ಆ್ಯಪ್ನಗರ

ಮಂತ್ರಾಲಯ, ಹಂಪಿಯಲ್ಲಿ ನವರಾತ್ರಿ ಸಡಗರ

ಸಂಜೆ ಶ್ರೀಮಠದಲ್ಲಿರುವ ಬನ್ನಿ ಮಂಟಪದಲ್ಲಿ ಧಾರ್ಮಿಕ ವಿಧಿ ವಿಧಾನಗಳನ್ನು ಕೈಗೊಂಡರು. ಇದಕ್ಕೂ ಮೊದಲು ಬೆಳಗ್ಗೆ ಮಂತ್ರಾಲಯದ ಶ್ರೀವೆಂಕಟೇಶ್ವರ ದೇವಸ್ಥಾನಕ್ಕೆ ತೆರಳಿದ ಶ್ರೀಗಳು ರಥೋತ್ಸವಕ್ಕೆ ಪೂಜೆ ಸಲ್ಲಿಸಿ ಚಾಲನೆ ನೀಡಿದರು. ಈ ವೇಳೆ ಸಾವಿರಾರು ಸಂಖ್ಯೆಯ ಭಕ್ತರು ಪಾಲ್ಗೊಂಡಿದ್ದರು.

Vijaya Karnataka 20 Oct 2018, 8:18 am
ರಾಯಚೂರು/ ಹೊಸಪೇಟೆ: ಮಂತ್ರಾಲಯದಲ್ಲಿ ದಸರಾ ಹಬ್ಬದ ಸಂದರ್ಭ ಗುರುವಾರ ಗ್ರಾಮ ದೇವತೆ ಶ್ರೀಮಂಚಾಲೆಮ್ಮ ದೇವಿಗೆ ಶ್ರೀಮಠದ ಪೀಠಾಪತಿ ಶ್ರೀಸುಬುಧೇಂದ್ರತೀರ್ಥರು ವಿಶೇಷ ಪೂಜೆ ನೆರವೇರಿಸಿದರು.
Vijaya Karnataka Web pppp


ಸಂಜೆ ಶ್ರೀಮಠದಲ್ಲಿರುವ ಬನ್ನಿ ಮಂಟಪದಲ್ಲಿ ಧಾರ್ಮಿಕ ವಿಧಿ ವಿಧಾನಗಳನ್ನು ಕೈಗೊಂಡರು. ಇದಕ್ಕೂ ಮೊದಲು ಬೆಳಗ್ಗೆ ಮಂತ್ರಾಲಯದ ಶ್ರೀವೆಂಕಟೇಶ್ವರ ದೇವಸ್ಥಾನಕ್ಕೆ ತೆರಳಿದ ಶ್ರೀಗಳು ರಥೋತ್ಸವಕ್ಕೆ ಪೂಜೆ ಸಲ್ಲಿಸಿ ಚಾಲನೆ ನೀಡಿದರು. ಈ ವೇಳೆ ಸಾವಿರಾರು ಸಂಖ್ಯೆಯ ಭಕ್ತರು ಪಾಲ್ಗೊಂಡಿದ್ದರು.

ಹಂಪಿಯಲ್ಲಿ ವಿಶೇಷ ಪೂಜೆ

ವಿಜಯದಶಮಿ ನಿಮಿತ್ತ ಹೊಸಪೇಟೆ ತಾಲೂಕಿನ ಹಂಪಿ ವಿರೂಪಾಕ್ಷೇಶ್ವರ ದೇವರ ವಿಗ್ರಹಕ್ಕೆ ಶುಕ್ರವಾರ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು. ಬೆಳಗ್ಗೆ ರುದ್ರಾಭಿಷೇಕ, ಪಂಚಾಭಿಷೇಕ ನೆರವೇರಿಸಲಾಯಿತು. ಮಧ್ಯಾಹ್ನ ವಿದ್ಯಾರಣ್ಯ ಭಾರತಿ ಸ್ವಾಮೀಜಿ ಅವರು ರುದ್ರಾಭಿಷೇಕ ನೆರವೇರಿಸಿದರು. ಪಂಪಾಂಬಿಕೆ, ಭುವನೇಶ್ವರಿ ದೇವಿ ಮೂರ್ತಿಗಳಿಗೆ ವಿಶೇಷ ಅಲಂಕಾರ ಕೈಗೊಳ್ಳಲಾಗಿತ್ತು. ಉದ್ಧನ ವೀರಭದ್ರ, ದುರ್ಗಾದೇವಿಗೆ ಅರ್ಚಕರು ವಿಶೇಷ ಪೂಜೆ ಸಲ್ಲಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ