ಆ್ಯಪ್ನಗರ

ಬಳ್ಳಾರಿ: ಲಾರಿ-ಬೈಕ್ ಅಪಘಾತ, ಇಬ್ಬರು ಸ್ಥಳದಲ್ಲೇ ಸಾವು!

ಲಾರಿ ಬೈಕ್ ಅಪಘಾತದಿಂದ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಬೈಕ್ ನಲ್ಲಿ ಹಂಪಿ ರಸ್ತೆಯಿಂದ ಹೊಸಪೇಟೆ ಕಡೆ ಪ್ರಯಾಣಿಸುತ್ತಿರುವ ಸಮಯದಲ್ಲಿ ಲಾರಿ ಡಿಕ್ಕಿ ಹೊಡೆದ ಪರಿಣಾಮ ತೀವ್ರ ರಕ್ತಸ್ರಾವವಾಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

Vijaya Karnataka Web 29 Sep 2020, 12:29 pm
Vijaya Karnataka Web ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಬಳ್ಳಾರಿ: ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ಇಬ್ಬರು ಮೃತಪಟ್ಟ ಘಟನೆ ಬಳ್ಳಾರಿ ಜಿಲ್ಲೆಯಲ್ಲಿ ಸೆ.29ರಂದು ನಡೆದಿದೆ.

ಲಾರಿ, ಬೈಕ್ ನಡುವೆ ಅಪಘಾತವು ಹೊಸಪೇಟೆಯ ಹೊರವಲಯದ ಅನಂತಶಯನ ಗುಡಿ ಬಳಿ ಮಂಗಳವಾರ ನಡೆದಿದೆ.

ಕೂಡ್ಲಿಗಿ ತಾಲೂಕಿನ ಗುಡೇಕೋಟೆ ಬಳಿಯ ಜರ್ಮಲಿ ಗ್ರಾಮದ ನಿವಾಸಿ ರಾಜ(34) ಹಾಗೂ ನಗರದ ಕಾರಿಗನೂರಿನ ರಂಜಿತಾ(24) ಎಂದು ಗುರುತಿಸಲಾಗಿದೆ.

ಹಂಪಿ ರಸ್ತೆಯಿಂದ ಹೊಸಪೇಟೆ ಕಡೆ ಪ್ರಯಾಣಿಸುತ್ತಿರುವ ಸಮಯದಲ್ಲಿ ಈ ಘಟನೆ ನಡೆದಿದೆ. ಮೃತರು ನಗರದ ಹೋಟೇಲ್ ಶಾನಭಾಗದಲ್ಲಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ಎಎಸ್ ಪಿ ಲಾವಣ್ಯ ಭೇಟಿ ನೀಡಿ ಪರಿಶೀಲಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ