ಆ್ಯಪ್ನಗರ

ಬಳ್ಳಾರಿಯಲ್ಲಿ ವರುಣನ ಆರ್ಭಟ: ಒಂದು ಸಾವು, ಬಸ್ ಪಲ್ಟಿಯಾಗಿ ಮೂವರಿಗೆ ಗಾಯ

ಅನಾವೃಷ್ಟಿಯಿಂದ ತತ್ತರಿಸಿದ್ದ ಬಳ್ಳಾರಿ ನಿವಾಸಿಗಳು ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಹಾಮಳೆಗೆ ಕಂಗಾಲಾಗಿದ್ದಾರೆ.

Vijaya Karnataka Web 24 Sep 2019, 12:20 pm
ಬಳ್ಳಾರಿ: ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಧಾರಾಕಾರವಾಗಿ ಮಳೆಸುರಿಯುತ್ತಿದ್ದು ಮಣ್ಣಿನ ಮನೆ ಕುಸಿದು ಓರ್ವ ಮೃತಪಟ್ಟಿದ್ದರೆ, ಮತ್ತೋರ್ವ ಗಾಯಗೊಂಡ ಘಟನೆ ನಡೆದಿದೆ. ಅಷ್ಟೇ ಅಲ್ಲ ಜಿಲ್ಲೆಯಲ್ಲಿ ಮಳೆ ಅನೇಕ ಆವಾಂತರಗಳನ್ನು ಸೃಷ್ಟಿಸಿದೆ.
Vijaya Karnataka Web ಮನೆ ಕುಸಿತ


ಒಂದು ಸಾವು, ಒಬ್ಬರಿಗೆ ಗಾಯ

ಸೋಮವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಹನುಮನಹಳ್ಳಿ ಗ್ರಾಮದಲ್ಲಿ ಮನೆ ಗೋಡೆ ಕುಸಿದು ವೃದ್ಧ ಎಚ್.ದ್ಯಾಮಪ್ಪ(77) ಸ್ಥಳದಲ್ಲೆ ಸಾವನ್ನಪ್ಪಿದ್ದರೆ, ಬೈರಾಪುರ ಗ್ರಾಮದಲ್ಲಿ ಮಂಗಳವಾರ ಬೆಳಗಿನ ಜಾವ ಮನೆ ಕುಸಿದು ಹನುಮಂತಗೌಡ(60) ಗಂಭೀರ ಗಾಯಗೊಂಡಿದ್ದಾರೆ.

ಬಸ್ ಪಲ್ಟಿಯಾಗಿ ಮೂವರಿಗೆ ಗಾಯ

ಸಮೀಪದ ಡಣಾಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಸ್ಲೀಪರ್ ಕೋಚ್ ಬಸ್ ಪಲ್ಟಿಯಾಗಿ ಚಾಲಕ ಸೇರಿ ಮೂವರು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಹೊಸಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


ಶಾಲಾ ಆವರಣ ಜಲಾವೃತ, ದವಸ ಧಾನ್ಯ ನೀರು ಪಾಲು

ಸಿರುಗುಪ್ಪ ತಾಲೂಕಿನ ನಿಟ್ಟೂರು ಗ್ರಾಮದಲ್ಲಿ ಸುರಿದ ಮಳೆಯಿಂದ ಶಾಲಾ ಆವರಣಗಳು ಜಲಾವೃತಗೊಂಡಿವೆ. ಮನೆಗೆ ನುಗ್ಗಿದ ನೀರಿಗೆ ದವಸ ಧಾನ್ಯಗಳು ನೀರು ಪಾಲಾಗಿವೆ.

ಜಮೀನು ಜಲಾವೃತ

ಬಳ್ಳಾರಿ ತಾಲೂಕಿನ ಗೆಣಕಿಹಾಳ್ ಬಳಿ ಜಮೀನುಗಳು ಜಲಾವೃತಗೊಂಡಿವೆ. ಗ್ರಾಮಕ್ಕೆ ತೆರಳುವ ಸೇತುವೆ ಸಂಪರ್ಕ ಕಡಿತಗೊಂಡಿದೆ. ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ. ಕುಡತಿನಿಯಲ್ಲಿ‌ ಆಂಜನೇಯ ದೇವಸ್ಥಾನಕ್ಕೆ ಮಳೆ ನೀರು ನುಗ್ಗಿವೆ. ಚರಂಡಿ ನೀರು ರಸ್ತೆಗೆ ಹರಿದು ಸಾರ್ವಜನಿಕರ ಸಂಚಾರಕ್ಕೆ ಅಡಚಣೆ ಉಂಟಾಗಿದೆ.



ಅರ್ಧ ರಾಜ್ಯಕ್ಕೆ ಪ್ರವಾಹ, ಇನ್ನರ್ಧ ರಾಜ್ಯದಲ್ಲಿ ಮಳೆ ಕೊರತೆ

ವಾಯುಭಾರ ಕುಸಿತ: ಕರಾವಳಿಯಲ್ಲಿ 4-5 ದಿನ ಮಳೆ ನಿರೀಕ್ಷೆ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ