ಆ್ಯಪ್ನಗರ

4 ವರ್ಷದ ಹಿಂದೆ ಲಾರಿಯಲ್ಲಿ ಪಶ್ಚಿಮ ಬಂಗಾಳಕ್ಕೆ ತೆರಳಿದ್ದ ಮಾನಸಿಕ ಅಸ್ವಸ್ಥ ಮರಳಿ ಗೂಡಿಗೆ, ಬಳ್ಳಾರಿಗೆ ಬಂದ ಯುವಕ

4 ವರ್ಷಗಳ ಹಿಂದೆ ಅಪರಿಚಿತ ಟ್ರಕ್‌ನಲ್ಲಿ ಪಶ್ಚಿಮಬಂಗಾಳದ ಮಾಲ್ಡಾ ತಲುಪಿದ್ದ. ಅಲ್ಲಿಬೀದಿ ಬೀದಿ ಹುಚ್ಚನ ರೀತಿಯಲ್ಲಿ ಅಲೆದಾಡುತ್ತಿದ್ದ. ಕೈಕಾಲುಗಳಿಗೆಲ್ಲ ಗಾಯ ಆಗಿತ್ತು. ಒಂದೊತ್ತಿನ ಊಟಕ್ಕೂ ಪರಿತಪಿಸುತ್ತಿದ್ದ. ಈ ಯುವಕನನ್ನು ಗಮನಿಸಿದ ಅಲ್ಲಿನ ಸ್ವಯಂಸೇವಾ ಸಂಸ್ಥೆ ಚಿಕಿತ್ಸೆ ನೀಡಿ ಆರೈಕೆ ಮಾಡಿದೆ.

Vijaya Karnataka Web 12 Aug 2020, 9:09 pm
ಬಳ್ಳಾರಿ: ನಾಲ್ಕು ವರ್ಷಗಳ ಹಿಂದೆ ಕಾಣೆಯಾಗಿದ್ದ ಮಾನಸಿಕ ಅಸ್ವಸ್ಥ ಯುವಕನೊಬ್ಬ ಜಿಲ್ಲಾಧಿಕಾರಿ ಎಸ್‌.ಎಸ್‌.ನಕುಲ್‌ ಅವರ ಮುತುವರ್ಜಿಯಿಂದ ಬುಧವಾರ ಮರಳಿ ಗೂಡು ಸೇರಿದ್ದಾನೆ.
Vijaya Karnataka Web ಪೊಲೀಸ್‌
ಪೊಲೀಸ್‌


ಜಿಲ್ಲೆಯ ಸಂಡೂರು ತಾಲೂಕಿನ ನಾಗಲಾಪುರ ಗ್ರಾಮದ 25 ವರ್ಷದ ವೆಂಕಟೇಶ ಎಂಬಾತ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದಾನೆ. 4 ವರ್ಷಗಳ ಹಿಂದೆ ಅಪರಿಚಿತ ಟ್ರಕ್‌ನಲ್ಲಿ ಪಶ್ಚಿಮ ಬಂಗಾಳದ ಮಾಲ್ಡಾ ತಲುಪಿದ್ದ. ಅಲ್ಲಿ ಬೀದಿ ಬೀದಿ ಹುಚ್ಚನ ರೀತಿಯಲ್ಲಿ ಅಲೆದಾಡುತ್ತಿದ್ದ. ಕೈಕಾಲುಗಳಿಗೆಲ್ಲ ಗಾಯ ಆಗಿತ್ತು. ಒಂದೊತ್ತಿನ ಊಟಕ್ಕೂ ಪರಿತಪಿಸುತ್ತಿದ್ದ. ಈ ಯುವಕನನ್ನು ಗಮನಿಸಿದ ಅಲ್ಲಿನ ಸ್ವಯಂಸೇವಾ ಸಂಸ್ಥೆಯೊಂದು ಸೂಕ್ತ ಚಿಕಿತ್ಸೆ ನೀಡಿ ವಿಶೇಷ ಆರೈಕೆ ಮಾಡಿದೆ. ಯುವಕನ ಬಗ್ಗೆ ಎನ್‌ಜಿಒ ಸಂಸ್ಥೆಯ ಸದಸ್ಯರು ಮಾಲ್ಡಾ ಜಿಲ್ಲಾಧಿಕಾರಿಯ ಗಮನಕ್ಕೆ ತಂದಿದ್ದಾರೆ. ನಂತರ ಮಾಲ್ಡಾ ಜಿಲ್ಲಾಧಿಕಾರಿ, ಬಳ್ಳಾರಿ ಜಿಲ್ಲಾಧಿಕಾರಿಗೆ ವಿಷಯ ತಿಳಿಸಿದ್ದಾರೆ.

ವೆಂಕಟೇಶನ ಬಗ್ಗೆ ವಿಷಯ ತಿಳಿಯುತ್ತಿದ್ದಂತೆ ಬಳ್ಳಾರಿ ಜಿಲ್ಲಾಧಿಕಾರಿ ಎಸ್‌.ಎಸ್‌.ನಕುಲ್‌ ಅವರು ವಿಶೇಷ ಕಾಳಜಿಯಿಂದ ಮಾಲ್ಡಾ ಡಿಸಿ ಮೂಲಕ ಎನ್‌ಜಿಒ ಪ್ರಮುಖರನ್ನು ಸಂಪರ್ಕಿಸಿ, ಅಸ್ವಸ್ಥ ಯುವಕನಿಗೆ ಸೂಕ್ತ ಚಿಕಿತ್ಸೆ ಸೌಲಭ್ಯ ಒದಗಿಸಲು ಕ್ರಮಕೈಗೊಂರು. ಚಿಕಿತ್ಸೆಗೆ ತಗಲುವ ಎಲ್ಲಖರ್ಚು-ವೆಚ್ಚ ಭರಿಸುವುದಾಗಿ ಭರವಸೆ ನೀಡಿದರು. ಆರೋಗ್ಯ ಸುಧಾರಿಸಿದ ನಂತರ ವೆಂಕಟೇಶನನ್ನು ಮಾಲ್ಡಾದಿಂದ ಕೋಲ್ಕೊತಾ ವಿಮಾನನಿಲ್ದಾಣಕ್ಕೆ ಕರೆತರಲಾಯಿತು.

ಅಲ್ಲಿಂದ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಬಳ್ಳಾರಿ ಜಿಲ್ಲಾಡಳಿತದ ವೆಚ್ಚದಡಿ ಬುಧವಾರ ಕರೆತರಲಾಯಿತು. ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ಯುವಕನ ಸೋದರರಿಬ್ಬರು ವೆಂಕಟೇಶನನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಎಂದಿಗೂ ಸಿಗಲಾರ ಎಂದುಕೊಂಡಿದ್ದ ವೆಂಕಟೇಶನ ಕುಟುಂಬದಲ್ಲಿಸಂತಸ ಮನೆ ಮಾಡಿದೆ. ಜಿಲ್ಲಾಧಿಕಾರಿ ಎಸ್‌.ಎಸ್‌.ನಕುಲ್‌ ಅವರು ವಿಶೇಷ ಕಾರಿನ ವ್ಯವಸ್ಥೆ ಮಾಡಿ ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ಸೋದರರ ಮೂಲಕ ವೆಂಕಟೇಶನನ್ನು ಸಂಡೂರು ತಾಲೂಕಿನ ನಾಗಲಾಪುರಕ್ಕೆ ತಲುಪಿಸಲಾಯಿತು. ಬಳ್ಳಾರಿ ಜಿಲ್ಲಾಧಿಕಾರಿಯವರ ಕಾರ್ಯಕ್ಕೆ ವೆಂಕಟೇಶನ ಕುಟುಂಬ ಹಾಗೂ ಜಿಲ್ಲೆಯ ಜನತೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ