ಆ್ಯಪ್ನಗರ

ಉಕ್ಕಿ ಹರಿದ ತುಂಗಭದ್ರೆ: ಹಂಪಿ ಸ್ಮಾರಕಗಳು ಜಲಾವೃತ

ತುಂಗಭದ್ರಾ ಮಂಡಳಿ ರಾಜ್ಯದ ಬಳ್ಳಾರಿ, ರಾಯಚೂರು, ಕೊಪ್ಪಳ ಮತ್ತು ಆಂಧ್ರಪ್ರದೇಶದ ಅನಂತಪುರ, ಮೆಹಬೂಬನಗರ ಜಿಲ್ಲೆಗಳ ಜಿಲ್ಲಾಧಿಕಾರಿ ಕಚೇರಿಗೆ ಪ್ರವಾಹ ಮುನ್ನೆಚ್ಚರಿಕೆ ಸಂದೇಶ ರವಾನಿಸಿದೆ.

Vijaya Karnataka Web 21 Sep 2020, 11:14 pm
ಹೊಸಪೇಟೆ: ತುಂಗಭದ್ರಾ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಭಾರೀ ಹೆಚ್ಚಿದ್ದು, ಜಲಾಶಯದಿಂದ 1 ಲಕ್ಷಕ್ಕೂ ಹೆಚ್ಚು ಕ್ಯುಸೆಕ್‌ ನೀರು ನದಿಗೆ ಹರಿಬಿಡಲಾಗಿದೆ. ಇದರಿಂದ ವಿಶ್ವವಿಖ್ಯಾತ ಹಂಪಿಯ ಪ್ರಮುಖ ಸ್ಮಾರಕಗಳು ಜಲಾವೃತವಾಗಿವೆ.
Vijaya Karnataka Web ಸಂಗ್ರಹ ಚಿತ್ರ
ಸಂಗ್ರಹ ಚಿತ್ರ


ಹಂಪಿಯ ನದಿ ಪಕ್ಕದಲ್ಲಿರುವ ಧಾರ್ಮಿಕ ವಿಧಿವಿಧಾನ ಮಂಟಪ, ಪುರಂದರ ದಾಸರ ಮಂಟಪ ಜಲಾವೃತವಾಗಿವೆ. ರಾಮ-ಲಕ್ಷ್ಮಣ ದೇಗುಲದ ಮೆಟ್ಟಿಲುವರೆಗೆ ನೀರು ನುಗ್ಗಿದೆ. ಚಕ್ರತೀರ್ಥದ ಬಳಿ ನದಿ ರಭಸವಾಗಿ ಹರಿಯುತ್ತಿದೆ. ಜಲಾಶಯಕ್ಕೆ ಒಳಹರಿವು ಹೆಚ್ಚಿದ್ದು, 30 ಗೇಟ್‌ಗಳನ್ನು ತೆರೆದು 1 ಲಕ್ಷ 6 ಸಾವಿರಕ್ಕೂ ಹೆಚ್ಚು ಕ್ಯುಸೆಕ್‌ ನೀರು ನದಿಗೆ ಹರಿಬಿಡಲಾಗಿದೆ. ಜಲಾಶಯದ ಒಳ ಹರಿವಿನಲ್ಲಿ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇರುವುದರಿಂದ ನದಿಗೆ ಇನ್ನೂ ಹೆಚ್ಚಿನ ಪ್ರಮಾಣದ ನೀರು ಹರಿಸಲಾಗುವುದು ಎಂದು ತುಂಗಭದ್ರಾ ಮಂಡಳಿ ಮುನ್ಸೂಚನೆ ನೀಡಿದೆ.

ಪ್ರವಾಹ ಮುನ್ನೆಚ್ಚರಿಕೆ

ತುಂಗಭದ್ರಾ ಮಂಡಳಿ ರಾಜ್ಯದ ಬಳ್ಳಾರಿ, ರಾಯಚೂರು, ಕೊಪ್ಪಳ ಮತ್ತು ಆಂಧ್ರಪ್ರದೇಶದ ಅನಂತಪುರ, ಮೆಹಬೂಬನಗರ ಜಿಲ್ಲೆಗಳ ಜಿಲ್ಲಾಧಿಕಾರಿ ಕಚೇರಿಗೆ ಪ್ರವಾಹ ಮುನ್ನೆಚ್ಚರಿಕೆ ಸಂದೇಶ ರವಾನಿಸಿದೆ. ಹೀಗಾಗಿ ನದಿಪಾತ್ರದಲ್ಲಿ ತೆಪ್ಪ ಹಾಕುವುದನ್ನು ಹಾಗೂ ನದಿ ಭಾಗದಲ್ಲಿ ಓಡಾಡುವುದನ್ನು ನಿಷೇಧಿಸಲಾಗಿದೆ. ಜತೆಗೆ ನದಿ ಪಕ್ಕದ ಹಳ್ಳಿಗಳ ಜನರನ್ನು ಸ್ಥಳಾಂತರಿಸಿ ಕಾಳಜಿ ಕೇಂದ್ರಗಳನ್ನು ತೆರೆಯಲು ಸಂಬಂಧಿಸಿದ ಜಿಲ್ಲಾಡಳಿತಗಳು ಮುಂದಾಗಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ