ಆ್ಯಪ್ನಗರ

ಮನೆಗೆಲಸ ಕಾರ್ಮಿಕರಿಗೂ ಪಿಎಫ್, ಸ್ಮಾರ್ಟ್‌ಕಾರ್ಡ್

ರಾಜ್ಯದಲ್ಲಿರುವ 11ಲಕ್ಷ ಮನೆಗೆಲಸ ನಿರ್ವಹಿಸುವ ಕಾರ್ಮಿಕರು ಹಾಗೂ ಹಮಾಲರಿಗೆ ಪಿಎಫ್ ಮತ್ತು ಸ್ಮಾರ್ಟ್ ಕಾರ್ಡ್ ವಿತರಿಸುವ ಚಿಂತನೆ ನಡೆದಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್ ಹೇಳಿದರು.

ವಿಕ ಸುದ್ದಿಲೋಕ 18 Feb 2017, 8:52 am
ಬಳ್ಳಾರಿ; ರಾಜ್ಯದಲ್ಲಿರುವ 11ಲಕ್ಷ ಮನೆಗೆಲಸ ನಿರ್ವಹಿಸುವ ಕಾರ್ಮಿಕರು ಹಾಗೂ ಹಮಾಲರಿಗೆ ಪಿಎಫ್ ಮತ್ತು ಸ್ಮಾರ್ಟ್ ಕಾರ್ಡ್ ವಿತರಿಸುವ ಚಿಂತನೆ ನಡೆದಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್ ಹೇಳಿದರು.
Vijaya Karnataka Web smart card and pf for domestic workers
ಮನೆಗೆಲಸ ಕಾರ್ಮಿಕರಿಗೂ ಪಿಎಫ್, ಸ್ಮಾರ್ಟ್‌ಕಾರ್ಡ್


ಇಲ್ಲಿನ ಸರಕಾರಿ ಅತಿಥಿ ಗೃಹದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯದ ಅಸಂಘಟಿತ ವಲಯದ 2 ಕೋಟಿ ಜನರಿಗೆ ಪಿಎಫ್ ಸೌಲಭ್ಯ ಒದಗಿಸಲು ಉದ್ದೇಶಿಸಲಾಗಿದೆ. ಕಾರ್ಮಿಕರು ಪ್ರತಿ ತಿಂಗಳು 100 ರೂ.ಗಳಂತೆ ವಾರ್ಷಿಕ 1,200ರೂ. ಪಿಎಫ್ ಹಣ ಪಾವತಿಸಿದರೆ, ಸರಕಾರ ತನ್ನ ಪಾಲಿನ ಹಣ ನೀಡಲು 2,400 ಕೋಟಿ ರೂ. ಅಗತ್ಯ. ಈ ಹಿನ್ನೆಲೆಯಲ್ಲಿ ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ’’ ಎಂದರು.

ನರೇಗಾ ಕೆಲಸಗಾರರಿಗೆ ನೆರವು: ‘ನರೇಗಾ ಕಾರ್ಮಿಕರಿಗೆ ಕಟ್ಟಡ ಕಾರ್ಮಿಕರಂತೆ ಸೌಲಭ್ಯ ದೊರಕಿಸಲು ನೋಂದಣಿ ಪ್ರಕ್ರಿಯೆ ಆರಂಭಿಸಲಾಗಿದೆ. ರಾಜ್ಯದಲ್ಲಿ ಇಂತಹ 55 ಲಕ್ಷ ಕಾರ್ಮಿಕರಿದ್ದಾರೆ. ಈ ಕಾರ್ಮಿಕರಿಗೆ ಜೀವ ವಿಮೆ ಮಾಡಿಸುವುದು ಹಾಗೂ ಸ್ಮಾರ್ಟ್ ಕಾರ್ಡ್ ವಿತರಿಸಲು ಯೋಜನೆ ರೂಪಿಸಲಾಗುತ್ತಿದೆ. ಈಗಾಗಲೇ ನೋಂದಣಿಗೆ ಸಂಬಂಧಿಸಿದಂತೆ ಕಂದಾಯ ನಿರೀಕ್ಷಕರು, ಕಾರ್ಮಿಕ ನಿರೀಕ್ಷಕರು ಹಾಗೂ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಲಾಗಿದೆ’’ ಎಂದು ತಿಳಿಸಿದರು.

ನಕಲಿ ಅಂಕಪಟ್ಟಿ ಮೂಲ ಪತ್ತೆಗೆ ಕ್ರಮ: ‘ವಿಜಯನಗರ ಶ್ರೀಕೃಷ್ಣದೇವರಾಯ ವಿವಿ ವ್ಯಾಪ್ತಿಯಲ್ಲಿ ನಕಲಿ ಅಂಕಪಟ್ಟಿ ಮೂಲಕ ಪದವಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳ ಪ್ರವೇಶವನ್ನು ವಿವಿ ಆಡಳಿತ ರದ್ದುಪಡಿಸಿರುವುದು ತಮ್ಮ ಗಮನಕ್ಕಿದೆ. ಇಂತಹ ನಕಲಿ ಅಂಕಪಟ್ಟಿಗಳ ಮೂಲ ಪತ್ತೆಹಚ್ಚಲು ಸಮಗ್ರ ತನಿಖೆ ನಡೆಸಬೇಕು. ಆರೋಪಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಬೇಕು. ಆಗ ಮಾತ್ರ ಇಂತಹ ಘಟನೆಗಳು ಮರುಕಳಿಸುವುದಿಲ್ಲ. ಈ ಕುರಿತು ಉನ್ನತ ಶಿಕ್ಷಣ ಸಚಿವರೊಂದಿಗೆ ಚರ್ಚಿಸಲಾಗಿದೆ’’ ಎಂದು ಸಚಿವ ಸಂತೋಷ್ ಎಸ್.ಲಾಡ್ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ