ಆ್ಯಪ್ನಗರ

ಹೊಸಪೇಟೆಯೆಲ್ಲೆಡೆ ಸಂಚರಿಸಿ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಿಸಿದ ಸಚಿವ ಆನಂದ್ ಸಿಂಗ್, ಪುತ್ರ, ಪುತ್ರಿ

ಐತಿಹಾಸಿಕ ರಾಮ ಮಂದಿರ ನಿರ್ಮಾಣವಾಗುತ್ತಿರುವುದರ ಹಿಂದೆ, ನೂರಾರು ವರ್ಷಗಳ ಕನಸು, ಲಕ್ಷಾಂತರ ಜನರ ತ್ಯಾಗ, ಬಲಿದಾನದವಿದೆ. ಇದಕ್ಕಾಗಿ ಸರ್ವರೂ ತಮ್ಮ ಕೈಲಾದಷ್ಟು ದೇಣಿಗೆ ನೀಡುವ ಮೂಲಕ ಅವರ ಶ್ರಮಕ್ಕೆ ಗೌರವ ವಂದನೆ ಸಲ್ಲಿಸಬೇಕಾಗಿದೆ

Vijaya Karnataka Web 16 Jan 2021, 4:55 pm
ಬಳ್ಳಾರಿ: ಅಯೋಧ್ಯೆಯಲ್ಲಿ ಭವ್ಯವಾದ ಶ್ರೀ ರಾಮ ಮಂದಿರ ನಿರ್ಮಾಣವಾಗುತ್ತಿದ್ದು,ಇದಕ್ಕಾಗಿ ಸರ್ವರೂ ಸಮರ್ಪಣಾ ಭಾವದಿಂದ ತಮ್ಮ ಕೈಲಾದಷ್ಟು ದೇಣಿಗೆ ನೀಡಿ ಎಂದು ಅರಣ್ಯ ಸಚಿವ ಆನಂದ್ ಸಿಂಗ್ ಮನವಿ ಮಾಡಿದ್ದಾರೆ.
Vijaya Karnataka Web ಆನಂದ್‌ ಸಿಂಗ್‌ ದೇಣಿಗೆ ಸಂಗ್ರಹ
ಆನಂದ್‌ ಸಿಂಗ್‌ ದೇಣಿಗೆ ಸಂಗ್ರಹ


ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣ ಹಿನ್ನಲೆ ನಿಧಿ ಸಮರ್ಪಣಾ ಅಭಿಯಾನದಲ್ಲಿ ಭಾಗಿಯಾದ ಸಚಿವರು, ಹೊಸಪೇಟೆ ನಗರದಲ್ಲಿ ದೇಣಿಗೆ ಸಂಗ್ರಹಿಸಿ ಮಾತನಾಡಿದರು.

ಐತಿಹಾಸಿಕ ರಾಮ ಮಂದಿರ ನಿರ್ಮಾಣವಾಗುತ್ತಿರುವುದರ ಹಿಂದೆ, ನೂರಾರು ವರ್ಷಗಳ ಕನಸು, ಲಕ್ಷಾಂತರ ಜನರ ತ್ಯಾಗ, ಬಲಿದಾನದವಿದೆ. ಇದಕ್ಕಾಗಿ ಸರ್ವರೂ ತಮ್ಮ ಕೈಲಾದಷ್ಟು ದೇಣಿಗೆ ನೀಡುವ ಮೂಲಕ ಅವರ ಶ್ರಮಕ್ಕೆ ಗೌರವ ವಂದನೆ ಸಲ್ಲಿಸಬೇಕಾಗಿದೆ ಎಂದರು.

ಈ ಐತಿಹಾಸಿಕ ಕ್ಷಣದಲ್ಲಿ ದೇಶದ ಪ್ರತಿಯೊಬ್ಬರೂ ಭಾಗವಹಿಸಬೇಕೆಂಬ ಆಶಾಭಾವನೆ ನಮ್ಮದು. ನಿಧಿ ಸಂಗ್ರಹ ಅಭಿಯಾನ ಸ್ವಾಭಿಮಾನದ ಸಂಕೇತವಾಗಿದ್ದು, ಎಲ್ಲರೂ ಇದಕ್ಕೆ ಕೈಜೋಡಿಸುವ ಮೂಲಕ ಸಹಕಾರ ನೀಡಬೇಕು. ಸರ್ವರ ಸಮರ್ಪಣಾ ಭಾವದಿಂದ ನೀಡಿದ ದೇಣಿಗೆಯಿಂದ ಭವ್ಯವಾದ ರಾಮಮಂದಿರ ಎದ್ದೇಳಬೇಕು ಎಂಬುದು ನಮ್ಮ ಆಶಯ ಎಂದು ಹೇಳಿದರು.

ಸಚಿವರ ಮಕ್ಕಳೂ ಅಭಿಯಾನದಲ್ಲಿ ಭಾಗಿ

ಅಭಿಯಾನದಲ್ಲಿ ಸಚಿವರ ಪುತ್ರ ಸಿದ್ಧಾರ್ಥ್ ಸಿಂಗ್ , ಪುತ್ರಿ ವೈಷವಿ ಸಿಂಗ್ ಹಾಗೂ ಯಶಸ್ವಿನಿ ಸಿಂಗ್ ಕೂಡ ಭಾಗಿಯಾದರು. ನಗರದ ವಿವಿಧ ಕಡೆ ತೆರಳಿ ಸ್ವತಃ ನಿಧಿ ಸಂಗ್ರಹಿಸಿದ ಸಚಿವರು, ದೇಣಿಗೆ ನೀಡಿದವರಿಗೆ ರಶೀದಿ ವಿತರಿಸಿ, ಕೃತಜ್ಞತೆ ಸಲ್ಲಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ