ಆ್ಯಪ್ನಗರ

‘ಬಿಜೆಪಿ ಕೋಮುವಾದಿ, ಜೆಡಿಎಸ್‌ ವ್ಯಾಪಾರಿ’! ಹಳೇ ದೋಸ್ತಿ ಒಂದಾಗೋ ವದಂತಿ ನಡುವೆ ಮು.ಮ. ಚಂದ್ರು ಚಾಟಿ!

ಉಪ ಚುನಾವಣೆ ಬೆನ್ನಲ್ಲೇ ಮತ್ತೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಕೊಳ್ಳಲಿವೆ ಎಂಬ ವದಂತಿ ಹರಿದಾಡುತ್ತಿರುವ ಹೊತ್ತಲ್ಲೇ, ಕಾಂಗ್ರೆಸ್‌ ಮುಖಂಡ ಮು.ಮ. ಚಂದ್ರು ಜೆಡಿಎಸ್ ವಿರುದ್ಧ ಹರಿಹಾಯ್ದಿದ್ದಾರೆ.

Vijaya Karnataka Web 2 Dec 2019, 6:57 pm
ಹೊಸಪೇಟೆ (ಬಳ್ಳಾರಿ): ಬಿಜೆಪಿ ಕೋಮುವಾದಿ ಪಕ್ಷವಾದರೆ, ಜೆಡಿಎಸ್‌ನದು ವ್ಯಾಪಾರಿ ಧೋರಣೆ. ಹೀಗಾಗಿ, ಉಪ ಚುನಾವಣೆಯಲ್ಲಿ ಉಭಯ ಪಕ್ಷಗಳನ್ನೂ ಸೋಲಿಸಬೇಕು ಎಂದು ಚಿತ್ರ ನಟ ಮುಖ್ಯಮಂತ್ರಿ ಚಂದ್ರು ಹೇಳಿಕೆ ನೀಡಿದ್ಧಾರೆ. ಉಪ ಚುನಾವಣೆ ಬೆನ್ನಲ್ಲೇ ಮತ್ತೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಕೊಳ್ಳಲಿವೆ ಎಂಬ ವದಂತಿ ಹರಿದಾಡುತ್ತಿರುವ ಹೊತ್ತಲ್ಲೇ ಮು.ಮ. ಚಂದ್ರು ಈ ಹೇಳಿಕೆ ನೀಡಿದ್ದಾರೆ.
Vijaya Karnataka Web hospet congress leader mukhyamantri chandru slams bjp and jds party
‘ಬಿಜೆಪಿ ಕೋಮುವಾದಿ, ಜೆಡಿಎಸ್‌ ವ್ಯಾಪಾರಿ’! ಹಳೇ ದೋಸ್ತಿ ಒಂದಾಗೋ ವದಂತಿ ನಡುವೆ ಮು.ಮ. ಚಂದ್ರು ಚಾಟಿ!


ಹೊಸಪೇಟೆಯ ಖಾಸಗಿ ಹೋಟೆಲ್‌ನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚಂದ್ರು, ‘ದೇಶದಲ್ಲಿ ಸಂವಿಧಾನ ತಿದ್ದುಪಡಿ ಹಾಗೂ ತಿರುಚುವಂಥ ಪ್ರಯತ್ನಗಳು ನಡೆಯುತ್ತಿವೆ’ ಎಂದು ಕಳವಳ ವ್ಯಕ್ತಪಡಿಸಿದರು. ‘ಅನರ್ಹ ಶಾಸಕರಿಗೆ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಿರುವುದರ ಬಗ್ಗೆಯೇ ಗುಮಾನಿಯಿದೆ’ ಎಂದು ಚಂದ್ರು ಹೇಳಿದರು.

‘ನರೇಂದ್ರ ಮೋದಿ ಹಾಗೂ ಅಮಿತ್‌ ಶಾ ಅವರದ್ದು ಸರ್ವಾಧಿಕಾರ ಧೋರಣೆಯಾಗಿದೆ. ಏಕಾಧಿಪತ್ಯ, ಏಕಭಾಷೆ ಹೇರುವ ಮನಸ್ಥಿತಿ ಹೊಂದಿದ್ದಾರೆ’ ಎಂದು ಟೀಕಿಸಿದ ಚಂದ್ರು, ‘ವಿಜಯನಗರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ವೆಂಕಟರಾವ್‌ ಘೋರ್ಪಡೆ ಅವರನ್ನು ಗೆಲ್ಲಿಸುವ ಮೂಲಕ ಪ್ರಜಾಪ್ರಭುತ್ವ ಎತ್ತಿಹಿಡಿಯಬೇಕು’ ಎಂದು ಮನವಿ ಮಾಡಿದರು.

ನಟ ಮುಖ್ಯಮಂತ್ರಿ ಚಂದ್ರು ಜಯದೇವ ಆಸ್ಪತ್ರೆಗೆ ದಾಖಲು

ಕನ್ನಡ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಸ್‌.ಜಿ.ಸಿದ್ದರಾಮಯ್ಯ ಮಾತನಾಡಿ, ‘ಚುನಾವಣಾ ಆಯೋಗ ಏನು ಮಾಡುತ್ತಿದೆ ಎಂಬುದೇ ತಿಳಿಯುತ್ತಿಲ್ಲ. ನಿಷ್ಠುರವಾಗಿ ಕ್ರಮ ಕೈಗೊಳ್ಳುತ್ತಿಲ್ಲ. ಅವಮಾನಿತರನ್ನು ಸನ್ಮಾನ ಮಾಡಲಾಗುತ್ತಿದೆ. ಮೊದಲು ಅತೃಪ್ತರು. ಬಳಿಕ ಅನರ್ಹರು. ನಂತರ ಅತಂತ್ರರಾದರು. ಈಗ ಅನರ್ಹ ಶಾಸಕರು. ನೀಚ ರಾಜಕಾರಣ ತಲೆ ಎತ್ತಿದೆ. ರೆಸಾರ್ಟ್‌ ರಾಜಕಾರಣ ಮತ್ತೆ ಮುನ್ನೆಲೆಗೆ ಬಂದಿದೆ’ ಎಂದು ಬೇಸರ ವ್ಯಕ್ತಪಡಿಸಿದರು.

ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್‌ ಮಾತನಾಡಿ, ‘ರಾಜಕಾರಣದಲ್ಲಿ ನೈತಿಕತೆ ಇಲ್ಲ. ದಿವಾಳಿತನ ಆವರಿಸಿದೆ. ಜನಪ್ರತಿನಿಧಿಗಳಿಗೆ ಸಂವಿಧಾನದ ಬಗ್ಗೆ ತರಬೇತಿ ನೀಡಬೇಕು. ಅನರ್ಹ ಶಾಸಕರನ್ನು ಠೇವಣಿ ಕಳೆದುಕೊಳ್ಳುವಂತೆ ಮಾಡಬೇಕು’ ಎಂದು ಹೇಳಿದರು.

ಮೋದಿ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಸಂವಿಧಾನ ನಾಶ: ಎಸ್‌.ಜಿ.ಸಿದ್ದರಾಮಯ್ಯ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ