ಆ್ಯಪ್ನಗರ

ಬಳ್ಳಾರಿಯಲ್ಲಿ ಪಾಕಿಸ್ತಾನ ಪರ ಘೋಷಣೆ: ಇಬ್ಬರ ಬಂಧನ

ಇತ್ತೀಚೆಗೆ ನಡೆದ ವಿಶ್ವಕಪ್‌ ಪಂದ್ಯದಲ್ಲಿ ಪಾಕಿಸ್ತಾನ್ ಜಯ ಸಾಧಿಸಿದ್ದನ್ನು ಸಂಭ್ರಮಿಸಿ, ಕೆಲವು ಮುಸ್ಲಿಂ ಯುವಕರು ಪಟಾಕಿ ಸಿಡಿಸಿ, ಪಾಕಿಸ್ತಾನ ಪರ ಘೋಷಣೆ ಕೂಗಿದ್ದರು.

Vijaya Karnataka 5 Jul 2019, 7:25 am
ಸಿರುಗುಪ್ಪ (ಬಳ್ಳಾರಿ): ತಾಲೂಕಿನ ತೆಕ್ಕಲಕೋಟೆಯಲ್ಲಿ 2019, ಜೂನ್‌ 30ರಂದು ಸಂಜೆ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಲ್ಲದೇ ಭಾರತದ ಕ್ರಿಕೆಟ್‌ ಆಟಗಾರರನ್ನು ಅವಾಚ್ಯವಾಗಿ ನಿಂದಿಸಿದ ಆರೋಪ ಆಧರಿಸಿ, ಪೊಲೀಸರು ಇಬ್ಬರನ್ನು ಬುಧವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
Vijaya Karnataka Web arrest


ಮಹೆಬೂಬ್‌ಬಾಷಾ ಹಾಗೂ ರಾಜಾಸಾಬ್‌ ಬಂಧಿತರು. ಗ್ರಾಮದ ಯುವಕ ಹರೀಶ್‌ ನೀಡಿದ ದೂರು ಆಧರಿಸಿ, ಪ್ರಕರಣ ದಾಖಲಿಸಿಕೊಂಡ ತೆಕ್ಕಲಕೋಟೆ ಠಾಣೆಯ ಪೊಲೀಸರು, ಯುವಕರಿಬ್ಬರನ್ನು ಬಂಧಿಸಿದ್ದಾರೆ. ಇತ್ತೀಚೆಗೆ ನಡೆದ ವಿಶ್ವಕಪ್‌ ಪಂದ್ಯದಲ್ಲಿ ಪಾಕಿಸ್ತಾನ್ ಜಯ ಸಾಧಿಸಿದ್ದನ್ನು ಸಂಭ್ರಮಿಸಿ, ಕೆಲವು ಮುಸ್ಲಿಂ ಯುವಕರು ಪಟಾಕಿ ಸಿಡಿಸಿ, ಪಾಕಿಸ್ತಾನ ಪರ ಘೋಷಣೆ ಕೂಗಿದ್ದರು. ಈ ಬಗ್ಗೆ ಪ್ರಶ್ನಿಸಲು ಹೋದಾಗ ತನ್ನೊಂದಿಗೆ ಯುವಕರು ವಾಗ್ವಾದ ನಡೆಸಿದ್ದರು ಎಂದು ಹರೀಶ್‌ ದೂರಿನಲ್ಲಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ