ಆ್ಯಪ್ನಗರ

ಹಾಲಿ, ಮಾಜಿ ಶಾಸಕರಿಂದ ನಾಮಪತ್ರ ಸಲ್ಲಿಕೆ

ಮಾಜಿ ಶಾಸಕ ಚಂದ್ರನಾಯ್ಕ, ಹಾಲಿ ಶಾಸಕ ಪಿ.ಟಿ.ಪರಮೇಶ್ವರನಾಯ್ಕ ಸೇರಿದಂತೆ ನಾನಾ ಪಕ್ಷ ಗಳ ಅಭ್ಯರ್ಥಿಗಳು ಸೋಮವಾರ ತಮ್ಮ ಉಮೇದುವಾರಿಕೆಯಲ್ಲಿ ನಾಮಪತ್ರ ಸಲ್ಲಿಸಿದರು.

Vijaya Karnataka 24 Apr 2018, 5:00 am
ಹೂವಿನಹಡಗಲಿ : ಮಾಜಿ ಶಾಸಕ ಚಂದ್ರನಾಯ್ಕ, ಹಾಲಿ ಶಾಸಕ ಪಿ.ಟಿ.ಪರಮೇಶ್ವರನಾಯ್ಕ ಸೇರಿದಂತೆ ನಾನಾ ಪಕ್ಷ ಗಳ ಅಭ್ಯರ್ಥಿಗಳು ಸೋಮವಾರ ತಮ್ಮ ಉಮೇದುವಾರಿಕೆಯಲ್ಲಿ ನಾಮಪತ್ರ ಸಲ್ಲಿಸಿದರು.
Vijaya Karnataka Web BLR-BLY23HDLP1


ಬಿಜೆಪಿಯ ಅಧಿಕೃತ ಅಭ್ಯರ್ಥಿಯಾಗಿ ಮಾಜಿ ಶಾಸಕ ಬಿ. ಚಂದ್ರನಾಯ್ಕ ಸೋಗಿಯ ಶ್ರೀ ವೀರಭದ್ರೇಶ್ವರ ಸ್ವಾಮಿ ದೇಗುಲಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಬಳಿಕ ಎಂದಿನಂತೆ ಸರಳವಾಗಿ ತಮ್ಮ ಅಪಾರ ಬೆಂಬಲಿಗರೊಂದಿಗೆ ಪಾದಯಾತ್ರೆ ಮೂಲಕ ಇಲ್ಲಿನ ಮಿನಿ ವಿಧಾನ ಸೌಧಕ್ಕೆ ತೆರಳಿ ತಮ್ಮ ನಾಮಪತ್ರ ಸಲ್ಲಿಸಿದರು. ಈ ವೇಳೆಯಲ್ಲಿ ಪಕ್ಷ ದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಚ್‌.ಪೂಜಪ್ಪ, ಮಂಡಲ ಅಧ್ಯಕ್ಷ ಎಂ.ಬಿ.ಬಸವರಾಜ, ಜಿ.ಪಂ. ಸದಸ್ಯೆ ಎಸ್‌.ಎಂ.ಲಲಿತಾಬಾಯಿ, ತಾ.ಪಂ. ಸದಸ್ಯ ಈಟಿ ಲಿಂಗರಾಜ ಇದ್ದರು.

ಇದೇ ವೇಳೆ ಹಾಲಿ ಶಾಸಕ, ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್‌ ಅಭ್ಯರ್ಥಿ ಪಿ.ಟಿ.ಪರಮೇಶ್ವರನಾಯ್ಕ ಪಟ್ಟಣದ ಶ್ರೀಆಂಜನೇಯ ದೇಗುಲಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿ ಸಾವಿರಾರು ಬೆಂಬಲಿಗರೊಂದಿಗೆ ಪಾದಯಾತ್ರೆ ಮೂಲಕ ಮಿನಿವಿಧಾನಸೌಧಕ್ಕೆ ತೆರಳಿ ದ್ವಿಪ್ರತಿಯಲ್ಲಿ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ನಂದಿಹಳ್ಳಿ ಹಾಲಪ್ಪ, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಬಿ.ವಿ.ಶಿವಯೋಗಿ, ಬ್ಲಾಕ್‌ ಅಧ್ಯಕ್ಷ ರಾದ ಐಗೋಳ ಚಿದಾನಂದ, ಎಂ. ಪರಮೇಶ್ವರಪ್ಪ, ಶಾಸಕ ಪಿಟಿಪಿ ಪುತ್ರ ಪಿ.ಟಿ. ಭರತ್‌ ಇದ್ದರು.

ಬಳಿಕ ಕೆಜೆಪಿಯಿಂದ ಹಗರನೂರಿನ ಹರೀಶ ಕುಮಾರ್‌,ಪಕ್ಷೇತರ ಅಭ್ಯರ್ಥಿಗಳಾಗಿ ಓದೋ ಗಂಗಪ್ಪ, ಹೇಮಂತ್‌ ಕುಮಾರ್‌ ಭಾರತಿ ನಾಮಪತ್ರ ಸಲ್ಲಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ