ಆ್ಯಪ್ನಗರ

‘ಕೈಗಾರಿಕೆಗಳ ಬೆಳವಣಿಗೆಗೆ ಪ್ರೋತ್ಸಾಹ ಅಗತ್ಯ’

ಕೈಗಾರಿಕೆಗಳಿಗೆ ಪೂರಕವಾದ ವಾತಾವರಣ ಸೃಷ್ಟಿಯಾದರೆ, ಉದ್ಯಮ ಬೆಳೆಯಲು ಸಾಧ್ಯ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ತಾಲೂಕು ಘಟಕದ ಅಧ್ಯಕ್ಷೆ ಅಶ್ವಿನಿ ಕೋತಂಬರಿ ಹೇಳಿದರು.

Vijaya Karnataka 13 Oct 2018, 5:00 am
ಹೊಸಪೇಟೆ : ಕೈಗಾರಿಕೆಗಳಿಗೆ ಪೂರಕವಾದ ವಾತಾವರಣ ಸೃಷ್ಟಿಯಾದರೆ, ಉದ್ಯಮ ಬೆಳೆಯಲು ಸಾಧ್ಯ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ತಾಲೂಕು ಘಟಕದ ಅಧ್ಯಕ್ಷೆ ಅಶ್ವಿನಿ ಕೋತಂಬರಿ ಹೇಳಿದರು.
Vijaya Karnataka Web BLR-BLR12HPT-02


ನಗರದ ಖಾಸಗಿ ಹೋಟೆಲ್‌ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸಂಘದ ಸರ್ವ ಸದಸ್ಯರ ಸಭೆ ಉದ್ಘಾಟಿಸಿ ಮಾತನಾಡಿದರು.ಕೈಗಾರಿಕೆಗಳ ಮೂಲಕ ಯುವಜನರಿಗೆ ಉದ್ಯೋಗ ದೊರಕಿಸಿಕೊಡಬಹುದಾಗಿದ್ದು, ಸರಕಾರಗಳು ಈ ಬಗ್ಗೆ ಆಸಕ್ತಿ ತಳೆಯಬೇಕು ಎಂದರು. ನಂತರ ಅವರು ಸಂಘದ ವರದಿಯನ್ನು ಮಂಡಿಸಿದರು. ಮುಖಂಡರಾದ ಗೊಗ್ಗ ಚನ್ನಬಸವರಾಜ, ಎಚ್‌.ಶ್ರೀನಿವಾಸರಾವ್‌, ಉಮಾಮಹೇಶ್ವರ್‌ ರಾವ್‌, ಡಾ.ಗುರುನಂದಿನಿ ಇದ್ದರು. ಈ ಸಂದರ್ಭದಲ್ಲಿ ಎಸ್ಸೆಸ್ಸೆಲ್ಸಿಯಲ್ಲಿ ಹೆಚ್ಚು ಅಂಕ ಪಡೆದ ತಾಲೂಕಿನ ಹತ್ತು ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. ಸಂಘದ ಕಾರ್ಯದರ್ಶಿ ಸೈಯದ್‌ ನಾಜಿಮುದ್ದೀನ್‌, ಉಪಾಧ್ಯಕ್ಷ ರಾದ ಕಾಕುಬಾಳ ರಾಜೇಂದ್ರ ಹಾಗೂ ಮಹಮ್ಮದ್‌ ಇಮಾಮ್‌ ನಿಯಾಜಿ, ಜಂಟಿ ಕಾರ್ಯದರ್ಶಿ ಎಸ್‌.ಭರ್ಮಣ್ಣ ಹಾಗೂ ಚಂದ್ರಕಾಂತ್‌ ಕಾಮತ್‌, ಶ್ರೀ ದೇವೇಂದ್ರ ಕುಮಾರ್‌ ಸೋನಿ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ