ಆ್ಯಪ್ನಗರ

ವಿದೇಶಿ ರಾಯಭಾರಿಗಳಿಗೆ ಆಹ್ವಾನ: ಸಚಿವ ಲಾಡ್

ಈ ಬಾರಿ ಹಂಪಿ ಉತ್ಸವವನ್ನು ಜನೋತ್ಸವವನ್ನಾಗಿ ಆಚರಿಸಲಾಗುವುದು. ಹೊರ ದೇಶಗಳ ರಾಯಭಾರಿಗಳನ್ನೂ ಉತ್ಸವಕ್ಕೆ ಆಹ್ವಾನಿಸಲಾಗುವುದು ಎಂದು ಕಾರ್ಮಿಕ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಹೇಳಿದರು.

Vijaya Karnataka 3 Oct 2017, 8:19 am
ಹೊಸಪೇಟೆ: ಈ ಬಾರಿ ಹಂಪಿ ಉತ್ಸವವನ್ನು ಜನೋತ್ಸವವನ್ನಾಗಿ ಆಚರಿಸಲಾಗುವುದು. ಹೊರ ದೇಶಗಳ ರಾಯಭಾರಿಗಳನ್ನೂ ಉತ್ಸವಕ್ಕೆ ಆಹ್ವಾನಿಸಲಾಗುವುದು ಎಂದು ಕಾರ್ಮಿಕ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಹೇಳಿದರು.
Vijaya Karnataka Web invitation to foreign ambassadors minister lad
ವಿದೇಶಿ ರಾಯಭಾರಿಗಳಿಗೆ ಆಹ್ವಾನ: ಸಚಿವ ಲಾಡ್


ಉತ್ಸವದ ಸಿದ್ಧತೆ ಹಿನ್ನೆಲೆಯಲ್ಲಿ ಸೋಮವಾರ ಸ್ಥಳ ಪರಿಶೀಲಿಸಿದ ನಂತರ ಅವರು, ಸುದ್ದಿಗಾರರೊಂದಿಗೆ ಮಾತನಾಡಿ, ‘‘ಒಟ್ಟು 9 ವೇದಿಕೆಗಳನ್ನು ನಿರ್ಮಿಸಲಾಗುವುದು. ವಿಜಯ ವಿಠ್ಠಲ ದೇಗುಲ ಬಳಿಯ ವೇದಿಕೆಯನ್ನು ಈ ಬಾರಿ ಬೇರೆಡೆ ಸ್ಥಳಾಂತರಿಸಲಾಗುವುದು. ಎದುರು ಬಸವಣ್ಣ ಮಂಟಪದ ಬಳಿಯೇ ಮುಖ್ಯ ವೇದಿಕೆ ನಿರ್ಮಿಸಲಾಗುವುದು. 2017, ನವೆಂಬರ್ 3, 4 ಮತ್ತು 5ರಂದು ಉತ್ಸವ ನಡೆಯಲಿದ್ದು, ಸಿಎಂ ಸಿದ್ದರಾಮಯ್ಯನವರು ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ’’ ಎಂದರು.

‘‘ಪ್ರಸಕ್ತ ವರ್ಷವೂ ಸ್ಥಳೀಯ ಕಲಾವಿದರಿಗೆ ಆದ್ಯತೆ ನೀಡಲಾಗುವುದು. ಕಳೆದ ವರ್ಷ 9 ವೇದಿಕೆಗಳಲ್ಲಿ 285 ಕಾರ್ಯಕ್ರಮಗಳನ್ನು ನೀಡಲಾಗಿತ್ತು. ಈ ಸಲ 300 ಕಾರ್ಯಕ್ರಮಗಳಿಗೆ ಅವಕಾಶ ಕಲ್ಪಿಸಲಾಗುತ್ತಿದೆ. ಶಿಲ್ಪಕಲಾ, ಚಿತ್ರಕಲಾ ಶಿಬಿರಗಳನ್ನೂ ಆಯೋಜಿಸಲಾಗುವುದು. ಕುದುರೆ ಜಿಗಿತದ ಮೋಜಿನ ಆಟವೂ ನಡೆಯಲಿದೆ’’ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಶಾಸಕ ಆನಂದ್ ಸಿಂಗ್, ಹಂಪಿ ಜಿ.ಪಂ. ಸದಸ್ಯ ಪ್ರವೀಣ್ ಸಿಂಗ್, ಉಪವಿಭಾಗಾಧಿಕಾರಿ ಪ್ರಶಾಂತ್ ಕುಮಾರ ಮಿಶ್ರಾ, ತಹಸೀಲ್ದಾರ್ ಎಚ್.ವಿಶ್ವನಾಥ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿ ನಾಗರಾಜ್ ಇತರರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ