ಆ್ಯಪ್ನಗರ

ತಿಮ್ಮಾಪುರ ಸಂಪುಟ ಸೇರ್ಪಡೆಗೆ ಈಶ್ವರಪ್ಪ ವಿರೋಧ

ವಿಧಾನ ಪರಿಷತ್ ಸದಸ್ಯ ಆರ್.ಬಿ.ತಿಮ್ಮಾಪುರ್ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಂಡಿರುವುದು ಕಾನೂನುಬಾಹಿರ ಎಂದು ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ಟೀಕಿಸಿದರು.

Vijaya Karnataka 2 Sep 2017, 6:49 am
ಬಳ್ಳಾರಿ: ವಿಧಾನ ಪರಿಷತ್ ಸದಸ್ಯ ಆರ್.ಬಿ.ತಿಮ್ಮಾಪುರ್ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಂಡಿರುವುದು ಕಾನೂನುಬಾಹಿರ ಎಂದು ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ಟೀಕಿಸಿದರು.
Vijaya Karnataka Web ishwarappa opposition to the cabinet of timmapura
ತಿಮ್ಮಾಪುರ ಸಂಪುಟ ಸೇರ್ಪಡೆಗೆ ಈಶ್ವರಪ್ಪ ವಿರೋಧ


ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘‘ಸುಳ್ಳು ವಿಳಾಸನೀಡಿ, ಬೆಂಗಳೂರು ಮಹಾನಗರ ಪಾಲಿಕೆ ಮೇಯರ್, ಉಪ ಮೇಯರ್ ಚುನಾವಣೆಯಲ್ಲಿ ಮತದಾನ ಮಾಡಿರುವ ಆರೋಪ ಹೊತ್ತಿರುವ ಅವರನ್ನು ಸಂಪುಟಕ್ಕೆ ಸೇರಿಸಿಕೊಂಡಿರುವ ಮುಖ್ಯಮಂತ್ರಿಗಳ ನಿಲುವು ಸಂವಿಧಾನ ವಿರೋಧಿಯಾಗಿದೆ’’ ಎಂದು ದೂರಿದರು.

‘‘ಕನ್ನಡ ನೆಲ, ಜಲ, ಭಾಷೆ, ಗಡಿ ವಿಚಾರದಲ್ಲಿ ಎಲ್ಲರ ನಿಲುವು ಒಂದೇಯಾಗಿರಬೇಕು. ಯಾರೇ ಆದರೂ ನಾಡ ವಿರೋಧಿ ಹೇಳಿಕೆ ನೀಡುವುದನ್ನು ಸಹಿಸಲಾಗದು. ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಹೇಳಿಕೆ ಖಂಡನೀಯ. ಮಹಾರಾಷ್ಟ್ರದ ಪರವಾಗಿ ಮಾತನಾಡಿ, ಕನ್ನಡ ನಾಡಿಗೆ ಅವರು ಅವಮಾನ ಮಾಡಿದ್ದಾರೆ. ಇವರ ಬೆಂಬಲಕ್ಕೆ ಸಚಿವ ಸಂಪುಟವೇ ನಿಂತಿರುವುದು ವಿಪರ್ಯಾಸದ ಸಂಗತಿ’’ ಎಂದು ಅವರು ವ್ಯಂಗ್ಯವಾಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ