ಆ್ಯಪ್ನಗರ

ಪಿಯು ಪರೀಕ್ಷೆ: ಒಬ್ಬ ವಿದ್ಯಾರ್ಥಿಗೆ 14 ಸಿಬ್ಬಂದಿ

ಇತ್ತೀಚೆಗೆ ಪ್ರಾರಂಭವಾಗಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಮಂಗಳವಾರ, ಭೂಗೋಳಶಾಸ್ತ್ರ ವಿಷಯದ ಪರೀಕ್ಷೆಯಿತ್ತು. ಈ ಭಾಗದ ವಿದ್ಯಾರ್ಥಿಗಳು ಭೂಗೋಳಶಾಸ್ತ್ರ ಆಯ್ಕೆ ಮಾಡಿಕೊಳ್ಳುವುದು ತೀರಾ ವಿರಳ.

Vijaya Karnataka Web 13 Mar 2019, 8:35 am
ಬಳ್ಳಾರಿ: ಪಟ್ಟಣದ ಸರಕಾರಿ ಪಿಯು ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಮಂಗಳವಾರ ನಡೆದ ಪರೀಕ್ಷೆಯಲ್ಲಿ ಏಕೈಕ ವಿದ್ಯಾರ್ಥಿಗೆ 14 ಸಿಬ್ಬಂದಿ ಕಾರ್ಯನಿರ್ವಹಿಸಿದರು.
Vijaya Karnataka Web Exam


ಇತ್ತೀಚೆಗೆ ಪ್ರಾರಂಭವಾಗಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಮಂಗಳವಾರ, ಭೂಗೋಳಶಾಸ್ತ್ರ ವಿಷಯದ ಪರೀಕ್ಷೆಯಿತ್ತು. ಈ ಭಾಗದ ವಿದ್ಯಾರ್ಥಿಗಳು ಭೂಗೋಳಶಾಸ್ತ್ರ ಆಯ್ಕೆ ಮಾಡಿಕೊಳ್ಳುವುದು ತೀರಾ ವಿರಳ. ವಿಜ್ಞಾನ ವಿಭಾಗದಲ್ಲಿ ಖಾಸಗಿ ಅಭ್ಯರ್ಥಿಯಾಗಿ ಪರೀಕ್ಷೆ ಬರೆಯಲು ಅವಕಾಶ ಪಡೆದಿದ್ದ ಪ್ರಕಾಶ, ಭೂಗೋಳ ವಿಷಯ ಆಯ್ಕೆ ಮಾಡಿಕೊಂಡಿದ್ದರು. ಸ್ಥಳೀಯ ಎರಡು ಪರೀಕ್ಷಾ ಕೇಂದ್ರಗಳ ಪೈಕಿ ಸರಕಾರಿ ಪಿಯು ಕಾಲೇಜಿನಲ್ಲಿ ಮಾತ್ರ ಪ್ರಕಾಶ, ಈ ವಿಷಯದಲ್ಲಿ ಪರೀಕ್ಷೆಗೆ ಹಾಜಾರಾದ ಏಕೈಕ ಅಭ್ಯರ್ಥಿಯಾಗಿದ್ದರು.

ಪರೀಕ್ಷಾ ಮುಖ್ಯ ಅಧೀಕ್ಷ ರು, ಪ್ರಾಚಾರ್ಯೆ ಟಿ.ಕೊತ್ಲಮ್ಮ, ಉತ್ತರ ಪತ್ರಿಕೆ ಪಾಲಕ ಶಂಕರ್‌ ಪೂಜಾರ್‌, ಉಪ ಮುಖ್ಯ ಅಧೀಕ್ಷ ಕ ರಾಥೋಡ್‌, ಜಾಗೃತ ದಳ ಹಾಗೂ ಕೊಠಡಿ ಮೇಲ್ವಿಚಾರಕರು ಸೇರಿ ಒಟ್ಟು 14 ಸಿಬ್ಬಂದಿ ಕಾರ್ಯ ನಿರ್ವಹಸಿದರು.

ಬಳ್ಳಾರಿ ಜಿಲ್ಲೆ ಕೊಟ್ಟೂರಿನ ಸರಕಾರಿ ಪಿಯು ಕಾಲೇಜಿನಲ್ಲಿ ಮಂಗಳವಾರ ನಡೆದ ದ್ವಿತೀಯ ಪಿಯುಸಿ ಭೂಗೋಳಶಾಸ್ತ್ರ ವಿಷಯ ಪರೀಕ್ಷೆಯನ್ನು ಏಕೈಕ ವಿದ್ಯಾರ್ಥಿ ಪರೀಕ್ಷೆ ಬರೆದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ