ಹೂವಿನಹಡಗಲಿ : ಮಾಜಿ ಶಾಸಕ ಚಂದ್ರನಾಯ್ಕ, ಹಾಲಿ ಶಾಸಕ ಪಿ.ಟಿ.ಪರಮೇಶ್ವರನಾಯ್ಕ ಸೇರಿದಂತೆ ನಾನಾ ಪಕ್ಷ ಗಳ ಅಭ್ಯರ್ಥಿಗಳು ಸೋಮವಾರ ತಮ್ಮ ಉಮೇದುವಾರಿಕೆಯಲ್ಲಿ ನಾಮಪತ್ರ ಸಲ್ಲಿಸಿದರು.
ಬಿಜೆಪಿಯ ಅಧಿಕೃತ ಅಭ್ಯರ್ಥಿಯಾಗಿ ಮಾಜಿ ಶಾಸಕ ಬಿ. ಚಂದ್ರನಾಯ್ಕ ಸೋಗಿಯ ಶ್ರೀ ವೀರಭದ್ರೇಶ್ವರ ಸ್ವಾಮಿ ದೇಗುಲಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಬಳಿಕ ಎಂದಿನಂತೆ ಸರಳವಾಗಿ ತಮ್ಮ ಅಪಾರ ಬೆಂಬಲಿಗರೊಂದಿಗೆ ಪಾದಯಾತ್ರೆ ಮೂಲಕ ಇಲ್ಲಿನ ಮಿನಿ ವಿಧಾನ ಸೌಧಕ್ಕೆ ತೆರಳಿ ತಮ್ಮ ನಾಮಪತ್ರ ಸಲ್ಲಿಸಿದರು. ಈ ವೇಳೆಯಲ್ಲಿ ಪಕ್ಷ ದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಚ್.ಪೂಜಪ್ಪ, ಮಂಡಲ ಅಧ್ಯಕ್ಷ ಎಂ.ಬಿ.ಬಸವರಾಜ, ಜಿ.ಪಂ. ಸದಸ್ಯೆ ಎಸ್.ಎಂ.ಲಲಿತಾಬಾಯಿ, ತಾ.ಪಂ. ಸದಸ್ಯ ಈಟಿ ಲಿಂಗರಾಜ ಇದ್ದರು.
ಇದೇ ವೇಳೆ ಹಾಲಿ ಶಾಸಕ, ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಅಭ್ಯರ್ಥಿ ಪಿ.ಟಿ.ಪರಮೇಶ್ವರನಾಯ್ಕ ಪಟ್ಟಣದ ಶ್ರೀಆಂಜನೇಯ ದೇಗುಲಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿ ಸಾವಿರಾರು ಬೆಂಬಲಿಗರೊಂದಿಗೆ ಪಾದಯಾತ್ರೆ ಮೂಲಕ ಮಿನಿವಿಧಾನಸೌಧಕ್ಕೆ ತೆರಳಿ ದ್ವಿಪ್ರತಿಯಲ್ಲಿ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ನಂದಿಹಳ್ಳಿ ಹಾಲಪ್ಪ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಬಿ.ವಿ.ಶಿವಯೋಗಿ, ಬ್ಲಾಕ್ ಅಧ್ಯಕ್ಷ ರಾದ ಐಗೋಳ ಚಿದಾನಂದ, ಎಂ. ಪರಮೇಶ್ವರಪ್ಪ, ಶಾಸಕ ಪಿಟಿಪಿ ಪುತ್ರ ಪಿ.ಟಿ. ಭರತ್ ಇದ್ದರು.
ಬಳಿಕ ಕೆಜೆಪಿಯಿಂದ ಹಗರನೂರಿನ ಹರೀಶ ಕುಮಾರ್,ಪಕ್ಷೇತರ ಅಭ್ಯರ್ಥಿಗಳಾಗಿ ಓದೋ ಗಂಗಪ್ಪ, ಹೇಮಂತ್ ಕುಮಾರ್ ಭಾರತಿ ನಾಮಪತ್ರ ಸಲ್ಲಿಸಿದ್ದಾರೆ.
ಬಿಜೆಪಿಯ ಅಧಿಕೃತ ಅಭ್ಯರ್ಥಿಯಾಗಿ ಮಾಜಿ ಶಾಸಕ ಬಿ. ಚಂದ್ರನಾಯ್ಕ ಸೋಗಿಯ ಶ್ರೀ ವೀರಭದ್ರೇಶ್ವರ ಸ್ವಾಮಿ ದೇಗುಲಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಬಳಿಕ ಎಂದಿನಂತೆ ಸರಳವಾಗಿ ತಮ್ಮ ಅಪಾರ ಬೆಂಬಲಿಗರೊಂದಿಗೆ ಪಾದಯಾತ್ರೆ ಮೂಲಕ ಇಲ್ಲಿನ ಮಿನಿ ವಿಧಾನ ಸೌಧಕ್ಕೆ ತೆರಳಿ ತಮ್ಮ ನಾಮಪತ್ರ ಸಲ್ಲಿಸಿದರು. ಈ ವೇಳೆಯಲ್ಲಿ ಪಕ್ಷ ದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಚ್.ಪೂಜಪ್ಪ, ಮಂಡಲ ಅಧ್ಯಕ್ಷ ಎಂ.ಬಿ.ಬಸವರಾಜ, ಜಿ.ಪಂ. ಸದಸ್ಯೆ ಎಸ್.ಎಂ.ಲಲಿತಾಬಾಯಿ, ತಾ.ಪಂ. ಸದಸ್ಯ ಈಟಿ ಲಿಂಗರಾಜ ಇದ್ದರು.
ಇದೇ ವೇಳೆ ಹಾಲಿ ಶಾಸಕ, ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಅಭ್ಯರ್ಥಿ ಪಿ.ಟಿ.ಪರಮೇಶ್ವರನಾಯ್ಕ ಪಟ್ಟಣದ ಶ್ರೀಆಂಜನೇಯ ದೇಗುಲಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿ ಸಾವಿರಾರು ಬೆಂಬಲಿಗರೊಂದಿಗೆ ಪಾದಯಾತ್ರೆ ಮೂಲಕ ಮಿನಿವಿಧಾನಸೌಧಕ್ಕೆ ತೆರಳಿ ದ್ವಿಪ್ರತಿಯಲ್ಲಿ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ನಂದಿಹಳ್ಳಿ ಹಾಲಪ್ಪ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಬಿ.ವಿ.ಶಿವಯೋಗಿ, ಬ್ಲಾಕ್ ಅಧ್ಯಕ್ಷ ರಾದ ಐಗೋಳ ಚಿದಾನಂದ, ಎಂ. ಪರಮೇಶ್ವರಪ್ಪ, ಶಾಸಕ ಪಿಟಿಪಿ ಪುತ್ರ ಪಿ.ಟಿ. ಭರತ್ ಇದ್ದರು.
ಬಳಿಕ ಕೆಜೆಪಿಯಿಂದ ಹಗರನೂರಿನ ಹರೀಶ ಕುಮಾರ್,ಪಕ್ಷೇತರ ಅಭ್ಯರ್ಥಿಗಳಾಗಿ ಓದೋ ಗಂಗಪ್ಪ, ಹೇಮಂತ್ ಕುಮಾರ್ ಭಾರತಿ ನಾಮಪತ್ರ ಸಲ್ಲಿಸಿದ್ದಾರೆ.