ಆ್ಯಪ್ನಗರ

ಸಕಾಲದಲ್ಲಿ ಬಸ್‌ಸಂಚಾರಕ್ಕೆ ಆಗ್ರಹಿಸಿ ಮನವಿ

ಶಾಲಾ ಕಾಲೇಜು ವೇಳೆಗೆ ಸರಿಯಾಗಿ ಬಸ್‌ಸಂಚಾರ ಆರಂಭಿಸುವಂತೆ ಒತ್ತಾಯಿಸಿ, ತಾಲೂಕಿನ ನಂದಿಪುರ ಗ್ರಾಮದ ಕಾಲೇಜು ವಿದ್ಯಾರ್ಥಿಗಳು ಸಾರಿಗೆ ಸಂಸ್ಥೆ ವ್ಯವಸ್ಥಾಪಕರಿಗೆ ಬುಧವಾರ ಮನವಿ ಸಲ್ಲಿಸಿದರು.

Vijaya Karnataka 6 Sep 2018, 5:00 am
ಹಗರಿಬೊಮ್ಮನಹಳ್ಳಿ : ಶಾಲಾ ಕಾಲೇಜು ವೇಳೆಗೆ ಸರಿಯಾಗಿ ಬಸ್‌ಸಂಚಾರ ಆರಂಭಿಸುವಂತೆ ಒತ್ತಾಯಿಸಿ, ತಾಲೂಕಿನ ನಂದಿಪುರ ಗ್ರಾಮದ ಕಾಲೇಜು ವಿದ್ಯಾರ್ಥಿಗಳು ಸಾರಿಗೆ ಸಂಸ್ಥೆ ವ್ಯವಸ್ಥಾಪಕರಿಗೆ ಬುಧವಾರ ಮನವಿ ಸಲ್ಲಿಸಿದರು.
Vijaya Karnataka Web BLR-BLY5HBH2


ವಿದ್ಯಾರ್ಥಿ ಜೆ.ಪ್ರವೀಣ ಮಾತನಾಡಿ, ಗ್ರಾಮದಿಂದ ಪಟ್ಟಣದ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಸಕಾಲದಲ್ಲಿ ಬಸ್‌ ಸಂಚಾರವಿಲ್ಲದೇ ಖಾಸಗಿ ವಾಹನಗಳನ್ನು ಆಶ್ರಯಿಸುವಂತಾಗಿದೆ. ಬಸ್‌ಪಾಸ್‌ ಇದ್ದರೂ ಅದರಿಂದ ಪ್ರಯೋಜನವಾಗುತ್ತಿಲ್ಲ. ಬಸ್‌ಸಂಚಾರದಲ್ಲಿ ವಿದ್ಯಾರ್ಥಿಗಳ 4ತಾಸು ವ್ಯರ್ಥವಾಗುತ್ತಿದೆ. ಈ ಕುರಿತು ಈಗಾಗಲೇ 3 ಬಾರಿ ಮನವಿ ಸಲ್ಲಿಸಿದರೂ ಸಾರಿಗೆ ಸಂಸ್ಥೆ ಅಧಿಕಾರಿಗಳು ನಿರ್ಲಕ್ಷ ್ಯವಹಿಸಿದ್ದಾರೆ. ಕೂಡಲೇ ಮುಂಜಾನೆ ಮತ್ತು ಸಂಜೆ ಗ್ರಾಮದ ನೂರಾರು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬಸ್‌ಸಂಚಾರ ಆರಂಭಿಸಬೇಕು ಎಂದು ಆಗ್ರಹಿಸಿದರು. ಸಾರಿಗೆ ಘಟಕದ ಅಧಿಕಾರಿ ಕೇಶವರೆಡ್ಡಿಗೆ ಮನವಿ ಸಲ್ಲಿಸಿದರು. ವಿದ್ಯಾರ್ಥಿಗಳಾದ ವಿಜಯಾನಂದ, ಕೆ.ರಾಕೇಶ್‌, ರಾಜೇಶ್‌, ವಾಹಿದ್‌, ಬಸವರಾಜ, ಶಿಲ್ಪಾ, ಕೊಟ್ರೇಶ್‌, ಸುರೇಶ, ಮೂಗಪ್ಪ, ಸಂಗಪ್ಪ ಇತರರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ