ಆ್ಯಪ್ನಗರ

ಹೊಸಪೇಟೆ ಕಾರು ಅಪಘಾತ ಪ್ರಕರಣ: ಸಿಸಿಟಿವಿಯಲ್ಲಿ ಸೆರೆಯಾದ ವಿಡಿಯೋ ಬಿಡುಗಡೆ

ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿಯ ಬಳಿ ನಡೆದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಖಾಸಗಿ ಆಸ್ಪತ್ರೆಯಲ್ಲಿನ ಸಿಸಿಟಿವಿ ದೃಶ್ಯಾವಳಿಗಳು ಬಿಡುಗಡೆಯಾಗಿವೆ. ಆದರೆ, ಈ ವಿಡಿಯೋದಲ್ಲಿ ರಾಜಕಾರಣಿಯೊಬ್ಬರ ಪುತ್ರ ಇರುವ ಬಗ್ಗೆ ಖಚಿತತೆ ಇಲ್ಲ.

Vijaya Karnataka Web 15 Feb 2020, 12:25 pm
ಬಳ್ಳಾರಿ: ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿಯ ಬಳಿ ನಡೆದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಖಾಸಗಿ ಆಸ್ಪತ್ರೆಯಲ್ಲಿನ ಸಿಸಿಟಿವಿ ದೃಶ್ಯಾವಳಿಗಳು ಬಿಡುಗಡೆಯಾಗಿವೆ.
Vijaya Karnataka Web hospet car accident


ಅಪಘಾತಕ್ಕೆ ಒಳಗಾದ ಮರ್ಸಿಡಿಸ್ ಬೆಂಜ್ ಕಾರ್ ನಲ್ಲಿದ್ದ ಗಾಯಾಳುಗಳನ್ನು ಹೊಸಪೇಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆ ವೇಳೆ ರಾಜಕಾರಣಿಯೊಬ್ಬರ ಪುತ್ರ ಸಹ ದಾಖಲಾಗಿದ್ದ ಎಂದು ಮೃತ ರವಿನಾಯ್ಕ್ ಅವರ ಅತ್ತೆ ಭಾರತಿ ತಿಳಿಸಿದ್ದರು. ಆದರೆ ಶನಿವಾರ ಆಸ್ಪತ್ರೆಯ ಸಿಸಿಟಿವಿ ದೃಶ್ಯ ಬಿಡುಗಡೆ ಮಾಡಿದ್ದು, ಇದರಲ್ಲಿ ರಾಜಕಾರಣಿಯೊಬ್ಬರ ಪುತ್ರ ಇರುವ ಬಗ್ಗೆ ಖಚಿತತೆ ಇಲ್ಲ. ಆದರೆ ಆಸ್ಪತ್ರೆಗೆ ಕರೆತಂದ ಕಾರ್ ನಲ್ಲಿ ಇನ್ನೂ ಕೆಲವರು ಗಾಯಾಳುಗಳಿದ್ದು, ಅದರಲ್ಲಿ ಯಾರು ಇದ್ದರು ಎಂಬುದು ಮಾತ್ರ ಇನ್ನೂ ನಿಗೂಢವಾಗಿದೆ.

ಈ ಕುರಿತು ಮೈತ್ರಿ ಆಸ್ಪತ್ರೆಯ ವೈದ್ಯ ಡಾ.ಆರ್.ಪೆರುಮಾಳ್ ಸ್ವಾಮಿ ಪ್ರತಿಕ್ರಿಯಿಸಿ, ಫೆ.10 ರಂದು ಮಧ್ಯಾಹ್ನ 3.55 ಕ್ಕೆ ಅಪಘಾತದಲ್ಲಿ ಗಾಯಗೊಂಡವರು ಐವರು ಬಂದಿದ್ದರು. ಒಬ್ಬರು ತೀವ್ರವಾಗಿ ಗಾಯಗೊಂಡಿದ್ದರು. ಹಾಗಾಗಿ ಸರಕಾರಿ ಆಸ್ಪತ್ರೆಗೆ ತೆರಳಲು ಸೂಚಿಸಲಾಯಿತು ಎಂದರು.

ಹೊಸಪೇಟೆ ಕಾರು ಅಪಘಾತ ಪ್ರಕರಣದಲ್ಲಿ ಸಚಿವರ ಪುತ್ರ! ಪೊಲೀಸರಿಂದ ರಕ್ಷಣೆಗೆ ಪ್ರಯತ್ನ?

ಬಳ್ಳಾರಿ ಜಿಲ್ಲೆಯ ಹೊಸಪೇಟೆಯಲ್ಲಿ ಸೋಮವಾರ ಸಂಜೆ ನಡೆದಿದ್ದ ಐಷಾರಾಮಿ ಕಾರು ಅಪಘಾತ ಪ್ರಕರಣದಲ್ಲಿ ರಾಜ್ಯದ ಪ್ರಭಾವಿ ಸಚಿವರೊಬ್ಬರ ಪುತ್ರನ ಹೆಸರು ಕೇಳಿಬಂದಿತ್ತು. ಫೆಬ್ರವರಿ 10 ರಂದು ಸಂಜೆ ಐದು ಗಂಟೆಗೆ ಹೊಸಪೇಟೆಯ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಅಪಘಾತ ನಡೆದಿದ್ದು ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದರು. ಇಬ್ಬರ ಸಾವಿಗೆ ಕಾರಣವಾಗಿದ್ದ ಅಪಘಾತದಲ್ಲಿ ಕಾರು ಚಾಲನೆ ಮಾಡಿದ್ದವರು ಸಚಿವರ ಪುತ್ರ ಎನ್ನಲಾಗಿತ್ತು. ಆದರೆ ಪೊಲೀಸರ ರಾಹುಲ್ ಎಂಬಾತನ ವಿರುದ್ಧ ಎಫ್ಐಆರ್‌ ಮಾಡಿದ್ದಾರೆ.

ಹೊಸಪೇಟೆ ಕಾರು ಅಪಘಾತ ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ ಸಲ್ಲದು - ಕಾಂಗ್ರೆಸ್‌ ಟ್ವೀಟ್‌

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ