ಆ್ಯಪ್ನಗರ

ಕೊರೊನಾ ಎಫೆಕ್ಟ್‌: ಸಿರುಗುಪ್ಪಾದಲ್ಲಿ ಅಬಕಾರಿ ಕಚೇರಿಗೆ ಕನ್ನ, ಸಾವಿರಾರು ರೂ. ಮೌಲ್ಯದ ಎಣ್ಣೆ ಬಾಟಲ್‌ ಸಮೇತ ಪರಾರಿ

ಲಾಕ್ ಡೌನ್ ನಿಂದಾಗಿ ಜಿಲ್ಲೆಯಲ್ಲಿ ಸಂಪೂರ್ಣವಾಗಿ ಮದ್ಯ ಮಾರಾಟ ನಿಷೇಧಿಸಲಾಗಿದೆ. ಆದರೂ ಅನಧಿಕೃತವಾಗಿ ಮದ್ಯ ಮಾರಾಟ ಮಾಡುತ್ತಿದ್ದವರನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಬಂಧಿಸಿ ಮದ್ಯದ ಬಾಕ್ಸ್ ಗಳನ್ನು ವಶಪಡಿಸಿಕೊಂಡು ಕಚೇರಿಯಲ್ಲಿ ಸಂಗ್ರಹಿಸಿಟ್ಟಿದ್ದರು.

Vijaya Karnataka Web 31 Mar 2020, 2:57 pm
ಬಳ್ಳಾರಿ: ಕೊರೊನಾ ವೈರಸ್ ಎಫೆಕ್ಟ್ ಜಿಲ್ಲಾದ್ಯಂತ ಸಂಪೂರ್ಣ ಮದ್ಯ ಮಾರಾಟ ಬಂದ್ ಮಾಡಲಾಗಿದ್ದು, ಅಕ್ರಮವಾಗಿ ಮಾರಾಟ ಮಾಡುತ್ತಿದ್ದವರನ್ನು ಪತ್ತೆ ಹಚ್ಚಿ ದಾಳಿ ನಡೆಸಿದ ವಶಪಡಿಸಿಕೊಂಡು ಅಬಕಾರಿ ಇಲಾಖೆಯ ಕಚೇರಿಯಲ್ಲಿಟ್ಟಿದ್ದ ಮದ್ಯದ ಬಾಕ್ಸ್ ಗಳನ್ನು ಕಳ್ಳತನ ಮಾಡಿದ ಪ್ರಕರಣ ಜಿಲ್ಲೆಯ ಸಿರುಗುಪ್ಪ ದಲ್ಲಿ ನಡೆದಿದೆ.
Vijaya Karnataka Web ಮದ್ಯ ಬಾಟಲು
ಮದ್ಯ ಬಾಟಲು


ಲಾಕ್ ಡೌನ್ ನಿಂದಾಗಿ ಜಿಲ್ಲೆಯಲ್ಲಿ ಸಂಪೂರ್ಣವಾಗಿ ಮದ್ಯ ಮಾರಾಟ ನಿಷೇಧಿಸಲಾಗಿದೆ. ಆದರೂ ಅನಧಿಕೃತವಾಗಿ ಮದ್ಯ ಮಾರಾಟ ಮಾಡುತ್ತಿದ್ದವರನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಬಂಧಿಸಿ ಮದ್ಯದ ಬಾಕ್ಸ್ ಗಳನ್ನು ವಶಪಡಿಸಿಕೊಂಡು ಕಚೇರಿಯಲ್ಲಿ ಸಂಗ್ರಹಿಸಿಟ್ಟಿದ್ದರು.

ಚಾವಣಿಗೆ ಕನ್ನ


ಸೋಮವಾರ ಕಳ್ಳರು ಕಚೇರಿಯ ಚಾವಣಿಯ ಸಿಮೆಂಟ್ ಹೆಂಚುಗಳನ್ನು ಕಿತ್ತು ಸಾವಿರಾರು ರೂ. ಮೌಲ್ಯದ ಮದ್ಯದ ಬಾಟಲ್‌ಗಳುಳ್ಳ ಬಾಕ್ಸ್‌ಗಳನ್ನ ದೋಚಿ ಪರಾರಿಯಾಗಿದ್ದಾರೆ.

ಸ್ಥಳಕ್ಕಾಗಮಿಸಿದ ಅಬಕಾರಿ ಇಲಾಖೆ ಮೇಲಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಕುರಿತು ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ