ಆ್ಯಪ್ನಗರ

DCM ಹುದ್ದೆ: ಪಕ್ಷದ ತೀರ್ಮಾನದ ವಿರುದ್ಧ ಪ್ರತಿಭಟನೆ ಬೇಡ ಎಂದು ಶ್ರೀರಾಮುಲು ಮನವಿ

ಡಿಸಿಎಂ ಹುದ್ದೆ ನೀಡದಿರುವ ಪಕ್ಷದ ತೀರ್ಮಾನದ ವಿರುದ್ಧ ಪ್ರತಿಭಟನೆ ಬೇಡ ಎಂದು ನೂತನ ಸಚಿವ ಶ್ರೀರಾಮುಲು ಅವರು ಕಾರ್ಯಕರ್ತರ ಬಳಿ ಮನವಿ ಮಾಡಿದ್ದಾರೆ.

Vijaya Karnataka Web 28 Aug 2019, 1:56 pm
ಬಳ್ಳಾರಿ: ನನಗೆ ಉಪ ಮುಖ್ಯಮಂತ್ರಿ ಹುದ್ದೆ ನೀಡದಿರುವ ಪಕ್ಷದ ತೀರ್ಮಾನದ ವಿರುದ್ಧ ಬೆಂಬಲಿಗರು ಮತ್ತು ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ಮಾಡಬಾರದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ಮನವಿ ಮಾಡಿದ್ದಾರೆ.
Vijaya Karnataka Web sriramulu


ನಗರದಲ್ಲಿ ಸುದ್ದಿಗಾರರೊಂದಿಗೆ ಬುಧವಾರ ಮಾತನಾಡಿದರು. ತಮಗೆ ಡಿಸಿಎಂ‌ ಸ್ಥಾನ ನೀಡದಿದ್ದಕ್ಕೆ ಯಾರೊಬ್ಬರು ಬೀದಿಗಿಳಿದು ಹೋರಾಟ ಮಾಡದಂತೆ ಈ ಹಿಂದೆ ಮನವಿ‌ ಮಾಡಿಕೊಂಡಿದ್ದೆ. ಆದರೂ ಪ್ರತಿಭಟನೆಗಳು ನಡೆದಿರುವುದು ವೈಯಕ್ತಿಕವಾಗಿ ಬೇಸರ ತಂದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ಬಗ್ಗೆ ನಿನ್ನೆಯೇ ನಾನು ಟ್ಟೀಟ್ ಮೂಲಕ ರಾಜ್ಯದ ಜನತೆಗೆ ಮನವಿ‌ ಮಾಡಿರುವೆ. ಪಕ್ಷ ತಾಯಿ ಇದ್ದಂತೆ. ಪಕ್ಷದ ತೀರ್ಮಾನ ತೆಗೆದುಕೊಂಡಿದ್ದಕ್ಕೆ ನಾನು ಬದ್ಧ. ವೈಯಕ್ತಿಕ ಅಭಿಪ್ರಾಯ ಬದಿಗೊತ್ತಿ ಕೆಲಸ ಮಾಡಬೇಕು. ಯಾವುದೇ ಪ್ರತಿಭಟನೆ ಮಾಡಬಾರದು. ಪಕ್ಷಕ್ಕಾಗಿ ಎಲ್ಲರೂ ದುಡಿಯೋಣ. ಎಲ್ಲ ಜನರಿಗೆ ನ್ಯಾಯ ಕೊಡಿಸೋ ಕೆಲಸ ಬಿಜೆಪಿ ಪಕ್ಷ ಸೇರಿ ನಾನು ಮಾಡುತ್ತೇನೆ. ವಾಲ್ಮೀಕಿ ಸಮುದಾಯಕ್ಕೆ ಶೇ.7.5 ಮೀಸಲಾತಿ‌ ಕೊಡುವ ಕೆಲಸ ಅಗಬೇಕಿದೆ. ಸಿಎಂ ಯಡಿಯೂರಪ್ಪನವರು ಈ ಕುರಿತು ಅಶ್ವಾಸನೆ ನೀಡಿದ್ದಾರೆ. ಅದು‌ ಸಿಕ್ಕರೆ ವಾಲ್ಮೀಕಿ ಸಮುದಾಯಕ್ಕೆ ಎಲ್ಲ ಸಿಕ್ಕಂತೆ ಎಂದರು.

ಈ ವಿಚಾರದಲ್ಲಿ ರಮೇಶಜಾರಕಿಹೊಳಿ, ಬಾಲಚಂದ್ರ ಜಾರಕಿ ಹೊಳಿ, ಶಿವನಗೌಡ ನಾಯಕ, ರಾಜೂಗೌಡ ಎಲ್ಲರೂ ಒಂದಾಗಿದ್ದೇವೆ. ಪಕ್ಷಕ್ಕೆ ಮುಜುಗರ ತರೋ ಕೆಲಸ ಯಾರು ಮಾಡಬೇಡಿ. ಜಿಲ್ಲಾ ಉಸ್ತುವಾರಿ ವಿಚಾರದಲ್ಲಿ ನಾನು ಯಾವುದೇ ಬೇಡಿಕೆ ಇಟ್ಟಿಲ್ಲ. ಸದ್ಯ ನಾನು ನೆರೆ ಪೀಡಿತ ಪ್ರದೇಶಾಭಿವೃದ್ಧಿಗೆ ಬಳ್ಳಾರಿ ರಾಯಚೂರು ಯಾದಗಿರಿ ಉಸ್ತುವಾರಿಯಾಗಿದ್ದೇನೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ