ಬಳ್ಳಾರಿ: ಬಳ್ಳಾರಿ ನಗರ, ತಾಲೂಕು ಸೇರಿ ಜಿಲ್ಲಾದ್ಯಂತ ಭಾನುವಾರ ರಾತ್ರಿ ಇಡೀ ಧಾರಾಕಾರ ಮಳೆ ಸುರಿದ ಪರಿಣಾಮ ಜನ ಜೀವನ ಅಸ್ತವ್ಯಸ್ತವಾಗಿದೆ.
ತಾಲೂಕಿನ ಸಂಜೀವರಾಯನ ಕೋಟೆ ಗ್ರಾಮದ ಕೆರೆಗೆ ಕೋಡಿ ಬಿದ್ದಿದ್ದು ಗ್ರಾಮಕ್ಕೆ ನೀರು ನುಗ್ಗಿವೆ.
ಸಂಜೀವರಾಯನಕೋಟೆ ಗ್ರಾಮದಲ್ಲಿ ದಶಕದ ಹಿಂದೆಯಷ್ಟೇ ನಿರ್ಮಿಸಲಾಗಿದ್ದ ಕೆರೆಗೆ ಕೋಡಿ ಬಿದ್ದಿದ್ದರಿಂದ ಅಪಾರ ಪ್ರಮಾಣದ ಮಳೆ ನೀರು ಗ್ರಾಮದ ತೆಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ.
ಅಲ್ಲದೆ, ಕಮ್ಮರಚೇಡು, ಇಬ್ರಾಹಿಂಪುರ, ಶಂಕರಬಂಡೆ, ಮಿಂಚೇರಿ ಗ್ರಾಮದ ಮನೆಗಳು ಮಳೆ ನೀರಿನಿಂದ ಜಲಾವೃತವಾಗಿದ್ದು ನಡುಗಡ್ಡೆಗಳಂತಾಗಿವೆ. ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ.
ಬಳ್ಳಾರಿ ನಗರ ವ್ಯಾಪ್ತಿಯ ಸತ್ಯನಾರಾಯಣ ಪೇಟೆ, ಕನಕದುರ್ಗಮ್ಮ ದೇಗುಲದ ಹಾಗೂ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದ ರಸ್ತೆಗಳ ಕೆಳಸೇತುವೆಗಳು ಸಂಪೂರ್ಣವಾಗಿ ಮಳೆ ನೀರಿನಿಂದ ಜಲಾವೃತಗೊಂಡಿದ್ದು, ಸಾರ್ವಜನಿಕ ಸಂಚಾರಕ್ಕೂ ಅಡ್ಡಿಯುಂಟಾಗಿದೆ.
ತಾಲೂಕಿನ ಸಂಜೀವರಾಯನ ಕೋಟೆ ಗ್ರಾಮದ ಕೆರೆಗೆ ಕೋಡಿ ಬಿದ್ದಿದ್ದು ಗ್ರಾಮಕ್ಕೆ ನೀರು ನುಗ್ಗಿವೆ.
ಸಂಜೀವರಾಯನಕೋಟೆ ಗ್ರಾಮದಲ್ಲಿ ದಶಕದ ಹಿಂದೆಯಷ್ಟೇ ನಿರ್ಮಿಸಲಾಗಿದ್ದ ಕೆರೆಗೆ ಕೋಡಿ ಬಿದ್ದಿದ್ದರಿಂದ ಅಪಾರ ಪ್ರಮಾಣದ ಮಳೆ ನೀರು ಗ್ರಾಮದ ತೆಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ.
ಅಲ್ಲದೆ, ಕಮ್ಮರಚೇಡು, ಇಬ್ರಾಹಿಂಪುರ, ಶಂಕರಬಂಡೆ, ಮಿಂಚೇರಿ ಗ್ರಾಮದ ಮನೆಗಳು ಮಳೆ ನೀರಿನಿಂದ ಜಲಾವೃತವಾಗಿದ್ದು ನಡುಗಡ್ಡೆಗಳಂತಾಗಿವೆ. ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ.
ಬಳ್ಳಾರಿ ನಗರ ವ್ಯಾಪ್ತಿಯ ಸತ್ಯನಾರಾಯಣ ಪೇಟೆ, ಕನಕದುರ್ಗಮ್ಮ ದೇಗುಲದ ಹಾಗೂ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದ ರಸ್ತೆಗಳ ಕೆಳಸೇತುವೆಗಳು ಸಂಪೂರ್ಣವಾಗಿ ಮಳೆ ನೀರಿನಿಂದ ಜಲಾವೃತಗೊಂಡಿದ್ದು, ಸಾರ್ವಜನಿಕ ಸಂಚಾರಕ್ಕೂ ಅಡ್ಡಿಯುಂಟಾಗಿದೆ.