ಆ್ಯಪ್ನಗರ

ನಿರಾಶ್ರಿತರಿಗೆ ತಕ್ಷ ಣ ಪರಿಹಾರ: ಸಿಎಂ ಬಿಎಸ್‌ವೈ

ರಾಜ್ಯದಲ್ಲಿ ಒಂದೆಡೆ ನೆರೆ, ಮತ್ತೊಂದೆಡೆ ಬರಗಾಲ ಆವರಿಸಿದ್ದು, ಉಭಯ ಸನ್ನಿವೇಶಗಳನ್ನು ನಿರ್ವಹಿಸಲು ಸರಕಾರ ಬದ್ಧವಾಗಿದೆ. ನಿರಾಶ್ರಿತರಿಗೆ ತಕ್ಷಣ ಪರಿಹಾರ ನೀಡಲಾಗುವುದು ಎಂದು ಸಿಎಂ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

Vijaya Karnataka 6 Aug 2019, 5:00 am
ಬಳ್ಳಾರಿ : ರಾಜ್ಯದಲ್ಲಿ ಒಂದೆಡೆ ನೆರೆ, ಮತ್ತೊಂದೆಡೆ ಬರಗಾಲ ಆವರಿಸಿದ್ದು, ಉಭಯ ಸನ್ನಿವೇಶಗಳನ್ನು ನಿರ್ವಹಿಸಲು ಸರಕಾರ ಬದ್ಧವಾಗಿದೆ. ನಿರಾಶ್ರಿತರಿಗೆ ತಕ್ಷಣ ಪರಿಹಾರ ನೀಡಲಾಗುವುದು ಎಂದು ಸಿಎಂ ಬಿ.ಎಸ್‌.ಯಡಿಯೂರಪ್ಪ ಹೇಳಿದರು.
Vijaya Karnataka Web solution for refugees cm bsy
ನಿರಾಶ್ರಿತರಿಗೆ ತಕ್ಷ ಣ ಪರಿಹಾರ: ಸಿಎಂ ಬಿಎಸ್‌ವೈ


ತೋರಣಗಲ್ಲು ಬಳಿಯ ಜಿಂದಾಲ್‌ ಏರ್‌ಸ್ಟ್ರಿಪ್‌ಗೆ ಸೋಮವಾರ ಆಗಮಿಸಿದ ಅವರು, ಸುದ್ದಿಗಾರರೊಂದಿಗೆ ಮಾತನಾಡಿದರು. ''ಬಳ್ಳಾರಿ, ಶಿವಮೊಗ್ಗ ಭಾಗದಲ್ಲಿ ಮಳೆ ಇಲ್ಲವಾಗಿದೆ. ರಾಜ್ಯದ ಉತ್ತರ ಕರ್ನಾಟಕ ಭಾಗದ ಹಲವೆಡೆ ಕೃಷ್ಣಾ ನದಿಯಿಂದ ಪ್ರವಾಹ ಉಂಟಾಗಿದೆ. ನಿರಾಶ್ರಿತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು. ನೆರೆಯಿಂದ ಇದುವರೆಗೆ ಯಾವುದೇ ರೀತಿಯ ಅನಾಹುತಗಳಾಗಿಲ್ಲ. ಅನಾಹುತ ತಡೆಯಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಮತ್ತು ಪರಿಹಾರ ತಂಡ ಹಾಗೂ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿದ್ದಾರೆ'' ಎಂದರು.

ಇದಕ್ಕೂ ಮುಂಚೆ ಅವರು, ನಾನಾ ಇಲಾಖೆಗಳ ಅಧಿಕಾರಿಗಳೊಂದಿಗೆ ಜಿಲ್ಲೆಯ ಬರ ಹಾಗೂ ಇತರ ಅಭಿವೃದ್ಧಿ ಕಾರ್ಯಗಳ ಸ್ಥಿತಿಗತಿ ಕುರಿತು ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಶಾಸಕ ಜಿ.ಸೋಮಶೇಖರ್‌ ರೆಡ್ಡಿ, ಜಿ.ಪಂ. ಅಧ್ಯಕ್ಷೆ ಭಾರತಿ ತಿಮ್ಮಾರೆಡ್ಡಿ, ಮಾಜಿ ಶಾಸಕ ಸುರೇಶ್‌ಬಾಬು, ಜಿಲ್ಲಾಧಿಕಾರಿ ಎಸ್‌.ಎಸ್‌.ನಕುಲ್‌, ಎಸ್ಪಿ ಸಿ.ಕೆ.ಬಾಬಾ, ಎಎಸ್ಪಿ ಲಾವಣ್ಯಹಾಗೂ ಇತರರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ